AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​
ಮರು ಉದ್ಘಾಟನೆ ಸಿದ್ಧತೆ
TV9 Web
| Updated By: Lakshmi Hegde|

Updated on:Mar 27, 2022 | 6:56 PM

Share

ಕೊಲಂಬೊ: ಶ್ರೀಲಂಕಾದ (Sri Lanka) ಹಳೇ ಮತ್ತು ಮೊದಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತೊಮ್ಮೆ ಮರು ಉದ್ಘಾಟನೆ ಮಾಡಲಾಯಿತು. ಬರೋಬ್ಬರಿ 54 ವರ್ಷಗಳ ನಂತರ ಇಲ್ಲಿ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಮೂಲಕ, ಈ ವಿಮಾನ ನಿಲ್ದಾಣ ಮತ್ತೊಮ್ಮೆ ಕಾರ್ಯಾಚರಣೆ ಶುರುಮಾಡಿದೆ. ಅಂದಹಾಗೇ ಇದೀಗ ಮರು ಉದ್ಘಾಟನೆಗೊಂಡ ವಿಮಾನ ರತ್ಮಲಾನಾ ಅಂತಾರಾಷ್ಟ್ರೀಯ ಏರ್​ಪೋರ್ಟ್ (Ratmalana International Airport). ಇಂದು ಮಾಲ್ಡೀವ್ಸ್​​ನಿಂದ ಬಂದ ವಿಮಾನ ಇಲ್ಲಿ ಲ್ಯಾಂಡ್ ಆಯಿತು.

ಸದ್ಯ ವಾರದಲ್ಲಿ ಮೂರು ಮಾಲ್ಡೀವ್​ ವಿಮಾನ ಇಲ್ಲಿಂದ ಹಾರಾಡಲಿದೆ. ಇವು 50 ಆಸನಗಳನ್ನೊಳಗೊಂಡ ಫ್ಲೈಟ್​​ಗಳು. ಇನ್ನು ಕೆಲವೇ ದಿನಗಳಲ್ಲಿ ವಿಮಾನಗಳ ಸಂಖ್ಯೆಯನ್ನು 5ಕ್ಕೆ ಏರಿಸಲಾಗುವುದು ಎಂದೂ ಸ್ಥಳೀಯ ವಾಯುಯಾನ ಅಧಿಕಾರಿಗಳು ತಿಳಿಸಿದ್ದಾರೆ.  ಈ ರತ್ಮಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶ್ರೀಲಂಕಾದ ಮೊದಲ ಮತ್ತು ಹಳೇ ವಿಮಾನ ನಿಲ್ದಾಣ. ಆದರೆ ಸುಮಾರು 1960ರ ಹೊತ್ತಿಗೆ ಕಟುನಾಯಕೆ ಎಂಬಲ್ಲಿ ಬಂದಾರಾನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಇದು ದೇಶೀಯ ನಿಲ್ದಾಣವಾಗಿ ಬದಲಾಗಿತ್ತು.

ರತ್ಮಲಾನಾ ಏರ್​ಪೋರ್ಟ್​​ನ್ನು 1938ರಲ್ಲಿ ನಿರ್ಮಾಣ ಮಾಡಲಾಗಿದೆ. ಆಗ ಇಡೀ ಶ್ರೀಲಂಕಾದಲ್ಲಿದ್ದ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿತ್ತು. ಇನ್ನು ಮುಂದೆ ಕೂಡ ಬಂದಾರಾನಾಯಕೆ ಏರ್​ಪೋರ್ಟ್​​ ಮುಖ್ಯ ಏರ್​ಪೋರ್ಟ್​ ಆಗಿರಲಿದ್ದು, ರತ್ಮಲಾನಾ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮುಂದುವರಿಯಲಿದೆ.

ಇದನ್ನೂ ಓದಿ: ತುಮಕೂರು: ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಮುಖಂಡರಿಂದ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ

Published On - 6:52 pm, Sun, 27 March 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!