AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ

ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪ್ರಾಯೋಗಿಕ ಯೋಜನೆಯ ಭಾಗವಾಗಿ ತಕ್ಷಣವೇ ಜಾರಿಗೆ ಬರುವಂತೆ ಚೀನಾ, ರಷ್ಯಾ, ಭಾರತ, ಥೈಲ್ಯಾಂಡ್, ಮಲೇಷ್ಯಾ, ಜಪಾನ್ ಮತ್ತು ಇಂಡೋನೇಷ್ಯಾ ಸೇರಿ ಏಳು ದೇಶಗಳ ಪ್ರಯಾಣಿಕರಿಗೆ ಉಚಿತ ವೀಸಾ ನೀಡುವ ಪ್ರಸ್ತಾಪವನ್ನು ಶ್ರೀಲಂಕಾ ಕ್ಯಾಬಿನೆಟ್ ಅನುಮೋದಿಸಿದೆ.

ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ
ಪ್ರಯಾಣಿಕರು-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Oct 24, 2023 | 10:27 AM

ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಶ್ರೀಲಂಕಾ(Srilanka) ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪ್ರಾಯೋಗಿಕ ಯೋಜನೆಯ ಭಾಗವಾಗಿ ತಕ್ಷಣವೇ ಜಾರಿಗೆ ಬರುವಂತೆ ಚೀನಾ, ರಷ್ಯಾ, ಭಾರತ, ಥೈಲ್ಯಾಂಡ್, ಮಲೇಷ್ಯಾ, ಜಪಾನ್ ಮತ್ತು ಇಂಡೋನೇಷ್ಯಾ ಸೇರಿ ಏಳು ದೇಶಗಳ ಪ್ರಯಾಣಿಕರಿಗೆ ಉಚಿತ ವೀಸಾ ನೀಡುವ ಪ್ರಸ್ತಾಪವನ್ನು ಶ್ರೀಲಂಕಾ ಕ್ಯಾಬಿನೆಟ್ ಅನುಮೋದಿಸಿದೆ.

ಶ್ರೀಲಂಕಾದ ವಿದೇಶಾಂಗ ವ್ಯವಹಾರಗಳ ಸಚಿವ ಅಲಿ ಸಬ್ರಿ ಮಾಹಿತಿ ನೀಡಿದ್ದು, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ಗೆ ಉಚಿತ ವೀಸಾಗಳನ್ನು ಮಾರ್ಚ್ 31 ರವರೆಗೆ ಪ್ರಾಯೋಗಿಕ ಯೋಜನೆಯಾಗಿ ತಕ್ಷಣವೇ ಜಾರಿಗೆ ತರಲು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ ಸಚಿವಾಲಯವು ಹಿಂದಿನ ಕ್ಯಾಬಿನೆಟ್ ಸಭೆಯಲ್ಲಿ ಉಚಿತ ವೀಸಾ ಪ್ರಸ್ತಾಪವನ್ನು ಪ್ರಸ್ತಾಪಿಸಿತ್ತು. ಉಚಿತ ವೀಸಾಗಳನ್ನು ನೀಡುವುದರಿಂದ ಮುಂಬರುವ ವರ್ಷಗಳಲ್ಲಿ ಪ್ರವಾಸಿಗರ ಆಗಮನವನ್ನು ಐದು ಮಿಲಿಯನ್‌ಗೆ ಹೆಚ್ಚಿಸುವ ನಿರೀಕ್ಷೆಯಿದೆ.

ಮತ್ತಷ್ಟು ಓದಿ: ಬ್ರಿಟನ್​ನ ವಿವಿಧ ವೀಸಾ ದರಗಳಲ್ಲಿ ಹೆಚ್ಚಳ; ಇಂಗ್ಲೆಂಡ್ ಪ್ರಯಾಣ ಇನ್ನು ದುಬಾರಿ

ಭಾರತವು ಶ್ರೀಲಂಕಾಕ್ಕೆ ಅತಿದೊಡ್ಡ ಮೂಲ ಮಾರುಕಟ್ಟೆಯಾಗಿದೆ ಮತ್ತು ಪ್ರವಾಸೋದ್ಯಮ ಸಚಿವಾಲಯದ ಮಾರುಕಟ್ಟೆ ಮತ್ತು ಸಂವಹನ ಕಾರ್ಯತಂತ್ರದ ಪ್ರಮುಖ ಕೇಂದ್ರವಾಗಿದೆ.

ಚೀನಾ ಪ್ರವಾಸಿಗರು ಭೇಟಿ ನೀಡಲು ಚೀನಾ ಅನುಮೋದಿಸಿದ 20 ದೇಶಗಳಲ್ಲಿ ಶ್ರೀಲಂಕಾ ಕೂಡ ಒಂದಾಗಿರುವುದರಿಂದ ಶ್ರೀಲಂಕಾಕ್ಕೆ ಚೀನಾ ಪ್ರವಾಸಿಗರ ಆಗಮನವೂ ಹೆಚ್ಚಲಿದೆ ಎನ್ನಲಾಗಿದೆ. ಶ್ರೀಲಂಕಾ ಸರ್ಕಾರವು ದೇಶದ ಹೆಚ್ಚಿನ ಪ್ರವಾಸಿ ತಾಣಗಳಿಗೆ ಇ-ಟಿಕೆಟಿಂಗ್ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ