AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್​​ಗಾಗಿ ಸರದಿ ಸಾಲಿನಲ್ಲಿ ನಿಂತಿರುವ ಜನರಿಗೆ ಟೀ, ಬನ್ ನೀಡಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ

ವಾರ್ಡ್ ಪ್ಲೇಸ್ ಮತ್ತು ವಿಜೆರಾಮ ಮಾವತಾ ಸುತ್ತಲಿನ ಪೆಟ್ರೋಲ್ ಬಂಕ್ ಮುಂದಿ ಸರದಿಯಲ್ಲಿದ್ದ ಜನರಿಗೆ ಕಮ್ಯೂನಿಟಿ ಮೀಲ್ ಶೇರ್ ತಂಡದೊಂದಿಗೆ ಟೀ ಮತ್ತು ಬನ್‌ಗಳನ್ನು ಇಂದು ಸಂಜೆ ಬಡಿಸಿದೆವು...

ಪೆಟ್ರೋಲ್​​ಗಾಗಿ ಸರದಿ ಸಾಲಿನಲ್ಲಿ ನಿಂತಿರುವ ಜನರಿಗೆ ಟೀ, ಬನ್ ನೀಡಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ
ರೋಷನ್ ಮಹಾನಾಮ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 19, 2022 | 7:12 PM

Share

ದೆಹಲಿ: ಶ್ರೀಲಂಕಾವು (Srilanka) ಆಹಾರ, ಇಂಧನ, ಔಷಧಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿರುವಾಗ ಮಾಜಿ ಕ್ರಿಕೆಟಿಗ ರೋಷನ್ ಮಹಾನಾಮ (Roshan Mahanama) ಅವರು ಕೊಲಂಬೊದ ಪೆಟ್ರೋಲ್ ಬಂಕ್‌ನಲ್ಲಿ (Petrol Bunk) ಉದ್ದನೆಯ ಸರದಿ ಸಾಲಿನಲ್ಲಿ ಕಾಯುತ್ತಿರುವವರಿಗೆ ಚಹಾ ಮತ್ತು ಬನ್ ನೀಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಶ್ರೀಲಂಕಾ ಸ್ವಾತಂತ್ರ್ಯದ ನಂತರದ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದ್ದು, ದೇಶಕ್ಕೆ ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಡಾಲರ್‌ಗಳನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ. “ವಾರ್ಡ್ ಪ್ಲೇಸ್ ಮತ್ತು ವಿಜೆರಾಮ ಮಾವತಾ ಸುತ್ತಲಿನ ಪೆಟ್ರೋಲ್ ಬಂಕ್ ಮುಂದಿ ಸರದಿಯಲ್ಲಿದ್ದ ಜನರಿಗೆ ಕಮ್ಯೂನಿಟಿ ಮೀಲ್ ಶೇರ್ ತಂಡದೊಂದಿಗೆ ಟೀ ಮತ್ತು ಬನ್‌ಗಳನ್ನು ಇಂದು ಸಂಜೆ ಬಡಿಸಿದೆವು. “ಸರದಿ ಸಾಲುಗಳು ದಿನದಿಂದ ದಿನಕ್ಕೆ ಉದ್ದವಾಗುತ್ತಿವೆ. ಸರದಿಯಲ್ಲಿ ನಿಂತುಕೊಂಡಿರುವ ಜನರಿಗೆ ಅನೇಕ ಆರೋಗ್ಯ ತೊಂದರೆಗಳೂ ಇವೆ” ಎಂದು ಮಾಜಿ ಕ್ರಿಕೆಟಿಗ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂಧನ ಕೇಂದ್ರಗಳ ಕಾವಲಿಗಾಗಿ ಶ್ರೀಲಂಕಾ ಸಶಸ್ತ್ರ ಪೋಲೀಸ್ ಮತ್ತು ಪಡೆಗಳನ್ನು ನಿಯೋಜಿಸಿದೆ. ಪ್ರಯಾಣವನ್ನು ಕಡಿಮೆ ಮಾಡಲು ಮತ್ತು ಬಡ ರಾಷ್ಟ್ರದಲ್ಲಿ ಖಾಲಿಯಾಗುತ್ತಿರುವ ಇಂಧನ ದಾಸ್ತಾನುಗಳನ್ನು ಸಂರಕ್ಷಿಸುವ ಪ್ರಯತ್ನದಲ್ಲಿ ಸರ್ಕಾರವು ಎರಡು ವಾರಗಳ ಕಾಲ ರಾಜ್ಯ ಸಂಸ್ಥೆಗಳು ಮತ್ತು ಶಾಲೆಗಳನ್ನು ಸ್ಥಗಿತಗೊಳಿಸಿತು.

ದಯವಿಟ್ಟು, ಇಂಧನ ಸರದಿ ಸಾಲಿನಲ್ಲಿ ಪರಸ್ಪರ ನೋಡಿಕೊಳ್ಳಿ. ಸಾಕಷ್ಟು ದ್ರವ ಮತ್ತು ಆಹಾರವನ್ನು ತನ್ನಿ ಮತ್ತು ನಿಮಗೆ ಆರೋಗ್ಯ ಸಮಸ್ಯೆಯಾದರೆ ದಯವಿಟ್ಟು ನಿಮ್ಮ ಪಕ್ಕದಲ್ಲಿರುವ ಹತ್ತಿರದ ವ್ಯಕ್ತಿಯನ್ನು ಸಂಪರ್ಕಿಸಿ ಮತ್ತು ಬೆಂಬಲವನ್ನು ಕೇಳಿ ಅಥವಾ 1990 ಗೆ ಕರೆ ಮಾಡಿ. ಈ ಕಷ್ಟದ ಸಮಯದಲ್ಲಿ ನಾವು ಒಬ್ಬರನ್ನೊಬ್ಬರು ನೋಡಿಕೊಳ್ಳಬೇಕು, ”ಎಂದು ಕ್ರಿಕೆಟಿಗ ಒತ್ತಾಯಿಸಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sun, 19 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ