AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis ಶ್ರೀಲಂಕಾದಲ್ಲಿ ಪೆಟ್ರೋಲ್‌ ಖಾಲಿ, ಆರ್ಥಿಕತೆ ಅನಿಶ್ಚಿತ ಸ್ಥಿತಿಯಲ್ಲಿದೆ: ಪ್ರಧಾನಿ ರನಿಲ್ ವಿಕ್ರಮಸಿಂಘೆ

"ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯು ಅತ್ಯಂತ ಅನಿಶ್ಚಿತವಾಗಿದೆ. ಹಿಂದಿನ ಸರ್ಕಾರದ ಬಜೆಟ್ ಎಸ್‌ಎಲ್‌ಆರ್ 2.3 ಟ್ರಿಲಿಯನ್ ಆದಾಯವನ್ನು ನಿರೀಕ್ಷಿಸಿದ್ದರೂ, ಎಸ್‌ಎಲ್‌ಆರ್ 1.6 ಟ್ರಿಲಿಯನ್ ಈ ವರ್ಷದ ಆದಾಯದ...

Sri Lanka Crisis ಶ್ರೀಲಂಕಾದಲ್ಲಿ ಪೆಟ್ರೋಲ್‌ ಖಾಲಿ, ಆರ್ಥಿಕತೆ ಅನಿಶ್ಚಿತ ಸ್ಥಿತಿಯಲ್ಲಿದೆ: ಪ್ರಧಾನಿ ರನಿಲ್ ವಿಕ್ರಮಸಿಂಘೆ
ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 16, 2022 | 9:19 PM

ಶ್ರೀಲಂಕಾ (Sri Lanka) ಪ್ರಧಾನಿ ರನಿಲ್ ವಿಕ್ರಮಸಿಂಘೆ (Ranil Wickremesinghe) ಸೋಮವಾರ ದ್ವೀಪ ರಾಷ್ಟ್ರದ ಆರ್ಥಿಕತೆಯು ಅನಿಶ್ಚಿತ ಸ್ಥಿತಿಯಲ್ಲಿದೆ. ನಗದು ಕೊರತೆ ಅನುಭವಿಸುತ್ತಿರುವ ರಾಷ್ಟ್ರದಲ್ಲಿ ಪೆಟ್ರೋಲ್ (petrol) ಖಾಲಿಯಾಗಿದೆ ಎಂದು ಹೇಳಿದ್ದಾರೆ. “ನಮ್ಮಲ್ಲಿ ಪೆಟ್ರೋಲ್ ಖಾಲಿಯಾಗಿದೆ.ಸದ್ಯಕ್ಕೆ ನಮ್ಮಲ್ಲಿ ಒಂದೇ ದಿನಕ್ಕೆ ಪೆಟ್ರೋಲ್ ಸ್ಟಾಕ್‌ಗಳಿವೆ” ಎಂದು ವಿಕ್ರಮಸಿಂಘೆ ಹೇಳಿದ್ದಾರೆ. ಅದೇ ವೇಳೆ ಮುಂಬರುವ ತಿಂಗಳುಗಳಲ್ಲಿ ಈಗಾಗಲೇ ದಿವಾಳಿಯಾಗಿರುವ ದೇಶವು ಹೆಚ್ಚಿನ ಸಂಕಷ್ಟಗಳನ್ನು ಎದುರಿಸಬಹುದು ಎಂದು ಅವರು ಹೇಳಿದರು. ಆರ್ಥಿಕ ಪರಿಸ್ಥಿತಿಯ ಬಗ್ಗೆ ನಿರಂತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ ಕಳೆದ ವಾರ ಪ್ರಧಾನಿಯಾದ ವಿಕ್ರಮಸಿಂಘೆ, ನಡೆಯುತ್ತಿರುವ ಬಿಕ್ಕಟ್ಟಿಗೆ ಪರಿಹಾರಗಳನ್ನು ಕಂಡುಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳ ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಶ್ರೀಲಂಕಾ ವಿಮಾನಯಾನ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿದ್ದಾರೆ. “ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯು ಅತ್ಯಂತ ಅನಿಶ್ಚಿತವಾಗಿದೆ. ಹಿಂದಿನ ಸರ್ಕಾರದ ಬಜೆಟ್ ಎಸ್‌ಎಲ್‌ಆರ್ 2.3 ಟ್ರಿಲಿಯನ್ ಆದಾಯವನ್ನು ನಿರೀಕ್ಷಿಸಿದ್ದರೂ, ಎಸ್‌ಎಲ್‌ಆರ್ 1.6 ಟ್ರಿಲಿಯನ್ ಈ ವರ್ಷದ ಆದಾಯದ ವಾಸ್ತವಿಕ ಮುನ್ನೂಹೆಯಾಗಿದೆ ಎಂದು ಕೊಲಂಬೊದಲ್ಲಿ ಮಾತನಾಡಿದ ಪ್ರಧಾನಿ ಹೇಳಿದ್ದಾರೆ.

ಈಬಗ್ಗೆ ಸರಣಿ ಟ್ವೀಟ್ ಮಾಡಿರುವ ವಿಕ್ರಮ ಸಿಂಘೆ, ಮುಂದಿನ ಒಂದೆರಡು ತಿಂಗಳುಗಳು ನಮ್ಮ ಜೀವನದಲ್ಲಿ ಅತ್ಯಂತ ಕಷ್ಟಕರವಾಗಿರುತ್ತದೆ. ಸತ್ಯವನ್ನು ಮರೆಮಾಚುವ ಮತ್ತು ಸಾರ್ವಜನಿಕರಿಗೆ ಸುಳ್ಳು ಹೇಳುವ ಬಯಕೆ ನನಗಿಲ್ಲ. ಈ ಸಂಗತಿಗಳು ಅಹಿತಕರ ಮತ್ತು ಭಯಾನಕವಾಗಿದ್ದರೂ, ಇದು ನಿಜವಾದ ಪರಿಸ್ಥಿತಿ ಎಂದಿದ್ದಾರೆ.

ಇದನ್ನೂ ಓದಿ
Image
Sri Lanka Economic Crises : ಶ್ರೀಲಂಕಾ ಎತ್ತ ಸಾಗುತ್ತಿದೆ, ಭಾರತವೂ ಇದರಿಂದ ಕಲಿಯಬಹುದಾದ ಪಾಠಗಳೇನು?
Image
ಶ್ರೀಲಂಕಾದ ಮಾಜಿ ಪ್ರಧಾನಿ ಭಾರತಕ್ಕೆ ಪಲಾಯನದ ಸುದ್ದಿ ತಳ್ಳಿ ಹಾಕಿದ ರಾಯಭಾರ ಕಚೇರಿ
Image
Sri Lanka Crisis ಶ್ರೀಲಂಕಾ: ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಗೆ ಕಂಡಲ್ಲಿ ಗುಂಡಿಕ್ಕಲು ರಕ್ಷಣಾ ಸಚಿವಾಲಯ ಆದೇಶ
Image
Sri Lanka: ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ 5 ವಾರಗಳಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ

14 ಅಗತ್ಯ ಔಷಧಿಗಳ ಕೊರತೆಯಿದೆ ಮತ್ತು ಅಲ್ಪಾವಧಿಯಲ್ಲಿ ಹಣದುಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ ಪ್ರಧಾನಿ, “ನಾವು ಸಂಬಳವನ್ನು ಪಾವತಿಸಲು ಮತ್ತು ಅಗತ್ಯಗಳಿಗೆ ಹಣದ ಮುದ್ರಣವನ್ನು ಮುಂದುವರಿಸಬೇಕಾಗಿದೆ. ಭಾರತೀಯ ಕ್ರೆಡಿಟ್ ಲೈನ್ ಅನ್ನು ಬಳಸಿಕೊಂಡು ಇನ್ನೂ ಎರಡು ಪೆಟ್ರೋಲ್ ಮತ್ತು ಡೀಸೆಲ್ ಸಾಗಣೆಗಳು ಬಾಕಿಯಿದೆ ಎಂದು ಅವರು ಹೇಳಿದರು.

“ನವೆಂಬರ್ 2019 ರಲ್ಲಿ, ನಮ್ಮ ವಿದೇಶಿ ವಿನಿಮಯ ಮೀಸಲು $7.5 ಬಿಲಿಯನ್ ಆಗಿತ್ತು. ಆದಾಗ್ಯೂ, ಇಂದು, $ 1 ಮಿಲಿಯನ್ ಮಾಡುವುದು ಖಜಾನೆಗೆ ಸವಾಲಾಗಿದೆ. ಅನಿಲವನ್ನು ಆಮದು ಮಾಡಿಕೊಳ್ಳಲು ಅಗತ್ಯವಿರುವ $5 ಮಿಲಿಯನ್ ಅನ್ನು ಸಂಗ್ರಹಿಸಲು ಹಣಕಾಸು ಸಚಿವಾಲಯಕ್ಕೆ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

Published On - 9:15 pm, Mon, 16 May 22

ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ