AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ರಾಜೀನಾಮೆ ನೀಡಲು ಶ್ರೀಲಂಕಾ ಅಧ್ಯಕ್ಷ ನಕಾರ, ವಿರೋಧ ಪಕ್ಷಗಳ ಏಕತಾ ಪ್ರಸ್ತಾವಕ್ಕೆ ತಿರಸ್ಕಾರ

ಬಿಕ್ಕಟ್ಟಿಗೆ ತುರ್ತು ಪರಿಹಾರ ಹುಡುಕುವ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದೇ ಸರ್ಕಾರ ರಚಿಸಬೇಕು ಎಂಬ ಅಧ್ಯಕ್ಷ ಗೊಟಬಾಯ ರಾಜಪಕ್ಸ ಕರೆಯನ್ನು ವಿರೋಧ ಪಕ್ಷಗಳು ತಿರಸ್ಕರಿಸಿವೆ.

Sri Lanka Crisis: ರಾಜೀನಾಮೆ ನೀಡಲು ಶ್ರೀಲಂಕಾ ಅಧ್ಯಕ್ಷ ನಕಾರ, ವಿರೋಧ ಪಕ್ಷಗಳ ಏಕತಾ ಪ್ರಸ್ತಾವಕ್ಕೆ ತಿರಸ್ಕಾರ
ಶ್ರೀಲಂಕಾದಲ್ಲಿ ಪ್ರತಿಭಟನೆ
TV9 Web
| Edited By: |

Updated on: Apr 05, 2022 | 1:31 PM

Share

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಸುಳಿಗೆ ಸಿಲುಕಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಬಿಕ್ಕಟ್ಟಿಗೆ ತುರ್ತು ಪರಿಹಾರ ಹುಡುಕುವ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದೇ ಸರ್ಕಾರ ರಚಿಸಬೇಕು ಎಂಬ ಅಧ್ಯಕ್ಷ ಗೊಟಬಾಯ ರಾಜಪಕ್ಸ ಕರೆಯನ್ನು ವಿರೋಧ ಪಕ್ಷಗಳು ತಿರಸ್ಕರಿಸಿವೆ. ಈ ಬೇಡಿಕೆಯನ್ನೇ ಒಂದು ಸಂಚು ಎಂದು ಹೇಳಿರುವ ವಿರೋಧ ಪಕ್ಷಗಳ ನಾಯಕರು, ಇಂಥ ಪ್ರಯತ್ನಕ್ಕೆ ನಾವು ಕೈ ಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ನೀವು ತಿಳಿಯಬೇಕಾದ 10 ಅಂಶಗಳಿವು.

  1. ವಿರೋಧ ಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಪ್ರಸ್ತಾವವನ್ನು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಸ ತಿರಸ್ಕರಿಸಿದ್ದಾರೆ. ಇದು ಮೂರ್ಖತನದ ನಿರ್ಧಾರವಾಗುತ್ತದೆ. ಇದರ ಬದಲಿಗೆ ಅಧ್ಯಕ್ಷರು ರಾಜೀನಾಮೆ ನೀಡಬೇಕು. ದೇಶವನ್ನು ಬಿಕ್ಕಟ್ಟಿಗೆ ದೂಡಿದ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿವೆ.
  2. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಆರಂಭವಾದ ನಂತರ ಪರಿಸ್ಥಿತಿ ನಿರ್ವಹಿಸಲು ಕಷ್ಟಪಟ್ಟ ಶ್ರೀಲಂಕಾ ಅಧ್ಯಕ್ಷರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ಶ್ರೀಲಂಕಾದ ಸಂಸತ್ತು ಸಭೆ ಸೇರಲಿದೆ. ಇಂದಿನಿಂದ ಕಲಾಪ ಆರಂಭವಾಗಲಿದೆ.
  3. ಶ್ರೀಲಂಕಾದ ಹಲವು ಸಚಿವರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಅಧ್ಯಕ್ಷರು ನಾಲ್ವರು ಸಚಿವರಿಗೆ ವಿಶೇಷ ಹೊಣೆಗಾರಿಕೆ ನೀಡಿ, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವವರೆಗೂ ಸರ್ಕಾರದಲ್ಲಿ ಸ್ಥಿರತೆ ತರಬೇಕು ಎನ್ನುವ ಹೊಣೆಗಾರಿಕೆ ವಹಿಸಿದ್ದಾರೆ.
  4. ದೇಶದಲ್ಲಿ ಅತ್ಯಗತ್ಯ ಔಷಧಗಳ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರವು ಮಂಗಳವಾರ (ಏಪ್ರಿಲ್ 5) ಆರೋಗ್ಯ ತುರ್ತುಸ್ಥಿತಿ ಘೋಷಣೆ ಮಾಡಿದೆ.
  5. ದೇಶವನ್ನು ಸಂಕಷ್ಟ ದೂಡಿದ ರಾಜಪಕ್ಸ ಕುಟುಂಬದ ವಿರುದ್ಧ ಜನರಲ್ಲಿ ತೀವ್ರ ಆಕ್ರೋಶ ಮಡುಗಟ್ಟಿದೆ. ಆರ್ಥಿಕತೆಯ ಅಸಮರ್ಪಕ ನಿರ್ವಹಣೆಯಿಂದಾಗಿ ದೇಶದ ವಿದೇಶಿ ಮೀಸಲು ನಿಧಿ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಆಮದು ಮಾಡಿಕೊಂಡ ವಸ್ತುಗಳಿಗೆ ಪಾವತಿಸಲು ಹಣ ಹೊಂದಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.
  6. ಶ್ರೀಲಂಕಾದ ಕೇಂದ್ರೀಯ ಬ್ಯಾಂಕ್ ಗವರ್ನರ್ ಅಜಿತ್ ಕಾರ್​ಬಾಲ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಚಿವ ಸಂಪುಟದ ಎಲ್ಲ ಸದಸ್ಯರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಬಿಕ್ಕಟ್ಟು ಶಮನಕ್ಕಾಗಿ ಹೊಸ ಆಡಳಿತ ವ್ಯವಸ್ಥೆ ರೂಪಿಸಲು ಕರೆ ನೀಡಿದ್ದಾರೆ.
  7. ಭಾನುವಾರ ರಾತ್ರಿ ಅಧ್ಯಕ್ಷ ಗೊಟಬಾಯ ರಾಜಪಕ್ಸ ಮತ್ತು ಅವರ ಅಣ್ಣ ಪ್ರಧಾನಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಉಳಿದೆಲ್ಲ 26 ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.
  8. ಶ್ರೀಲಂಕಾದಲ್ಲಿ ಪ್ರತಿಭಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಎಲ್ಲ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಇಂಟರ್ನೆಟ್​ ಸೇವಾದಾತರಿಗೆ ಸರ್ಕಾರವು ಸೂಚನೆ ನೀಡಿತ್ತು. ಫೇಸ್​ಬುಕ್, ವಾಟ್ಸ್​ಆ್ಯಪ್, ಟ್ವಿಟರ್ ಮತ್ತು ಯುಟ್ಯೂಬ್​ಗಳೂ ಕಾರ್ಯನಿರ್ವಹಿಸುತ್ತಿರಲಿಲ್ಲ. ಭಾನುವಾರದ ಸಂಜೆಯ ನಂತರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಗೊಳಿಸಲಾಗಿತ್ತು.
  9. ಭಾರತವು ಇತ್ತೀಚೆಗಷ್ಟೇ 1 ಶತಕೋಟಿ ಅಮೆರಿಕನ್ ಡಾಲರ್ ಮೊತ್ತದಷ್ಟು ಲೈನ್ ಆಫ್ ಕ್ರೆಡಿಟ್ ಮಾದರಿಯ ಸಾಲವನ್ನು ಶ್ರೀಲಂಕಾಕ್ಕೆ ಘೋಷಿಸಿತ್ತು. ಈ ಮೊದಲು, ಅಂದರೆ ಕಳೆದ ಫೆಬ್ರುವರಿಯಲ್ಲಿ ಸಹ 500 ಶತಕೋಟಿ ಅಮೆರಿಕನ್ ಡಾಲರ್​ ಮೊತ್ತದಷ್ಟು ಲೈನ್ ಆಫ್ ಕ್ರೆಡಿಟ್ ನೀಡಿತ್ತು.
  10. ಶ್ರೀಲಂಕಾದಲ್ಲಿ ಪ್ರಸ್ತುತ ಆಹಾರ, ಇಂಧನ ಮತ್ತು ಇತರ ಅತ್ಯಗತ್ಯ ವಸ್ತುಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ಮುಟ್ಟಿದೆ. ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ವಿಶ್ವ ಹಣಕಾಸು ನಿಧಿಯಿಂದ ಸಹಾಯ ಧನವನ್ನು ಶ್ರೀಲಂಕಾ ಕೋರುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಎದುರು‌ ಅಧಿಕಾರಿಗಳ ಕಳವಳ: ರಾಜ್ಯಗಳು ಕೊಡುವ ಉಚಿತ ಗಿಫ್ಟ್ ನಿಂದ ಶ್ರೀಲಂಕಾದ ಹಾದಿಯಲ್ಲಿ ಭಾರತ!

ಇದನ್ನೂ ಓದಿ: Sri Lanka crisis ಸಹೋದರ ಬೆಸಿಲ್ ರಾಜಪಕ್ಸಯನ್ನು ಹಣಕಾಸು ಸಚಿವ ಸ್ಥಾನದಿಂದ ವಜಾ ಮಾಡಿದ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು