AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​
ಮರು ಉದ್ಘಾಟನೆ ಸಿದ್ಧತೆ
TV9 Web
| Edited By: |

Updated on:Mar 27, 2022 | 6:56 PM

Share

ಕೊಲಂಬೊ: ಶ್ರೀಲಂಕಾದ (Sri Lanka) ಹಳೇ ಮತ್ತು ಮೊದಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತೊಮ್ಮೆ ಮರು ಉದ್ಘಾಟನೆ ಮಾಡಲಾಯಿತು. ಬರೋಬ್ಬರಿ 54 ವರ್ಷಗಳ ನಂತರ ಇಲ್ಲಿ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಮೂಲಕ, ಈ ವಿಮಾನ ನಿಲ್ದಾಣ ಮತ್ತೊಮ್ಮೆ ಕಾರ್ಯಾಚರಣೆ ಶುರುಮಾಡಿದೆ. ಅಂದಹಾಗೇ ಇದೀಗ ಮರು ಉದ್ಘಾಟನೆಗೊಂಡ ವಿಮಾನ ರತ್ಮಲಾನಾ ಅಂತಾರಾಷ್ಟ್ರೀಯ ಏರ್​ಪೋರ್ಟ್ (Ratmalana International Airport). ಇಂದು ಮಾಲ್ಡೀವ್ಸ್​​ನಿಂದ ಬಂದ ವಿಮಾನ ಇಲ್ಲಿ ಲ್ಯಾಂಡ್ ಆಯಿತು.

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಅಧಿಕಾರಿಗಳು ತಿಳಿಸಿದ್ದಾರೆ.  ಈ ರತ್ಮಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶ್ರೀಲಂಕಾದ ಮೊದಲ ಮತ್ತು ಹಳೇ ವಿಮಾನ ನಿಲ್ದಾಣ. ಆದರೆ ಸುಮಾರು 1960ರ ಹೊತ್ತಿಗೆ ಕಟುನಾಯಕೆ ಎಂಬಲ್ಲಿ ಬಂದಾರಾನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಇದು ದೇಶೀಯ ನಿಲ್ದಾಣವಾಗಿ ಬದಲಾಗಿತ್ತು.

ರತ್ಮಲಾನಾ ಏರ್​ಪೋರ್ಟ್​​ನ್ನು 1938ರಲ್ಲಿ ನಿರ್ಮಾಣ ಮಾಡಲಾಗಿದೆ. ಆಗ ಇಡೀ ಶ್ರೀಲಂಕಾದಲ್ಲಿದ್ದ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿತ್ತು. ಇನ್ನು ಮುಂದೆ ಕೂಡ ಬಂದಾರಾನಾಯಕೆ ಏರ್​ಪೋರ್ಟ್​​ ಮುಖ್ಯ ಏರ್​ಪೋರ್ಟ್​ ಆಗಿರಲಿದ್ದು, ರತ್ಮಲಾನಾ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮುಂದುವರಿಯಲಿದೆ.

ಇದನ್ನೂ ಓದಿ: ತುಮಕೂರು: ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಮುಖಂಡರಿಂದ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ

Published On - 6:52 pm, Sun, 27 March 22

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ