AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಹಿಂಸಾಚಾರ; ಶಾಸಕರ ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಸರ್ಕಾರ ವಿರೋಧಿ ಪ್ರತಿಭಟನಾಕಾರರು

ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸೆ ಅವರನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶ್ರೀಲಂಕಾದಲ್ಲಿ ಹಿಂಸಾಚಾರ; ಶಾಸಕರ ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಸರ್ಕಾರ ವಿರೋಧಿ ಪ್ರತಿಭಟನಾಕಾರರು
ಶ್ರೀಲಂಕಾದಲ್ಲಿ ಶಾಸಕರ ಮನೆಗೆ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 09, 2022 | 9:17 PM

Share

ಕೊಲಂಬೊ:ಗಾಲೆ ಫೋರ್ಸ್ (Galle Force) ಪ್ರತಿಭಟನಾಕಾರರ ಮೇಲೆ ನಡೆದ ಗುಂಪು ದಾಳಿಯ ಹಿಂದೆ ಆಡಳಿತ ಪಕ್ಷದ ಕೈವಾಡವಿದೆ ಎಂದು ಆರೋಪಿಸಿ ಶ್ರೀಲಂಕಾದ (Srilanka)  ಆಡಳಿತ ಪಕ್ಷದ ಹಲವಾರು ಶಾಸಕರ ಮನೆಗಳಿಗೆ ಸರ್ಕಾರ ವಿರೋಧಿ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ. ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸೆ(Mahinda Rajapaksa) ಅವರನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿತು.ಆಡಳಿತಾರೂಢ ಸಂಸದ ಸನತ್ ನಿಶಾಂತ ಸೇರಿದಂತೆ ಹಲವು ರಾಜಕಾರಣಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಶ್ರೀಲಂಕಾದ ಸುದ್ದಿ ಸಂಸ್ಥೆ ನ್ಯೂಸ್‌ವೈರ್ ವರದಿ ಮಾಡಿದೆ. ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೊದಲ್ಲಿ ಮನೆ ಸಂಪೂರ್ಣವಾಗಿ ನಾಶವಾಗಿರುವುದು ಕಾಣುತ್ತದೆ. ಇನ್ನೊಂದು ವಿಡಿಯೊದಲ್ಲಿ ಶ್ರೀಲಂಕಾ ಪೊದುಜನ ಪೆರಮುನ (SLPP) ರಾಜಕಾರಣಿಗಳ ಮನೆಗಳು ಮತ್ತು ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.  ರಾಜಪಕ್ಸೆ ಆಡಳಿತ ಪಕ್ಷದ ಶ್ರೀಲಂಕಾ ಸಂಸದ ಅಮರಕೀರ್ತಿ ಅತುಕೋರಾಲ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ದೇಶದಲ್ಲಿ ಸರ್ಕಾರದ ವಿರೋಧಿ ಮತ್ತು ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಸಾವಿಗೀಡಾದ ಬೆನ್ನಲ್ಲೇ ಪ್ರತಿಭಟನೆ ತೀವ್ರವಾಗಿ ಬೆಂಕಿ ಹಚ್ಚಿದ ಘಟನೆಗಳು ವರದಿ ಆಗಿವೆ.

ಕೆಲವು ಗಂಟೆಗಳ ಹಿಂದೆಯಷ್ಟೇ ಸುಮಾರು 20 ವರ್ಷಗಳ ಕಾಲ ಶ್ರೀಲಂಕಾ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಮಹಿಂದಾ ರಾಜಪಕ್ಸೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಸ್ತ್ರಸಜ್ಜಿತವಾದ ಸರ್ಕಾರಿ ಬೆಂಬಲಿಗರು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದರಿಂದ ಸಂಸದ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಈ ಹಿಂಸಾಚಾರದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Published On - 8:53 pm, Mon, 9 May 22

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್