Sri Lanka Crisis ಜೀವಭಯದಿಂದ ನೌಕಾನೆಲೆಯಲ್ಲಿ ಆಶ್ರಯ ಪಡೆದ ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಕುಟುಂಬ

ಕೊಲಂಬೊದಲ್ಲಿರುವ ಸಿಎಂ ಅಧಿಕೃತ ನಿವಾಸವನ್ನು ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಸುತ್ತುವರಿದ ನಂತರ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಹಾರಿಸಿದ್ದಾರೆ. ಇದಾದ ನಂತರ ಗುಂಪು ಚದುರಿಸಿ...

Sri Lanka Crisis ಜೀವಭಯದಿಂದ ನೌಕಾನೆಲೆಯಲ್ಲಿ ಆಶ್ರಯ ಪಡೆದ ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಕುಟುಂಬ
ಮಹಿಂದಾ ರಾಜಪಕ್ಸೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on:May 10, 2022 | 5:25 PM

ಕೊಲಂಬೊ: ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ(Mahinda Rajapaksa) ಮತ್ತು ಅವರ ಕುಟುಂಬವು ಶ್ರೀಲಂಕಾದ (Sri Lanka) ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿ (Trincomalee) ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ಅದೇ ವೇಳೆ ದೇಶದಾದ್ಯಂತ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ಈ ಬಗ್ಗೆ ಗೊತ್ತಿರುವ ಜನರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ರಾಜಧಾನಿ ಕೊಲಂಬೊದಿಂದ ಸುಮಾರು 270 ಕಿಮೀ ದೂರದಲ್ಲಿರುವ ನೌಕಾ ನೆಲೆಯ ಹೊರಗೆಯೂ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನ ನಡುವೆಯೇ ನಡೆದ ಸರ್ಕಾರ ವಿರೋಧಿ ಪ್ರತಿಭಟನೆಗಳ ವೇಳೆ ಸಂಭವಿಸಿದ ಹಿಂಸಾಚಾರದಲ್ಲಿ ಐದು ಜನರು ಸಾವಿಗೀಡಾಗಿದ್ದಾರೆ. ದೇಶದಲ್ಲಿ ಕರ್ಫ್ಯೂ ಜಾರಿಗೊಳಿಸಲು ಶ್ರೀಲಂಕಾ ಇಂದು ಸಾವಿರಾರು ಸೈನಿಕರು ಮತ್ತು ಪೊಲೀಸರನ್ನು ನಿಯೋಜಿಸಿದೆ. ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಸೋಮವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 200 ಮಂದಿ ಗಾಯಗೊಂಡಿದ್ದಾರೆ. ಕೊಲಂಬೊದಲ್ಲಿರುವ ಸಿಎಂ ಅಧಿಕೃತ ನಿವಾಸವನ್ನು ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಸುತ್ತುವರಿದ ನಂತರ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಹಾರಿಸಿದ್ದಾರೆ. ಇದಾದ ನಂತರ ಗುಂಪು ಚದುರಿಸಿ ಮಿಲಿಟರಿ ಪಡೆ ಮುಂಜಾನೆ ರಾಜಪಕ್ಸೆ ಕುಟುಂಬವನ್ನು ಅಲ್ಲಿಂದ ರಕ್ಷಿಸಿದೆ. ಕನಿಷ್ಠ 10 ಪೆಟ್ರೋಲ್ ಬಾಂಬ್‌ಗಳನ್ನು ಕಾಂಪೌಂಡ್‌ಗೆ ಎಸೆಯಲಾಯಿತು” ಎಂದು ಉನ್ನತ ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್​ಪಿ ವರದಿ ಮಾಡಿದೆ.

ಕನಿಷ್ಠ 10 ಪೆಟ್ರೋಲ್ ಬಾಂಬ್‌ಗಳನ್ನು ಕಾಂಪೌಂಡ್‌ಗೆ ಎಸೆಯಲಾಯಿತು ಎಂದು ಉನ್ನತ ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್​ಪಿ  ವರದಿ ಮಾಡಿದೆ. ಶ್ರೀಲಂಕಾದಲ್ಲಿ 1948 ರಲ್ಲಿ ಸ್ವತಂತ್ರವಾದ ನಂತರದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು, ಇಂಧನ, ವಿದ್ಯುತ್,ಆಹಾರಕೊರತೆಯಿಂದಾಗಿ ರಾಜಪಕ್ಸೆ ಅಧಿಕಾರದಿಂದ ಕೆಳಗಿಳಿಯಬೇಕಾಗಿ ಬಂದಿದೆ. ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರು ಅಧಿಕಾರದಲ್ಲಿ ಉಳಿದುಕೊಂಡಿದ್ದು ಭದ್ರತಾ ಪಡೆಗಳ ಮೇಲೆ ವ್ಯಾಪಕ ಅಧಿಕಾರ ಮತ್ತು ಆಜ್ಞೆಯನ್ನು ಹೊಂದಿದ್ದಾರೆ.

ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷವಾದ ಸಮಗಿ ಜನ ಬಲವೇಗಯಾ ಅಥವಾ ಎಸ್​​ಜೆಪಿ ಮಧ್ಯಂತರ ಸರ್ಕಾರವನ್ನು ರಚಿಸುವ ಅಧ್ಯಕ್ಷರ ಪ್ರಸ್ತಾಪವನ್ನು ತಿರಸ್ಕರಿಸಿದ್ದು ಅಧ್ಯಕ್ಷ ಗೊಟಾಬಯ ರಾಜೀನಾಮೆಗೆ ಒತ್ತಾಯಿಸಿದೆ. ಸೋಮವಾರ ಮಹಿಂದಾ ರಾಜಪಕ್ಸೆ ಬೆಂಬಲಿಗರು ಪ್ರತಿಭಟನಾಕಾರರ ಮೇಲೆ ಕೋಲ,ದೊಣ್ಣೆಗಳಿಂದ ಪ್ರಹಾರ ಮಾಡಿದ್ದು, ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿತ್ತು.

ಇದನ್ನೂ ಓದಿ
Image
Sri Lanka Crisis: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೊದ ಹೊರಗೆ ಆಡಳಿತ ಪಕ್ಷದ ಶಾಸಕ ಅಮರಕೀರ್ತಿ ಅತುಕೋರಾಲ ಅವರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಗುಂಪಿನಿಂದ ಸುತ್ತುವರಿದ ನಂತರ ಇಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರಿಗೆ ಗುಂಡಿಕ್ಕಿದ ನಂತರ ಅವರು ತನ್ನ ರಿವಾಲ್ವರ್‌ನಿಂದ ತನ್ನ ಪ್ರಾಣ ತೆಗೆದುಕೊಂಡಿದ್ದಾರೆ  ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎಫ್ ಪಿಗೆ ತಿಳಿಸಿದರು. ಅತುಕೋರಾಲ ಅವರ ಅಂಗರಕ್ಷಕ ಕೂಡ ಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕರ್ಫ್ಯೂ ಹೇರಿದ್ದರೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿ ಸುಟ್ಟು ಹಾಕಲಾಯಿತು. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ. “ಇದು ನಾವು ಮೊದಲೇ ಮಾಡಬೇಕಾದ ಕೆಲಸ, ನಾವು ಮೊದಲೇ ಬೆಂಕಿ ಹಚ್ಚಬೇಕಿತ್ತು ” ಎಂದು ಸಚಿವರ ಮನೆ ಹೊತ್ತಿ ಉರಿಯುತ್ತಿರುವಾಗ ಅದರ ಮುಂದೆ ನಿಂತ ಅಪರಿಚಿತ ವ್ಯಕ್ತಿಯೊಬ್ಬರು ಸ್ಥಳೀಯ ಮಾಧ್ಯಮ ನೆಟ್​​ವರ್ಕ್​​​ಗೆ​​ ಹೇಳಿದ್ದಾರೆ.

ಕೊರೊನಾವೈರಸ್ ಸಾಂಕ್ರಾಮಿಕದಿಂದಾಗಿ ಪ್ರವಾಸೋದ್ಯಮ ಕುಸಿದಿದ್ದ ಶ್ರೀಲಂಕಾದ ಪ್ರಮುಖ ಆದಾಯಕ್ಕೆ ಹೊಡೆತ ಬಿದ್ದಾಗ ಪ್ರತಿಭಟನೆಗಳು ನಡೆದಿವೆ. ಇದು ಅನೇಕ ಆಮದುಗಳನ್ನು ನಿಷೇಧಿಸಲು ಸರ್ಕಾರವನ್ನು ಒತ್ತಾಯಿಸಿತು. ಇದರಿಂದಾಗಿ ಹಣದುಬ್ಬರ ಮತ್ತು ಸುದೀರ್ಘ ವಿದ್ಯುತ್ ಕಡಿತವನ್ನು ಇಲ್ಲಿನ ಜನರು ಅನುಭವಿಸಬೇಕಾಗಿ ಬಂತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧ್ಯಕ್ಷ ರಾಜಪಕ್ಸೆ ಅವರ ಮುಂದಿನ ನಡೆ ಏನು ಎಂಬುದು ಸ್ಪಷ್ಟವಾಗಿಲ್ಲ. ತನ್ನ ಸಹೋದರನಂತೆ ರಾಜೀನಾಮೆ ನೀಡಬಹುದು ಇಲ್ಲವೇ ಉಸ್ತುವಾರಿ ಸರ್ಕಾರವನ್ನು ನೇಮಿಸಬಹುದು. ಇಲ್ಲವೇ ಪ್ರತಿಭಟನೆಗಳನ್ನು ನಿಗ್ರಹಿಸಲು ಮಿಲಿಟರಿ ಮತ್ತು ಪೊಲೀಸರನ್ನು ನಿಯೋಜಿಸಬಹುದು ಅಥವಾ ಸಹಜವಾಗಿ ಪರಿಸ್ಥಿತಿ ತಿಳಿಯಾಗಲು ಕಾಯಬಹುದು ಎಂದು ಏಷ್ಯಾ ಸೊಸೈಟಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ಅಖಿಲ್ ಬೆರಿ ಅವರವು ಹೇಳಿರುವುದಾಗಿ ಎಎಫ್​​ಪಿಗೆ ವರದಿ ಮಾಡಿದೆ.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:45 pm, Tue, 10 May 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು