AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ
ಹಡಗುImage Credit source: NDTV
ನಯನಾ ರಾಜೀವ್
|

Updated on:Sep 26, 2023 | 11:39 AM

Share

ಚೀನಾ(China)ದ ಹಡಗು(Ship) ನಿಲುಗಡೆಗೆ ಶ್ರೀಲಂಕಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಮಾತನಾಡಿ, ಭಾರತದ ಕಾಳಜಿ ನಮಗೆ ಮುಖ್ಯ, ಯಾವುದೇ ಕಾರಣಕ್ಕೂ ಚೀನಾ ಹಡಗು ನಿಲುಗಡೆಗೆ ನಮ್ಮ ದೇಶದಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಗೂಢಚಾರಿಕೆ ಉದ್ದೇಶಗಳಿಗಾಗಿ ಸಜ್ಜುಗೊಂಡಿದ್ದ ಚೀನಾದ ಮಿಲಿಟರಿ ಹಡಗೊಂದು ಕೊಲಂಬೊ ಬಂದರಿಗೆ ಬಂದು ನಿಂತಿತ್ತು. ಅಂಥದ್ದೇ ಘಟನೆಯು ಆಗಸ್ಟ್​ ತಿಂಗಳಲ್ಲಿ ನಡೆದಿತ್ತು.

ಶ್ರೀಲಂಕಾ ನೌಕಾಪಡೆಯ ಪ್ರಕಾರ, ಪೀಪಲ್ಸ್ ಲಿಬರೇಶನ್ ಆರ್ಮಿ ನೌಕಾಪಡೆಯ ಹೈ ಯಾಂಗ್ 24 ಎಚ್​ಎಒ ಹೆಸರಿನ ಯುದ್ಧನೌಕೆಯು ಕೊಲಂಬೊ ಬಂದರಿಗೆ ಪ್ರವೇಶಿಸಿತ್ತು. ಚೀನಾ ಹಡಗು ಲಂಕಾ ಬಂದರಿಗೆ ಆಗಮಿಸಿರುವುದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಶ್ರೀಲಂಕಾ ಸರ್ಕಾರ ಚೀನಾ ಹಡಗಿಗೆ ಪರವಾನಗಿ ನೀಡಲು ತಡ ಮಾಡಿತ್ತು. ಆದಾಗ್ಯೂ ಚೀನಾ ಹಡಗು ತನ್ನ ದೇಶದ ಬಂದರಿಗೆ ಆಗಮಿಸಲು ಅನುಮತಿ ನೀಡಿದ ಶ್ರೀಲಂಕಾ ಭಾರತೀಯರಿಗೆ ಸಮಜಾಯಿಷಿ ನೀಡಿತ್ತು.

ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಭಾರತ ಹಾಗೂ ಚೀನಾ ಎರಡೂ ದೇಶಗಳ ಬೆಂಬಲ ಬಯಸಿತ್ತು. ಇದೀಗ ನಮಗೆ ಭಾರತದ ಕಾಳಜಿ ಮುಖ್ಯ ಚೀನಾ ಹಡಗು ನಿಲುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಲಂಕಾ ಸ್ಪಷ್ಟಪಡಿಸಿದೆ. ಅಕ್ಟೋಬರ್​ನಲ್ಲಿ ಶ್ರೀಲಂಕಾದಲ್ಲಿ ಶಿಯಾನ್ ಎನ್ನುವ ಸಂಶೋಧನಾ ನೌಕೆ ನಿಲುಗಡೆಗೆ ಅನುಮತಿ ಕೇಳಲಾಗಿತ್ತು. ಆದರೆ ಶ್ರೀಲಂಕಾ ನಿರಾಕರಿಸಿದೆ.

ಮತ್ತಷ್ಟು ಓದಿ: Europa 2: ನವಮಂಗಳೂರು ಬಂದರಿಗೆ ಆಗಮಿಸಿದ ಕ್ರೂಸ್ ಹಡಗು

ಚೀನಾದ ಸಂಶೋಧನಾ ನೌಕೆಯು ಅಕ್ಟೋಬರ್‌ನಲ್ಲಿ ಶ್ರೀಲಂಕಾದಲ್ಲಿ ರಾಷ್ಟ್ರೀಯ ಜಲ ಸಂಪನ್ಮೂಲಗಳ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (NARA) ಜೊತೆಗೆ ಸಂಶೋಧನೆ ನಡೆಸಲು ಬರಬೇಕಾಗಿತ್ತು. ಶ್ರೀಲಂಕಾದ ಭೂಪ್ರದೇಶದಲ್ಲಿ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಲ್ಲಿ ವಿದೇಶಿ ಹಡಗುಗಳು ಮತ್ತು ವಿಮಾನಗಳು ಅನುಸರಿಸಬೇಕಾದ SOP ಅನ್ನು ಶ್ರೀಲಂಕಾ ರೂಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:37 am, Tue, 26 September 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು