AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis ಶ್ರೀಲಂಕಾದಲ್ಲಿ ಪೆಟ್ರೋಲ್‌ ಖಾಲಿ, ಆರ್ಥಿಕತೆ ಅನಿಶ್ಚಿತ ಸ್ಥಿತಿಯಲ್ಲಿದೆ: ಪ್ರಧಾನಿ ರನಿಲ್ ವಿಕ್ರಮಸಿಂಘೆ

"ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯು ಅತ್ಯಂತ ಅನಿಶ್ಚಿತವಾಗಿದೆ. ಹಿಂದಿನ ಸರ್ಕಾರದ ಬಜೆಟ್ ಎಸ್‌ಎಲ್‌ಆರ್ 2.3 ಟ್ರಿಲಿಯನ್ ಆದಾಯವನ್ನು ನಿರೀಕ್ಷಿಸಿದ್ದರೂ, ಎಸ್‌ಎಲ್‌ಆರ್ 1.6 ಟ್ರಿಲಿಯನ್ ಈ ವರ್ಷದ ಆದಾಯದ...

Sri Lanka Crisis ಶ್ರೀಲಂಕಾದಲ್ಲಿ ಪೆಟ್ರೋಲ್‌ ಖಾಲಿ, ಆರ್ಥಿಕತೆ ಅನಿಶ್ಚಿತ ಸ್ಥಿತಿಯಲ್ಲಿದೆ: ಪ್ರಧಾನಿ ರನಿಲ್ ವಿಕ್ರಮಸಿಂಘೆ
ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 16, 2022 | 9:19 PM

Share

ಶ್ರೀಲಂಕಾ (Sri Lanka) ಪ್ರಧಾನಿ ರನಿಲ್ ವಿಕ್ರಮಸಿಂಘೆ (Ranil Wickremesinghe) ಸೋಮವಾರ ದ್ವೀಪ ರಾಷ್ಟ್ರದ ಆರ್ಥಿಕತೆಯು ಅನಿಶ್ಚಿತ ಸ್ಥಿತಿಯಲ್ಲಿದೆ. ನಗದು ಕೊರತೆ ಅನುಭವಿಸುತ್ತಿರುವ ರಾಷ್ಟ್ರದಲ್ಲಿ ಪೆಟ್ರೋಲ್ (petrol) ಖಾಲಿಯಾಗಿದೆ ಎಂದು ಹೇಳಿದ್ದಾರೆ. “ನಮ್ಮಲ್ಲಿ ಪೆಟ್ರೋಲ್ ಖಾಲಿಯಾಗಿದೆ.ಸದ್ಯಕ್ಕೆ ನಮ್ಮಲ್ಲಿ ಒಂದೇ ದಿನಕ್ಕೆ ಪೆಟ್ರೋಲ್ ಸ್ಟಾಕ್‌ಗಳಿವೆ” ಎಂದು ವಿಕ್ರಮಸಿಂಘೆ ಹೇಳಿದ್ದಾರೆ. ಅದೇ ವೇಳೆ ಮುಂಬರುವ ತಿಂಗಳುಗಳಲ್ಲಿ ಈಗಾಗಲೇ ದಿವಾಳಿಯಾಗಿರುವ ದೇಶವು ಹೆಚ್ಚಿನ ಸಂಕಷ್ಟಗಳನ್ನು ಎದುರಿಸಬಹುದು ಎಂದು ಅವರು ಹೇಳಿದರು. ಆರ್ಥಿಕ ಪರಿಸ್ಥಿತಿಯ ಬಗ್ಗೆ ನಿರಂತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ ಕಳೆದ ವಾರ ಪ್ರಧಾನಿಯಾದ ವಿಕ್ರಮಸಿಂಘೆ, ನಡೆಯುತ್ತಿರುವ ಬಿಕ್ಕಟ್ಟಿಗೆ ಪರಿಹಾರಗಳನ್ನು ಕಂಡುಹಿಡಿಯಲು ಎಲ್ಲಾ ರಾಜಕೀಯ ಪಕ್ಷಗಳ ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಶ್ರೀಲಂಕಾ ವಿಮಾನಯಾನ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿದ್ದಾರೆ. “ಪ್ರಸ್ತುತ ಶ್ರೀಲಂಕಾದ ಆರ್ಥಿಕತೆಯು ಅತ್ಯಂತ ಅನಿಶ್ಚಿತವಾಗಿದೆ. ಹಿಂದಿನ ಸರ್ಕಾರದ ಬಜೆಟ್ ಎಸ್‌ಎಲ್‌ಆರ್ 2.3 ಟ್ರಿಲಿಯನ್ ಆದಾಯವನ್ನು ನಿರೀಕ್ಷಿಸಿದ್ದರೂ, ಎಸ್‌ಎಲ್‌ಆರ್ 1.6 ಟ್ರಿಲಿಯನ್ ಈ ವರ್ಷದ ಆದಾಯದ ವಾಸ್ತವಿಕ ಮುನ್ನೂಹೆಯಾಗಿದೆ ಎಂದು ಕೊಲಂಬೊದಲ್ಲಿ ಮಾತನಾಡಿದ ಪ್ರಧಾನಿ ಹೇಳಿದ್ದಾರೆ.

ಈಬಗ್ಗೆ ಸರಣಿ ಟ್ವೀಟ್ ಮಾಡಿರುವ ವಿಕ್ರಮ ಸಿಂಘೆ, ಮುಂದಿನ ಒಂದೆರಡು ತಿಂಗಳುಗಳು ನಮ್ಮ ಜೀವನದಲ್ಲಿ ಅತ್ಯಂತ ಕಷ್ಟಕರವಾಗಿರುತ್ತದೆ. ಸತ್ಯವನ್ನು ಮರೆಮಾಚುವ ಮತ್ತು ಸಾರ್ವಜನಿಕರಿಗೆ ಸುಳ್ಳು ಹೇಳುವ ಬಯಕೆ ನನಗಿಲ್ಲ. ಈ ಸಂಗತಿಗಳು ಅಹಿತಕರ ಮತ್ತು ಭಯಾನಕವಾಗಿದ್ದರೂ, ಇದು ನಿಜವಾದ ಪರಿಸ್ಥಿತಿ ಎಂದಿದ್ದಾರೆ.

ಇದನ್ನೂ ಓದಿ
Image
Sri Lanka Economic Crises : ಶ್ರೀಲಂಕಾ ಎತ್ತ ಸಾಗುತ್ತಿದೆ, ಭಾರತವೂ ಇದರಿಂದ ಕಲಿಯಬಹುದಾದ ಪಾಠಗಳೇನು?
Image
ಶ್ರೀಲಂಕಾದ ಮಾಜಿ ಪ್ರಧಾನಿ ಭಾರತಕ್ಕೆ ಪಲಾಯನದ ಸುದ್ದಿ ತಳ್ಳಿ ಹಾಕಿದ ರಾಯಭಾರ ಕಚೇರಿ
Image
Sri Lanka Crisis ಶ್ರೀಲಂಕಾ: ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಗೆ ಕಂಡಲ್ಲಿ ಗುಂಡಿಕ್ಕಲು ರಕ್ಷಣಾ ಸಚಿವಾಲಯ ಆದೇಶ
Image
Sri Lanka: ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ 5 ವಾರಗಳಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ

14 ಅಗತ್ಯ ಔಷಧಿಗಳ ಕೊರತೆಯಿದೆ ಮತ್ತು ಅಲ್ಪಾವಧಿಯಲ್ಲಿ ಹಣದುಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ ಪ್ರಧಾನಿ, “ನಾವು ಸಂಬಳವನ್ನು ಪಾವತಿಸಲು ಮತ್ತು ಅಗತ್ಯಗಳಿಗೆ ಹಣದ ಮುದ್ರಣವನ್ನು ಮುಂದುವರಿಸಬೇಕಾಗಿದೆ. ಭಾರತೀಯ ಕ್ರೆಡಿಟ್ ಲೈನ್ ಅನ್ನು ಬಳಸಿಕೊಂಡು ಇನ್ನೂ ಎರಡು ಪೆಟ್ರೋಲ್ ಮತ್ತು ಡೀಸೆಲ್ ಸಾಗಣೆಗಳು ಬಾಕಿಯಿದೆ ಎಂದು ಅವರು ಹೇಳಿದರು.

“ನವೆಂಬರ್ 2019 ರಲ್ಲಿ, ನಮ್ಮ ವಿದೇಶಿ ವಿನಿಮಯ ಮೀಸಲು $7.5 ಬಿಲಿಯನ್ ಆಗಿತ್ತು. ಆದಾಗ್ಯೂ, ಇಂದು, $ 1 ಮಿಲಿಯನ್ ಮಾಡುವುದು ಖಜಾನೆಗೆ ಸವಾಲಾಗಿದೆ. ಅನಿಲವನ್ನು ಆಮದು ಮಾಡಿಕೊಳ್ಳಲು ಅಗತ್ಯವಿರುವ $5 ಮಿಲಿಯನ್ ಅನ್ನು ಸಂಗ್ರಹಿಸಲು ಹಣಕಾಸು ಸಚಿವಾಲಯಕ್ಕೆ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

Published On - 9:15 pm, Mon, 16 May 22

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ