AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ
ಹಡಗುImage Credit source: NDTV
ನಯನಾ ರಾಜೀವ್
|

Updated on:Sep 26, 2023 | 11:39 AM

Share

ಚೀನಾ(China)ದ ಹಡಗು(Ship) ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಶ್ರೀಲಂಕಾ ನೌಕಾಪಡೆಯ ಪ್ರಕಾರ, ಪೀಪಲ್ಸ್ ಲಿಬರೇಶನ್ ಆರ್ಮಿ ನೌಕಾಪಡೆಯ ಹೈ ಯಾಂಗ್ 24 ಎಚ್​ಎಒ ಹೆಸರಿನ ಯುದ್ಧನೌಕೆಯು ಕೊಲಂಬೊ ಬಂದರಿಗೆ ಪ್ರವೇಶಿಸಿತ್ತು. ಚೀನಾ ಹಡಗು ಲಂಕಾ ಬಂದರಿಗೆ ಆಗಮಿಸಿರುವುದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಶ್ರೀಲಂಕಾ ಸರ್ಕಾರ ಚೀನಾ ಹಡಗಿಗೆ ಪರವಾನಗಿ ನೀಡಲು ತಡ ಮಾಡಿತ್ತು. ಆದಾಗ್ಯೂ ಚೀನಾ ಹಡಗು ತನ್ನ ದೇಶದ ಬಂದರಿಗೆ ಆಗಮಿಸಲು ಅನುಮತಿ ನೀಡಿದ ಶ್ರೀಲಂಕಾ ಭಾರತೀಯರಿಗೆ ಸಮಜಾಯಿಷಿ ನೀಡಿತ್ತು.

ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಭಾರತ ಹಾಗೂ ಚೀನಾ ಎರಡೂ ದೇಶಗಳ ಬೆಂಬಲ ಬಯಸಿತ್ತು. ಇದೀಗ ನಮಗೆ ಭಾರತದ ಕಾಳಜಿ ಮುಖ್ಯ ಚೀನಾ ಹಡಗು ನಿಲುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಲಂಕಾ ಸ್ಪಷ್ಟಪಡಿಸಿದೆ. ಅಕ್ಟೋಬರ್​ನಲ್ಲಿ ಶ್ರೀಲಂಕಾದಲ್ಲಿ ಶಿಯಾನ್ ಎನ್ನುವ ಸಂಶೋಧನಾ ನೌಕೆ ನಿಲುಗಡೆಗೆ ಅನುಮತಿ ಕೇಳಲಾಗಿತ್ತು. ಆದರೆ ಶ್ರೀಲಂಕಾ ನಿರಾಕರಿಸಿದೆ.

ಮತ್ತಷ್ಟು ಓದಿ: Europa 2: ನವಮಂಗಳೂರು ಬಂದರಿಗೆ ಆಗಮಿಸಿದ ಕ್ರೂಸ್ ಹಡಗು

ಚೀನಾದ ಸಂಶೋಧನಾ ನೌಕೆಯು ಅಕ್ಟೋಬರ್‌ನಲ್ಲಿ ಶ್ರೀಲಂಕಾದಲ್ಲಿ ರಾಷ್ಟ್ರೀಯ ಜಲ ಸಂಪನ್ಮೂಲಗಳ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (NARA) ಜೊತೆಗೆ ಸಂಶೋಧನೆ ನಡೆಸಲು ಬರಬೇಕಾಗಿತ್ತು. ಶ್ರೀಲಂಕಾದ ಭೂಪ್ರದೇಶದಲ್ಲಿ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಲ್ಲಿ ವಿದೇಶಿ ಹಡಗುಗಳು ಮತ್ತು ವಿಮಾನಗಳು ಅನುಸರಿಸಬೇಕಾದ SOP ಅನ್ನು ಶ್ರೀಲಂಕಾ ರೂಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:37 am, Tue, 26 September 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು