AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್

ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್
ಗೊಟಬಯ ರಾಜಪಕ್ಸ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 13, 2022 | 4:44 PM

Share

ಕೊಲಂಬೊ: ಬುಧವಾರ ಮಾಲ್ಡೀವ್ಸ್​​ಗೆ ಪಲಾಯನ ಮಾಡಿರುವ ಶ್ರೀಲಂಕಾ ಅಧ್ಯಕ್ಷ (Sri Lankan President) ಗೊಟಬಯ ರಾಜಪಕ್ಸ (Gotabaya Rajapaksa) ಅವರು ನನಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಇಂದು (ಬುಧವಾರ) ರಾಜೀನಾಮೆ ಪತ್ರ (Resignation) ಕಳಿಸುವುದಾಗಿ ಹೇಳಿದ್ದಾರೆ ಎಂದು ಶ್ರೀಲಂಕಾ ಸಂಸತ್​​ನ ಸ್ಪೀಕರ್ ಹೇಳಿದ್ದಾರೆ.ಅಧ್ಯಕ್ಷರು ನನಗೆ ಫೋನ್ ಕರೆ ಮಾಡಿದ್ದರು. ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ. ಜನರು ಸಂಸತ್ತಿನ ಕಾರ್ಯ ಕಲಾಪದ ಮೇಲೆ ನಂಬಿಕೆ ಇಡಬೇಕು. ನಾವು 20ನೇ ತಾರೀಖಿನಂದು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಶಾಂತವಾಗಿರಿ ಎಂದು ಸ್ಪೀಕರ್ ಜನರಲ್ಲಿ ಮನವಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರು ಬಂದಿದ್ದು ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ ತೆಗೆದುಕೊಂಡಿದೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಸ್ಥಗಿತಗೊಂಡಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ