AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಹಿಂಸಾಚಾರ; ಶಾಸಕರ ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಸರ್ಕಾರ ವಿರೋಧಿ ಪ್ರತಿಭಟನಾಕಾರರು

ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸೆ ಅವರನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶ್ರೀಲಂಕಾದಲ್ಲಿ ಹಿಂಸಾಚಾರ; ಶಾಸಕರ ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ ಸರ್ಕಾರ ವಿರೋಧಿ ಪ್ರತಿಭಟನಾಕಾರರು
ಶ್ರೀಲಂಕಾದಲ್ಲಿ ಶಾಸಕರ ಮನೆಗೆ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 09, 2022 | 9:17 PM

Share

ಕೊಲಂಬೊ:ಗಾಲೆ ಫೋರ್ಸ್ (Galle Force) ಪ್ರತಿಭಟನಾಕಾರರ ಮೇಲೆ ನಡೆದ ಗುಂಪು ದಾಳಿಯ ಹಿಂದೆ ಆಡಳಿತ ಪಕ್ಷದ ಕೈವಾಡವಿದೆ ಎಂದು ಆರೋಪಿಸಿ ಶ್ರೀಲಂಕಾದ (Srilanka)  ಆಡಳಿತ ಪಕ್ಷದ ಹಲವಾರು ಶಾಸಕರ ಮನೆಗಳಿಗೆ ಸರ್ಕಾರ ವಿರೋಧಿ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ. ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸೆ(Mahinda Rajapaksa) ಅವರನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿತು.ಆಡಳಿತಾರೂಢ ಸಂಸದ ಸನತ್ ನಿಶಾಂತ ಸೇರಿದಂತೆ ಹಲವು ರಾಜಕಾರಣಿಗಳ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಶ್ರೀಲಂಕಾದ ಸುದ್ದಿ ಸಂಸ್ಥೆ ನ್ಯೂಸ್‌ವೈರ್ ವರದಿ ಮಾಡಿದೆ. ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೊದಲ್ಲಿ ಮನೆ ಸಂಪೂರ್ಣವಾಗಿ ನಾಶವಾಗಿರುವುದು ಕಾಣುತ್ತದೆ. ಇನ್ನೊಂದು ವಿಡಿಯೊದಲ್ಲಿ ಶ್ರೀಲಂಕಾ ಪೊದುಜನ ಪೆರಮುನ (SLPP) ರಾಜಕಾರಣಿಗಳ ಮನೆಗಳು ಮತ್ತು ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.  ರಾಜಪಕ್ಸೆ ಆಡಳಿತ ಪಕ್ಷದ ಶ್ರೀಲಂಕಾ ಸಂಸದ ಅಮರಕೀರ್ತಿ ಅತುಕೋರಾಲ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ದೇಶದಲ್ಲಿ ಸರ್ಕಾರದ ವಿರೋಧಿ ಮತ್ತು ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಸಾವಿಗೀಡಾದ ಬೆನ್ನಲ್ಲೇ ಪ್ರತಿಭಟನೆ ತೀವ್ರವಾಗಿ ಬೆಂಕಿ ಹಚ್ಚಿದ ಘಟನೆಗಳು ವರದಿ ಆಗಿವೆ.

ಕೆಲವು ಗಂಟೆಗಳ ಹಿಂದೆಯಷ್ಟೇ ಸುಮಾರು 20 ವರ್ಷಗಳ ಕಾಲ ಶ್ರೀಲಂಕಾ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಮಹಿಂದಾ ರಾಜಪಕ್ಸೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಸ್ತ್ರಸಜ್ಜಿತವಾದ ಸರ್ಕಾರಿ ಬೆಂಬಲಿಗರು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದರಿಂದ ಸಂಸದ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಈ ಹಿಂಸಾಚಾರದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Published On - 8:53 pm, Mon, 9 May 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!