AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್

ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್
ಗೊಟಬಯ ರಾಜಪಕ್ಸ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 13, 2022 | 4:44 PM

Share

ಕೊಲಂಬೊ: ಬುಧವಾರ ಮಾಲ್ಡೀವ್ಸ್​​ಗೆ ಪಲಾಯನ ಮಾಡಿರುವ ಶ್ರೀಲಂಕಾ ಅಧ್ಯಕ್ಷ (Sri Lankan President) ಗೊಟಬಯ ರಾಜಪಕ್ಸ (Gotabaya Rajapaksa) ಅವರು ನನಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಇಂದು (ಬುಧವಾರ) ರಾಜೀನಾಮೆ ಪತ್ರ (Resignation) ಕಳಿಸುವುದಾಗಿ ಹೇಳಿದ್ದಾರೆ ಎಂದು ಶ್ರೀಲಂಕಾ ಸಂಸತ್​​ನ ಸ್ಪೀಕರ್ ಹೇಳಿದ್ದಾರೆ.ಅಧ್ಯಕ್ಷರು ನನಗೆ ಫೋನ್ ಕರೆ ಮಾಡಿದ್ದರು. ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ. ಜನರು ಸಂಸತ್ತಿನ ಕಾರ್ಯ ಕಲಾಪದ ಮೇಲೆ ನಂಬಿಕೆ ಇಡಬೇಕು. ನಾವು 20ನೇ ತಾರೀಖಿನಂದು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಶಾಂತವಾಗಿರಿ ಎಂದು ಸ್ಪೀಕರ್ ಜನರಲ್ಲಿ ಮನವಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರು ಬಂದಿದ್ದು ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ ತೆಗೆದುಕೊಂಡಿದೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಸ್ಥಗಿತಗೊಂಡಿದೆ.

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ