AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka crisis ಜನರಿಗಾಗಿ ಯಾವುದೇ ರೀತಿಯ ತ್ಯಾಗ ಮಾಡಲು ಸಿದ್ಧ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ

. "ಜನರಿಗಾಗಿ ನಾನು ಯಾವುದೇ ತ್ಯಾಗ ಮಾಡಲು ಸಿದ್ಧನಿದ್ದೇನೆ " ಎಂದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಬೆಂಬಲಿಗರಿಗೆ ಹೇಳಿರುವುದನ್ನು ಉಲ್ಲೇಖಿಸಿ ದೇಶದ ಪ್ರಮುಖ ಸುದ್ದಿಜಾಲ ಲಂಕಾ ಫಸ್ಟ್  ವರದಿ ಮಾಡಿದೆ.

Sri Lanka crisis ಜನರಿಗಾಗಿ ಯಾವುದೇ ರೀತಿಯ ತ್ಯಾಗ ಮಾಡಲು ಸಿದ್ಧ: ಶ್ರೀಲಂಕಾ ಪ್ರಧಾನಿ  ಮಹಿಂದಾ ರಾಜಪಕ್ಸೆ
ಮಹಿಂದ ರಾಜಪಕ್ಸೆ
TV9 Web
| Edited By: |

Updated on:May 09, 2022 | 3:21 PM

Share

ಕೊಲಂಬೊ: ದೇಶ ಎದುರಿಸುತ್ತಿರುವ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ತನ್ನ ಕಿರಿಯ ಸಹೋದರ ಮತ್ತು ಅಧ್ಯಕ್ಷ ಗೋಟಾಬಯ ರಾಜಪಕ್ಸೆ (Gotabaya Rajapaksa)  ನೇತೃತ್ವದ ಮಧ್ಯಂತರ ಸರ್ಕಾರವನ್ನು ರಚಿಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಶ್ರೀಲಂಕಾದ ಪ್ರಧಾನಿ ಕೆಳಗಿಳಿಯಲು ಮುಂದಾಗಬಹುದು ಎಂದು ವರದಿಗಳು ಹೇಳುತ್ತಿವೆ. ಏತನ್ಮಧ್ಯೆ ಜನರಿಗಾಗಿ “ಯಾವುದೇ ತ್ಯಾಗ” ಮಾಡಲು ಸಿದ್ಧ ಎಂದು ಮಹಿಂದಾ ರಾಜಪಕ್ಸೆ (Mahinda Rajapaksa) ಅವರು ಸೋಮವಾರ ಹೇಳಿದ್ದಾರೆ. 76ರ ಹರೆಯದ ರಾಜಪಕ್ಸೆ ತಮ್ಮ ಸ್ವಂತ ಶ್ರೀಲಂಕಾ ಪೊದುಜನ ಪೆರಮುನಾ (SLPP) ರಂಗದಿಂದ ರಾಜೀನಾಮೆ ನೀಡುವಂತೆ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇದನ್ನು ನಿಭಾಯಿಸಲು ಅವರು ತಮ್ಮ ಬೆಂಬಲಿಗರನ್ನು ಒಟ್ಟುಗೂಡಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಅವರ ಕಿರಿಯ ಸಹೋದರ, ಅಧ್ಯಕ್ಷ ಗೊಟಬಯ ರಾಜಪಕ್ಸೆ, ಮಹಿಂದ ರಾಜಪಕ್ಸೆ ಅವರ  ರಾಜೀನಾಮೆ ಬಯಸಿದ್ದರೂ ಅವರ ಆಶಯವನ್ನು ನೇರವಾಗಿ ತಿಳಿಸಿರಲಿಲ್ಲ. ರಾಷ್ಟ್ರೀಯ ಏಕತೆಯ ಸರ್ಕಾರಕ್ಕಾಗಿ ಪ್ರಧಾನಿ ರಾಜೀನಾಮೆ ಕೊಡಬೇಕೆಂದು ಅಧ್ಯಕ್ಷರು ಬಯಸುತ್ತಾರೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವವರೆಗೆ ಮಧ್ಯಂತರ ವ್ಯವಸ್ಥೆ ಆಗಿದೆ ಎಂದು ಮೂಲಗಳು ತಿಳಿಸಿವೆ. “ಜನರಿಗಾಗಿ ನಾನು ಯಾವುದೇ ತ್ಯಾಗ ಮಾಡಲು ಸಿದ್ಧನಿದ್ದೇನೆ ” ಎಂದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಬೆಂಬಲಿಗರಿಗೆ ಹೇಳಿರುವುದನ್ನು ಉಲ್ಲೇಖಿಸಿ ದೇಶದ ಪ್ರಮುಖ ಸುದ್ದಿಜಾಲ ಲಂಕಾ ಫಸ್ಟ್  ವರದಿ ಮಾಡಿದೆ.

ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್‌ನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮಹಿಂದಾ ರಾಜಪಕ್ಸೆ ಈ ಹೇಳಿಕೆಗಳನ್ನು ನೀಡಿದ್ದು ಅಧಿಕಾರದಿಂದ ಕೆಳಗಿಳಿಯದಂತೆ ಶ್ರೀಲಂಕಾ ಪೊದುಜನ ಪೆರಮುನಾ ಪಕ್ಷದ ಸದಸ್ಯರು ಮನವಿ ಮಾಡಿದ್ದಾರೆ. “ಅವರು ನೇರ ರಾಜೀನಾಮೆ ನೀಡದಿರಬಹುದು” ಎಂದು ಆಡಳಿತ ಸಮ್ಮಿಶ್ರ ಭಿನ್ನಮತೀಯ ದಯಾಸಿರಿ ಜಯಶೇಖರ ಪಿಟಿಐಗೆ ತಿಳಿಸಿದರು.

ಪ್ರಸ್ತುತ ಬಿಕ್ಕಟ್ಟಿನಲ್ಲಿ ನನಗೆ ಯಾವುದೇ ಜವಾಬ್ದಾರಿ ಇಲ್ಲ ಎಂದು ಅವರು ಹೇಳಬಹುದು. ಆದ್ದರಿಂದ ನಾನು ರಾಜೀನಾಮೆ ನೀಡಲು ಯಾವುದೇ ಕಾರಣಗಳಿಲ್ಲ, ನೀವು ಬಯಸಿದರೆ ನನ್ನನ್ನು ವಜಾ ಮಾಡಿ ಎಂದು ಅವರು ಗೋಟಾಬಯ ರಾಜಪಕ್ಸೆ ಅವರ ಅಂಗಳದಲ್ಲಿ ಚೆಂಡನ್ನು ಹಾಕುತ್ತಾರೆ ಎಂದು ನನಗನಿಸುತ್ತಿದೆ ಎಂದು ಜಯಶೇಖರ ಹೇಳಿದರು. ಹೆಚ್ಚುತ್ತಿರುವ ಒತ್ತಡದ ಹೊರತಾಗಿಯೂ ಗೊಟಾಬಯ, ಪ್ರಧಾನ ಮಂತ್ರಿ ಮಹಿಂದಾ ಅವರು ಅಧಿಕಾರವನ್ನು ತೊರೆಯಲು ನಿರಾಕರಿಸಿದ್ದಾರೆ.

ಇದನ್ನೂ ಓದಿ
Image
ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ, ನೇಪಾಳ, ಪಾಕಿಸ್ತಾನದಲ್ಲಿ ವಿದೇಶಿ ಮೀಸಲು ನಿಧಿ ಕುಸಿತ: ಭಾರತದ ಸುತ್ತಲ ದೇಶಗಳಲ್ಲಿ ತಲ್ಲಣ

ಮಹಿಂದಾ ರಾಜಪಕ್ಸೆ ಅವರು ಭಾನುವಾರದಂದು ಪವಿತ್ರ ನಗರವಾದ ಅನುರಾಧಪುರಕ್ಕೆ ಭೇಟಿ ನೀಡಿದಾಗ , ಇಂಧನ, ಅಡುಗೆ ಅನಿಲ ಮತ್ತು ವಿದ್ಯುತ್ ಕಡಿತವನ್ನು ನಿಲ್ಲಿಸುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಇಡೀ ರಾಜಪಕ್ಸೆ ಕುಟುಂಬ ರಾಜಕೀಯ ತ್ಯಜಿಸಬೇಕು ಮತ್ತು ದೇಶದ ಕದ್ದ ಆಸ್ತಿಯನ್ನು ಹಿಂದಿರುಗಿಸಬೇಕೆಂದು ಪ್ರತಿಭಟನಾಕಾರರು ಬಯಸುತ್ತಾರೆ.

ಪ್ರಬಲ ಬೌದ್ಧ ಪಾದ್ರಿಗಳು ಸಹ ಮಧ್ಯಂತರ ಸರ್ಕಾರಕ್ಕೆ ದಾರಿ ಮಾಡಿಕೊಡಲು ಪ್ರಧಾನಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಒತ್ತಡ ಹೇರಿದ್ದರು. ದೇಶದಲ್ಲಿ ಈಗ ತುರ್ತು ಪರಿಸ್ಥಿತಿಯಲ್ಲಿರುವ ರಾಜಕೀಯ ಅನಿಶ್ಚಿತತೆಯ ಮಧ್ಯೆ, ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ತನ್ನ ನಾಯಕ ಸಜಿತ್ ಪ್ರೇಮದಾಸ ಅವರಿಗೆ ಅಧ್ಯಕ್ಷ ಗೊಟಾಬಯ ನೀಡಿದ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಶ್ರೀಲಂಕಾದ ಪ್ರಮುಖ ಪ್ರತಿಪಕ್ಷ ಎಸ್​​ಜೆಬಿ ಭಾನುವಾರ ಹೇಳಿದೆ.

ಭಿನ್ನಮತೀಯ ಗುಂಪಿನ 11 ಪಕ್ಷಗಳ ಮೈತ್ರಿಯು ಬಿಕ್ಕಟ್ಟನ್ನು ಕೊನೆಗೊಳಿಸುವ ಮಾರ್ಗಗಳ ಕುರಿತು ಸೋಮವಾರ ಹೆಚ್ಚಿನ ಮಾತುಕತೆ ನಡೆಸಲಿದೆ ಎಂದು ಜಯಶೇಖರ ಹೇಳಿದರು. ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದರೆ ಮಧ್ಯಂತರ ಸರ್ಕಾರ ರಚನೆಯಾಗುವ ನಿರೀಕ್ಷೆಯಲ್ಲಿದ್ದಾರೆ ಇವರು. ಪೆಟ್ರೋಲ್ ಮತ್ತು ಗ್ಯಾಸ್ ಪಡೆಯಲು ಸರತಿ ಸಾಲುಗಳು ಹೆಚ್ಚಾದಂತೆ ಸಾರ್ವಜನಿಕ ಪ್ರತಿಭಟನೆಗಳು ಪ್ರತಿದಿನವೂ ಆವೇಗವನ್ನು ಪಡೆಯುತ್ತಿವೆ.

ವಿದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:03 pm, Mon, 9 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ