AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​
ಮರು ಉದ್ಘಾಟನೆ ಸಿದ್ಧತೆ
TV9 Web
| Edited By: |

Updated on:Mar 27, 2022 | 6:56 PM

Share

ಕೊಲಂಬೊ: ಶ್ರೀಲಂಕಾದ (Sri Lanka) ಹಳೇ ಮತ್ತು ಮೊದಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತೊಮ್ಮೆ ಮರು ಉದ್ಘಾಟನೆ ಮಾಡಲಾಯಿತು. ಬರೋಬ್ಬರಿ 54 ವರ್ಷಗಳ ನಂತರ ಇಲ್ಲಿ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಮೂಲಕ, ಈ ವಿಮಾನ ನಿಲ್ದಾಣ ಮತ್ತೊಮ್ಮೆ ಕಾರ್ಯಾಚರಣೆ ಶುರುಮಾಡಿದೆ. ಅಂದಹಾಗೇ ಇದೀಗ ಮರು ಉದ್ಘಾಟನೆಗೊಂಡ ವಿಮಾನ ರತ್ಮಲಾನಾ ಅಂತಾರಾಷ್ಟ್ರೀಯ ಏರ್​ಪೋರ್ಟ್ (Ratmalana International Airport). ಇಂದು ಮಾಲ್ಡೀವ್ಸ್​​ನಿಂದ ಬಂದ ವಿಮಾನ ಇಲ್ಲಿ ಲ್ಯಾಂಡ್ ಆಯಿತು.

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಅಧಿಕಾರಿಗಳು ತಿಳಿಸಿದ್ದಾರೆ.  ಈ ರತ್ಮಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶ್ರೀಲಂಕಾದ ಮೊದಲ ಮತ್ತು ಹಳೇ ವಿಮಾನ ನಿಲ್ದಾಣ. ಆದರೆ ಸುಮಾರು 1960ರ ಹೊತ್ತಿಗೆ ಕಟುನಾಯಕೆ ಎಂಬಲ್ಲಿ ಬಂದಾರಾನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಇದು ದೇಶೀಯ ನಿಲ್ದಾಣವಾಗಿ ಬದಲಾಗಿತ್ತು.

ರತ್ಮಲಾನಾ ಏರ್​ಪೋರ್ಟ್​​ನ್ನು 1938ರಲ್ಲಿ ನಿರ್ಮಾಣ ಮಾಡಲಾಗಿದೆ. ಆಗ ಇಡೀ ಶ್ರೀಲಂಕಾದಲ್ಲಿದ್ದ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿತ್ತು. ಇನ್ನು ಮುಂದೆ ಕೂಡ ಬಂದಾರಾನಾಯಕೆ ಏರ್​ಪೋರ್ಟ್​​ ಮುಖ್ಯ ಏರ್​ಪೋರ್ಟ್​ ಆಗಿರಲಿದ್ದು, ರತ್ಮಲಾನಾ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮುಂದುವರಿಯಲಿದೆ.

ಇದನ್ನೂ ಓದಿ: ತುಮಕೂರು: ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಮುಖಂಡರಿಂದ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ

Published On - 6:52 pm, Sun, 27 March 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್