AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್

ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷರು ಕರೆ ಮಾಡಿ, ರಾಜೀನಾಮೆ ಪತ್ರ ಕಳಿಸುವುದಾಗಿ ಹೇಳಿದ್ದಾರೆ: ಸ್ಪೀಕರ್
ಗೊಟಬಯ ರಾಜಪಕ್ಸ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 13, 2022 | 4:44 PM

Share

ಕೊಲಂಬೊ: ಬುಧವಾರ ಮಾಲ್ಡೀವ್ಸ್​​ಗೆ ಪಲಾಯನ ಮಾಡಿರುವ ಶ್ರೀಲಂಕಾ ಅಧ್ಯಕ್ಷ (Sri Lankan President) ಗೊಟಬಯ ರಾಜಪಕ್ಸ (Gotabaya Rajapaksa) ಅವರು ನನಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಇಂದು (ಬುಧವಾರ) ರಾಜೀನಾಮೆ ಪತ್ರ (Resignation) ಕಳಿಸುವುದಾಗಿ ಹೇಳಿದ್ದಾರೆ ಎಂದು ಶ್ರೀಲಂಕಾ ಸಂಸತ್​​ನ ಸ್ಪೀಕರ್ ಹೇಳಿದ್ದಾರೆ.ಅಧ್ಯಕ್ಷರು ನನಗೆ ಫೋನ್ ಕರೆ ಮಾಡಿದ್ದರು. ಇಂದು ರಾತ್ರಿಯೊಳಗೆ ನನಗೆ ರಾಜೀನಾಮೆ ತಲುಪುವುದಾಗಿ ಹೇಳಿದ್ದಾರೆ ಎಂದು ವಿಡಿಯೊ ಸಂದೇಶದ ಮೂಲಕ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಹೇಳಿದ್ದಾರೆ. ಜನರು ಸಂಸತ್ತಿನ ಕಾರ್ಯ ಕಲಾಪದ ಮೇಲೆ ನಂಬಿಕೆ ಇಡಬೇಕು. ನಾವು 20ನೇ ತಾರೀಖಿನಂದು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಶಾಂತವಾಗಿರಿ ಎಂದು ಸ್ಪೀಕರ್ ಜನರಲ್ಲಿ ಮನವಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರು ಬಂದಿದ್ದು ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ ತೆಗೆದುಕೊಂಡಿದೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಸ್ಥಗಿತಗೊಂಡಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?