AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ವಿ ಲಸಿಕೆ ತೆಗೆದುಕೊಂಡವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಸಾವಿಗೀಡಾಗಿಲ್ಲ: ಆರ್​ಡಿಐಎಫ್ ಅಧ್ಯಯನ

ಮೊದಲ ಮತ್ತು ಎರಡನೇ ಹಂತದ ವೈದ್ಯಕೀಯ ಪರೀಕ್ಷೆಯಲ್ಲೂ ಸ್ಪುಟ್ನಿಕ್ ವಿ ಉತ್ತಮ ಫಲಿತಾಂಶವನ್ನು ನೀಡಿದ್ದು, ಮೂರನೇ ಹಂತದ ಪರೀಕ್ಷೆ ವೇಳೆಗೂ ಸ್ಪುಟ್ನಿಕ್​ ವಿ ಪಡೆದವರಲ್ಲಿ ಯಾವುದೇ ಸಾವು ಸಂಭವಿಸದೇ ಇರುವುದು ಹಾಗೂ ಯಾರೂ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗದೇ ಇರುವುದು ಗೊತ್ತಾಗಿದೆ.

ಸ್ಪುಟ್ನಿಕ್​ ವಿ ಲಸಿಕೆ ತೆಗೆದುಕೊಂಡವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಸಾವಿಗೀಡಾಗಿಲ್ಲ: ಆರ್​ಡಿಐಎಫ್ ಅಧ್ಯಯನ
ಸ್ಪುಟ್ನಿಕ್​ ವಿ ಲಸಿಕೆ
TV9 Web
| Edited By: |

Updated on: Jul 12, 2021 | 12:10 PM

Share

ದೆಹಲಿ: ರಷ್ಯಾ ಮೂಲದ ಕೊರೊನಾ ಲಸಿಕೆ ಸ್ಪುಟ್ನಿಕ್​ ವಿ ಸಾಮರ್ಥ್ಯದ ಬಗ್ಗೆ ಅದರ ಹೂಡಿಕೆದಾರ ಸಂಸ್ಥೆ ದಿ ರಷ್ಯನ್ ಡೈರೆಕ್ಟ್​ ಇನ್​ವೆಸ್ಟ್​ಮೆಂಟ್ ಫಂಡ್ (ಆರ್​ಡಿಐಎಫ್) ಅತ್ಯಂತ ಆಶಾದಾಯಕ ಮಾತುಗಳನ್ನಾಡಿದೆ. ಸ್ಯಾನ್​ ಮೆರಿನೋ ಪ್ರದೇಶದಲ್ಲಿ ಮಾರ್ಚ್​ 4ರಿಂದ ಜೂನ್ 8ರ ತನಕ ನಡೆಸಲಾದ ಅಧ್ಯಯನದಲ್ಲಿ ಸ್ಪುಟ್ನಿಕ್​ ಲಸಿಕೆ ತೆಗೆದುಕೊಂಡವರಲ್ಲಿ ಯಾರೂ ಆಸ್ಪತ್ರೆಗೆ ದಾಖಲಾಗದೇ ಕೊರೊನಾ ವಿರುದ್ಧ ಸಶಕ್ತರಾಗಿ ಹೋರಾಡಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದ ವರದಿಯನ್ನು ಲ್ಯಾನ್ಸೆಟ್ ವತಿಯಿಂದ ಪ್ರಕಟಿಸಲಾಗಿದ್ದು, 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಪರಿಣಾಮಕಾರಿಯಾಗಿದೆ ಎಂದು ತಿಳಿದುಬಂದಿದೆ.

ಸ್ಯಾನ್​ ಮೆರಿನೋದಲ್ಲಿ ನಡೆಸಲಾದ ಈ ಅಧ್ಯಯನದಲ್ಲಿ ಮಾರ್ಚ್ 4ರಿಂದ ಜೂನ್ 8ರ ತನಕ ಒಂದು ಅಥವಾ ಎರಡು ಡೋಸ್ ಸ್ಪುಟ್ನಿಕ್ ವಿ ಲಸಿಕೆ ಪಡೆದವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ಪ್ರಕಾರ ಬೇರೆ ಲಸಿಕೆಗಳಿಗೆ ಹೋಲಿಸಿದರೆ 60 ವರ್ಷ ಮೇಲ್ಪಟ್ಟವರಲ್ಲಿ ಸ್ಪುಟ್ನಿಕ್​ ವಿ ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು, ಎರಡು ಡೋಸ್​ಗಳನ್ನು ಪಡೆದವರಿಗೆ ಉತ್ತಮ ರಕ್ಷಣೆ ನೀಡುವ ಸಾಮರ್ಥ್ಯ ಹೊಂದಿದೆ ಎನ್ನುವುದು ತಿಳಿದುಬಂದಿದೆ.

ಮೊದಲ ಮತ್ತು ಎರಡನೇ ಹಂತದ ವೈದ್ಯಕೀಯ ಪರೀಕ್ಷೆಯಲ್ಲೂ ಸ್ಪುಟ್ನಿಕ್ ವಿ ಉತ್ತಮ ಫಲಿತಾಂಶವನ್ನು ನೀಡಿದ್ದು, ಮೂರನೇ ಹಂತದ ಪರೀಕ್ಷೆ ವೇಳೆಗೂ ಸ್ಪುಟ್ನಿಕ್​ ವಿ ಪಡೆದವರಲ್ಲಿ ಯಾವುದೇ ಸಾವು ಸಂಭವಿಸದೇ ಇರುವುದು ಹಾಗೂ ಯಾರೂ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗದೇ ಇರುವುದು ಗೊತ್ತಾಗಿದೆ.

ಈ ಹಿಂದೆ ಲ್ಯಾನ್ಸೆಟ್​ ಪ್ರಕಟಿಸಿದ ವರದಿ ಪ್ರಕಾರ ಸ್ಪುಟ್ನಿಕ್​ ವಿ ಲಸಿಕೆ ಶೇ.91.6ರಷ್ಟು ಪರಿಣಾಮಕಾರಿಯಾಗಿದ್ದು, ಡೆಲ್ಟಾ ವೈರಾಣುವಿನಿಂದಲೂ ರಕ್ಷಣೆ ಕೊಡುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿತ್ತು. ಅದೇ ವಿಚಾರದ ಬಗ್ಗೆ ವರದಿ ನೀಡಿದ್ದ ಆರ್​ಡಿಐಎಫ್ ಸ್ಪುಟ್ನಿಕ್​ ವಿ ಲಸಿಕೆ ಶೇ.97.6ರಷ್ಟು ಪರಿಣಾಮಕಾರಿ ಎಂದು ತಿಳಿಸಿತ್ತು. ಸದ್ಯ ಬೇರೆಲ್ಲಾ ಲಸಿಕೆಗಳಿಗೆ ಹೋಲಿಸಿದಲ್ಲಿ ಸ್ಪುಟ್ನಿಕ್ ವಿ ಲಸಿಕೆಯ ಕಾರ್ಯಕ್ಷಮತೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Sputnik V: ಕೋವಿಶೀಲ್ಡ್​, ಕೋವಾಕ್ಸಿನ್​ ನಂತರ ಮತ್ತೊಂದು ಕೊರೊನಾ ಲಸಿಕೆ, ಸ್ಪುಟ್ನಿಕ್​ ವಿ ಬೆಂಗಳೂರಿ​ನಲ್ಲಿ ಲಭ್ಯ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ