AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ವಸ್ತುಗಳ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಕಾರಣದಿಂದ ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

Sri Lanka Crisis: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ
ರಾನಿಲ್ ವಿಕ್ರಮಸಿಂಘೆImage Credit source: Money Control
TV9 Web
| Edited By: |

Updated on:Jul 18, 2022 | 10:03 AM

Share

ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ (Sri Lanka Economic Crisis) ಜೊತೆಗೆ ರಾಜಕೀಯ ಬಿಕ್ಕಟ್ಟು ಕೂಡ ತಲೆದೋರಿದೆ. ಇದರ ನಡುವೆ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ (Ranil Wickremesinghe) ಇಂದಿನಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು (Emergency in Sri Lanka) ಘೋಷಿಸಿದ್ದಾರೆ. ಶ್ರೀಲಂಕಾ ದೇಶವು ಸಾಮಾಜಿಕ ಅಶಾಂತಿ ಮತ್ತು ದುರ್ಬಲ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದೆ. ಹೀಗಾಗಿ, ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಹಿಂದೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಪರಾರಿಯಾದಾಗ ಜನರು ದಂಗೆದ್ದು, ಸರ್ಕಾರಿ ಬಂಗಲೆ, ಕಚೇರಿಗಳಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದರಿಂದ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ವಸ್ತುಗಳ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಕಾರಣದಿಂದ ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ಔಟ್‌ಲೆಟ್ ಡೈಲಿ ಮಿರರ್ ವರದಿ ಮಾಡಿದೆ.

ಇದನ್ನೂ ಓದಿ
Image
ಅಮೆರಿಕಾದಲ್ಲಿ ಮತ್ತೆ ಗುಂಡಿನ ಸದ್ದು; ಇಂಡಿಯಾನಾ ಮಾಲ್​ನಲ್ಲಿ ಬಂದೂಕಿನ ದಾಳಿಗೆ ಮೂವರು ಸಾವು; ಗನ್​ಮ್ಯಾನ್ ಹತ್ಯೆ
Image
ಶ್ರೀಲಂಕಾ ಬಿಕ್ಕಟ್ಟು: ಭಾರತದ ಹಸ್ತಕ್ಷೇಪಕ್ಕೆ ಡಿಎಂಕೆ, ಎಐಎಡಿಎಂಕೆ ಒತ್ತಾಯ, ಜುಲೈ 19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ
Image
Israel Attack: ಜೋ ಬೈಡೆನ್ ಭೇಟಿ ಬೆನ್ನಲ್ಲೇ ಗಾಜಾದ ಮಿಲಿಟರಿ ನೆಲೆ ಮೇಲೆ ಇಸ್ರೇಲ್​ನಿಂದ ವಾಯು ದಾಳಿ

ಸಂವಿಧಾನದ ಪರಿಚ್ಛೇದ 40(1)(C) ಪ್ರಕಾರ, ರಾನಿಲ್ ವಿಕ್ರಮಸಿಂಘೆ ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯ ಸೆಕ್ಷನ್ 2 (ಅಧ್ಯಾಯ 40)ರ ಮೂಲಕ ಅವರಿಗೆ ನೀಡಲಾದ ಅಧಿಕಾರಗಳ ಕಾರಣದಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಭಾರತದಿಂದ ಸಿಂಗಾಪುರ್​ಗೆ ಪಲಾಯನ ಮಾಡಿದ ನಂತರ ರಾಜೀನಾಮೆ ನೀಡಿದ್ದರು. ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿರುವ ಅವರ ಅಧಿಕೃತ ನಿವಾಸಕ್ಕೆ 10,000 ಪ್ರತಿಭಟನಾಕಾರರು ನುಗ್ಗಿದ ನಂತರ ಗೊಟಬಯ ರಾಜಪಕ್ಸ ಮೊದಲು ಮಾಲ್ಡೀವ್ಸ್‌ಗೆ ಹಾರಿದ್ದರು. ನಂತರ ಅಲ್ಲಿಂದ ಸಿಂಗಾಪುರ್​​ಗೆ ಹಾರಿದ್ದರು.

ಇದನ್ನೂ ಓದಿ:Gotabaya Rajapaksa: ಇಂದು ಮಾಲ್ಡೀವ್ಸ್​ನಿಂದ ಸಿಂಗಾಪುರ್​ಗೆ ಹಾರಲಿದ್ದಾರೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ

ಅಧ್ಯಕ್ಷೀಯ ಚುನಾವಣೆಗೆ ನಾಮನಿರ್ದೇಶನಗಳು ನಡೆಯಲಿದ್ದು, ಜುಲೈ 20ರಂದು ಶ್ರೀಲಂಕಾದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಶ್ರೀಲಂಕಾ ಸಂಸತ್ ಪ್ರಕಟಿಸಿದೆ. ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ್ ಶ್ರೀಲಂಕಾದ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

ನಾಳೆ ದೆಹಲಿಯಲ್ಲಿ ಸರ್ವಪಕ್ಷ ಸಭೆ: ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನ ಕುರಿತು ಮಂಗಳವಾರ ಸಂಜೆ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಶ್ರೀಲಂಕಾದಲ್ಲಿ ಸಿಲುಕಿರುವ ತಮಿಳಿಗರಿಗೆ ನೆರವು ನೋಡಲು ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಡಾ. ಎಸ್ ಜೈಶಂಕರ್ ಮಧ್ಯಪ್ರವೇಶಿಸುವಂತೆ ತಮಿಳುನಾಡು ಮೂಲದ ಪಕ್ಷಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ಶ್ರೀಲಂಕಾ ಬಿಕ್ಕಟ್ಟು: ಭಾರತದ ಹಸ್ತಕ್ಷೇಪಕ್ಕೆ ಡಿಎಂಕೆ, ಎಐಎಡಿಎಂಕೆ ಒತ್ತಾಯ, ಜುಲೈ 19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ನಡೆದ ತಮಿಳುನಾಡಿನ ಸ್ಥಳೀಯ ಪಕ್ಷಗಳ ಸಭೆಯಲ್ಲಿ, 7 ದಶಕಗಳಲ್ಲೇ ಅತ್ಯಂತ ಕೆಟ್ಟ ಆರ್ಥಿಕ ತುರ್ತುಸ್ಥಿತಿಯನ್ನು ಎದುರಿಸುತ್ತಿರುವ ನೆರೆಯ ರಾಷ್ಟ್ರ ಶ್ರೀಲಂಕಾದಲ್ಲಿ ನೆಲೆಸಿರುವ ತಮಿಳಿಗರ ರಕ್ಷಣೆಗೆ ಭಾರತ ಮಧ್ಯಪ್ರವೇಶಿಸಬೇಕು ಎಂದು ಡಿಎಂಕೆ ಮತ್ತು ಎಐಎಡಿಎಂಕೆ ಒತ್ತಾಯಿಸಿವೆ.

ಡಿಎಂಕೆ ಮತ್ತು ಎಐಎಡಿಎಂಕೆ ಈ ಎರಡೂ ಪಕ್ಷಗಳು ಭಾರತದ ತಮಿಳು ಜನಸಂಖ್ಯೆಯ ಸ್ಥಿತಿಯನ್ನು ಪ್ರಸ್ತಾಪಿಸಿವೆ. ಕೇಂದ್ರದಲ್ಲಿ ಆಡಳಿತಾರೂಢ ಒಕ್ಕೂಟದ ಭಾಗವಾಗಿರುವ ಎಐಎಡಿಎಂಕೆಯ ಎಂ. ತಂಬಿದುರೈ ಮತ್ತು ತಮಿಳುನಾಡು ಆಡಳಿತ ಪಕ್ಷವಾದ ಡಿಎಂಕೆಯ ಟಿಆರ್ ಬಾಲು ಈ ಬಗ್ಗೆ ಒತ್ತಾಯಿಸಿದ್ದಾರೆ.

Published On - 9:57 am, Mon, 18 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ