AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ರಾಜೀನಾಮೆ ನೀಡಲು ಶ್ರೀಲಂಕಾ ಅಧ್ಯಕ್ಷ ನಕಾರ, ವಿರೋಧ ಪಕ್ಷಗಳ ಏಕತಾ ಪ್ರಸ್ತಾವಕ್ಕೆ ತಿರಸ್ಕಾರ

ಬಿಕ್ಕಟ್ಟಿಗೆ ತುರ್ತು ಪರಿಹಾರ ಹುಡುಕುವ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದೇ ಸರ್ಕಾರ ರಚಿಸಬೇಕು ಎಂಬ ಅಧ್ಯಕ್ಷ ಗೊಟಬಾಯ ರಾಜಪಕ್ಸ ಕರೆಯನ್ನು ವಿರೋಧ ಪಕ್ಷಗಳು ತಿರಸ್ಕರಿಸಿವೆ.

Sri Lanka Crisis: ರಾಜೀನಾಮೆ ನೀಡಲು ಶ್ರೀಲಂಕಾ ಅಧ್ಯಕ್ಷ ನಕಾರ, ವಿರೋಧ ಪಕ್ಷಗಳ ಏಕತಾ ಪ್ರಸ್ತಾವಕ್ಕೆ ತಿರಸ್ಕಾರ
ಶ್ರೀಲಂಕಾದಲ್ಲಿ ಪ್ರತಿಭಟನೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Apr 05, 2022 | 1:31 PM

Share

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಸುಳಿಗೆ ಸಿಲುಕಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಬಿಕ್ಕಟ್ಟಿಗೆ ತುರ್ತು ಪರಿಹಾರ ಹುಡುಕುವ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದೇ ಸರ್ಕಾರ ರಚಿಸಬೇಕು ಎಂಬ ಅಧ್ಯಕ್ಷ ಗೊಟಬಾಯ ರಾಜಪಕ್ಸ ಕರೆಯನ್ನು ವಿರೋಧ ಪಕ್ಷಗಳು ತಿರಸ್ಕರಿಸಿವೆ. ಈ ಬೇಡಿಕೆಯನ್ನೇ ಒಂದು ಸಂಚು ಎಂದು ಹೇಳಿರುವ ವಿರೋಧ ಪಕ್ಷಗಳ ನಾಯಕರು, ಇಂಥ ಪ್ರಯತ್ನಕ್ಕೆ ನಾವು ಕೈ ಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ನೀವು ತಿಳಿಯಬೇಕಾದ 10 ಅಂಶಗಳಿವು.

  1. ವಿರೋಧ ಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಪ್ರಸ್ತಾವವನ್ನು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಸ ತಿರಸ್ಕರಿಸಿದ್ದಾರೆ. ಇದು ಮೂರ್ಖತನದ ನಿರ್ಧಾರವಾಗುತ್ತದೆ. ಇದರ ಬದಲಿಗೆ ಅಧ್ಯಕ್ಷರು ರಾಜೀನಾಮೆ ನೀಡಬೇಕು. ದೇಶವನ್ನು ಬಿಕ್ಕಟ್ಟಿಗೆ ದೂಡಿದ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿವೆ.
  2. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಆರಂಭವಾದ ನಂತರ ಪರಿಸ್ಥಿತಿ ನಿರ್ವಹಿಸಲು ಕಷ್ಟಪಟ್ಟ ಶ್ರೀಲಂಕಾ ಅಧ್ಯಕ್ಷರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ಶ್ರೀಲಂಕಾದ ಸಂಸತ್ತು ಸಭೆ ಸೇರಲಿದೆ. ಇಂದಿನಿಂದ ಕಲಾಪ ಆರಂಭವಾಗಲಿದೆ.
  3. ಶ್ರೀಲಂಕಾದ ಹಲವು ಸಚಿವರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಅಧ್ಯಕ್ಷರು ನಾಲ್ವರು ಸಚಿವರಿಗೆ ವಿಶೇಷ ಹೊಣೆಗಾರಿಕೆ ನೀಡಿ, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವವರೆಗೂ ಸರ್ಕಾರದಲ್ಲಿ ಸ್ಥಿರತೆ ತರಬೇಕು ಎನ್ನುವ ಹೊಣೆಗಾರಿಕೆ ವಹಿಸಿದ್ದಾರೆ.
  4. ದೇಶದಲ್ಲಿ ಅತ್ಯಗತ್ಯ ಔಷಧಗಳ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರವು ಮಂಗಳವಾರ (ಏಪ್ರಿಲ್ 5) ಆರೋಗ್ಯ ತುರ್ತುಸ್ಥಿತಿ ಘೋಷಣೆ ಮಾಡಿದೆ.
  5. ದೇಶವನ್ನು ಸಂಕಷ್ಟ ದೂಡಿದ ರಾಜಪಕ್ಸ ಕುಟುಂಬದ ವಿರುದ್ಧ ಜನರಲ್ಲಿ ತೀವ್ರ ಆಕ್ರೋಶ ಮಡುಗಟ್ಟಿದೆ. ಆರ್ಥಿಕತೆಯ ಅಸಮರ್ಪಕ ನಿರ್ವಹಣೆಯಿಂದಾಗಿ ದೇಶದ ವಿದೇಶಿ ಮೀಸಲು ನಿಧಿ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಆಮದು ಮಾಡಿಕೊಂಡ ವಸ್ತುಗಳಿಗೆ ಪಾವತಿಸಲು ಹಣ ಹೊಂದಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.
  6. ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ ಗವರ್ನರ್ ಅಜಿತ್ ಕಾರ್​ಬಾಲ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಚಿವ ಸಂಪುಟದ ಎಲ್ಲ ಸದಸ್ಯರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಬಿಕ್ಕಟ್ಟು ಶಮನಕ್ಕಾಗಿ ಹೊಸ ಆಡಳಿತ ವ್ಯವಸ್ಥೆ ರೂಪಿಸಲು ಕರೆ ನೀಡಿದ್ದಾರೆ.
  7. ಭಾನುವಾರ ರಾತ್ರಿ ಅಧ್ಯಕ್ಷ ಗೊಟಬಾಯ ರಾಜಪಕ್ಸ ಮತ್ತು ಅವರ ಅಣ್ಣ ಪ್ರಧಾನಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಉಳಿದೆಲ್ಲ 26 ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.
  8. ಶ್ರೀಲಂಕಾದಲ್ಲಿ ಪ್ರತಿಭಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಎಲ್ಲ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಇಂಟರ್ನೆಟ್​ ಸೇವಾದಾತರಿಗೆ ಸರ್ಕಾರವು ಸೂಚನೆ ನೀಡಿತ್ತು. ಫೇಸ್​ಬುಕ್, ವಾಟ್ಸ್​ಆ್ಯಪ್, ಟ್ವಿಟರ್ ಮತ್ತು ಯುಟ್ಯೂಬ್​ಗಳೂ ಕಾರ್ಯನಿರ್ವಹಿಸುತ್ತಿರಲಿಲ್ಲ. ಭಾನುವಾರದ ಸಂಜೆಯ ನಂತರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಗೊಳಿಸಲಾಗಿತ್ತು.
  9. ಭಾರತವು ಇತ್ತೀಚೆಗಷ್ಟೇ 1 ಶತಕೋಟಿ ಅಮೆರಿಕನ್ ಡಾಲರ್ ಮೊತ್ತದಷ್ಟು ಲೈನ್ ಆಫ್ ಕ್ರೆಡಿಟ್ ಮಾದರಿಯ ಸಾಲವನ್ನು ಶ್ರೀಲಂಕಾಕ್ಕೆ ಘೋಷಿಸಿತ್ತು. ಈ ಮೊದಲು, ಅಂದರೆ ಕಳೆದ ಫೆಬ್ರುವರಿಯಲ್ಲಿ ಸಹ 500 ಶತಕೋಟಿ ಅಮೆರಿಕನ್ ಡಾಲರ್​ ಮೊತ್ತದಷ್ಟು ಲೈನ್ ಆಫ್ ಕ್ರೆಡಿಟ್ ನೀಡಿತ್ತು.
  10. ಶ್ರೀಲಂಕಾದಲ್ಲಿ ಪ್ರಸ್ತುತ ಆಹಾರ, ಇಂಧನ ಮತ್ತು ಇತರ ಅತ್ಯಗತ್ಯ ವಸ್ತುಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ಮುಟ್ಟಿದೆ. ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ವಿಶ್ವ ಹಣಕಾಸು ನಿಧಿಯಿಂದ ಸಹಾಯ ಧನವನ್ನು ಶ್ರೀಲಂಕಾ ಕೋರುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಎದುರು‌ ಅಧಿಕಾರಿಗಳ ಕಳವಳ: ರಾಜ್ಯಗಳು ಕೊಡುವ ಉಚಿತ ಗಿಫ್ಟ್ ನಿಂದ ಶ್ರೀಲಂಕಾದ ಹಾದಿಯಲ್ಲಿ ಭಾರತ!

ಇದನ್ನೂ ಓದಿ: Sri Lanka crisis ಸಹೋದರ ಬೆಸಿಲ್ ರಾಜಪಕ್ಸಯನ್ನು ಹಣಕಾಸು ಸಚಿವ ಸ್ಥಾನದಿಂದ ವಜಾ ಮಾಡಿದ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ