AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿಗೆ ಧನ್ಯವಾದ ಹೇಳಿದ ರನಿಲ್ ವಿಕ್ರಮಸಿಂಘೆ

ದೇಶದ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸ್ಥಿರಗೊಳಿಸಲು ಮತ್ತು ರಾಜಕೀಯ ಪ್ರಕ್ಷುಬ್ಧತೆ ಕೊನೆಗೊಳಿಸಲು ಶ್ರೀಲಂಕಾದ 26ನೇ ಪ್ರಧಾನಿಯಾಗಿ 73 ವರ್ಷದ ರನಿಲ್ ವಿಕ್ರಮಸಿಂಘೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿಗೆ ಧನ್ಯವಾದ ಹೇಳಿದ ರನಿಲ್ ವಿಕ್ರಮಸಿಂಘೆ
ರನಿಲ್ ವಿಕ್ರಮಸಿಂಘೆ
TV9 Web
| Edited By: |

Updated on:May 13, 2022 | 8:12 PM

Share

ಕೊಲಂಬೊ: ಶ್ರೀಲಂಕಾದ (Sri Lanka) ನೂತನ ಪ್ರಧಾನಿ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ತಮ್ಮ ಅವಧಿಯಲ್ಲಿ ಭಾರತದೊಂದಿಗೆ ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು ಸ್ವಾತಂತ್ರ್ಯದ ನಂತರದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ದೇಶಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ದೇಶದ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸ್ಥಿರಗೊಳಿಸಲು ಮತ್ತು ರಾಜಕೀಯ ಪ್ರಕ್ಷುಬ್ಧತೆ ಕೊನೆಗೊಳಿಸಲು ಶ್ರೀಲಂಕಾದ 26ನೇ ಪ್ರಧಾನಿಯಾಗಿ 73 ವರ್ಷದ ರನಿಲ್ ವಿಕ್ರಮಸಿಂಘೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ನಾನು ನಿಕಟ ಸಂಬಂಧವನ್ನು ಬಯಸುತ್ತೇನೆ ಮತ್ತು ನಾನು ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ವಿಕ್ರಮಸಿಂಘೆ ಅವರು ತಮ್ಮ ದೇಶಕ್ಕೆ ಭಾರತದ ಆರ್ಥಿಕ ಸಹಾಯವನ್ನು ಉಲ್ಲೇಖಿಸಿ ಹೇಳಿದರು. ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾತ್ರಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಭಾರತವು ಈ ವರ್ಷದ ಜನವರಿಯಿಂದ ಸಾಲ, ಕ್ರೆಡಿಟ್ ಲೈನ್‌ಗಳು ಮತ್ತು ಕ್ರೆಡಿಟ್ ಸ್ವಾಪ್‌ಗಳಲ್ಲಿ ಋಣಭಾರದಲ್ಲಿರುವ ಶ್ರೀಲಂಕಾಕ್ಕೆ 3 ಶತಕೋಟಿ ಯುಎಸ್​​ಡಿ ನೆರವು ನೀಡಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಅನುಗುಣವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಭಾರತ ಹೇಳಿದ್ದು ದ್ವೀಪ ರಾಷ್ಟ್ರದ ಜನರಿಗೆ ಭಾರತದ ಬದ್ಧತೆ ಮುಂದುವರಿಯುತ್ತದೆ ಎಂದು ಹೇಳಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ಹಿರಿಯ ಸಹೋದರ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ 73 ವರ್ಷದ ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್‌ಪಿ) ನಾಯಕ ಅವರು ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ನಡುವೆಯೇ ಸರ್ಕಾರ ವಿರೋಧಿ ಪ್ರತಿಭಟನಾಕರರ ಮೇಲೆ ರಾಜಪಕ್ಸೆ ಬೆಂಬಲಿಗರು ದಾಳಿ ನಡೆಸಿದ್ದು, ಈ ಹಿಂಸಾಚಾರದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. 200 ಮಂದಿಗೆ ಗಾಯಗಳಾಗಿವೆ.

ಇದನ್ನೂ ಓದಿ
Image
Srilanka Crisis: ಶ್ರೀಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ
Image
Forbes Richest Athletes: ಇವರೇ ನೋಡಿ ವಿಶ್ವದ ಶ್ರೀಮಂತ ಕ್ರೀಡಾಪಟುಗಳು..!
Image
ಭಾರತಕ್ಕೆ ಶ್ರೀಲಂಕಾ ವಲಸಿಗರ ಪ್ರವೇಶ ತಡೆಯಲು ಕ್ರಮ: ಎರಡೂ ದೇಶಗಳ ನೌಕಾಪಡೆಗಳಿಂದ ಗಸ್ತು
Image
ಶ್ರೀಲಂಕಾಗೆ ಸೇನಾಪಡೆ ಕಳುಹಿಸುವ ಕುರಿತು ಊಹಾತ್ಮಕ ಮಾಧ್ಯಮ ವರದಿ ನಿರಾಕರಿಸಿದ ಭಾರತ

ಪ್ರಧಾನಿ ವಿಕ್ರಮಸಿಂಘೆ ಅವರು ತಮ್ಮ ಗಮನ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವುದಕ್ಕೆ ಸೀಮಿತವಾಗಿದೆ ಎಂದು ಹೇಳಿದರು.”ಜನರಿಗೆ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಈ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತೇನೆ” ಎಂದು ಪ್ರಧಾನಿ ವಿಕ್ರಮಸಿಂಘೆ ಹೇಳಿದರು.

ಶ್ರೀಲಂಕಾದ 26ನೇ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರನಿಲ್ ವಿಕ್ರಮಸಿಂಘೆ, ಸಾಲದ ಸುಳಿಗೆ ಸಿಲುಕಿರುವ ದೇಶದಲ್ಲಿ ಸ್ಥಿರತೆ ಮೂಡಿಸುವ ಭರವಸೆ ನೀಡಿದರು. ನೂತನ ಪ್ರಧಾನಿಯನ್ನು ಅಭಿನಂದಿಸಿರುವ ಭಾರತ ಸರ್ಕಾರವು ಶ್ರೀಲಂಕಾದ ಜನರಿಗೆ ನೆರವಾಗುವ ನಮ್ಮ ಬದ್ಧತೆ ಮುಂದುವರಿಯುತ್ತದೆ. ದ್ವೀಪ ರಾಷ್ಟ್ರದ ಸಮಸ್ಯೆಗಳು ಶೀಘ್ರ ಪರಿಹಾರವಾಗಲಿ ಎಂದು ಆಶಯ ವ್ಯಕ್ತಪಡಿಸಿದೆ.

ವಕೀಲರಾಗಿದ್ದ ರನಿಲ್ ವಿಕ್ರಮಸಿಂಘೆ ಅವರಿಗೆ ಇದೀಗ 73 ವರ್ಷ. ಕಳೆದ 45 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದಾರೆ. ಈ ಮೊದಲು ನಾಲ್ಕು ಬಾರಿ ಪ್ರಧಾನಿಯಾಗಿ ಅಧಿಕಾರ ನಿರ್ವಹಿಸಿದ್ದರು. ಅಕ್ಟೋಬರ್ 2018ರಂದು ರನಿಲ್ ಅವರನ್ನು ಅಂದಿನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಪ್ರಧಾನಿ ಸ್ಥಾನದಿಂದ ವಜಾ ಮಾಡಿದ್ದರು. ಆದರೆ 2 ತಿಂಗಳ ನಂತರ ಮತ್ತು ಪುನರ್ ನಿಯೋಜನೆ ಮಾಡಲಾಗಿತ್ತು. ವಿಕ್ರಮಸಿಂಘೆ ದೂರದೃಷ್ಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಸಕ್ತ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಬಲ್ಲರು. ಅಂತರರಾಷ್ಟ್ರೀಯ ಸಮುದಾಯದ ವಿಶ್ವಾಸ ಗಳಿಸಿ, ದೇಶವನ್ನು ಮತ್ತೆ ಸಹಜತೆಯ ಹಳಿಗೆ ತರಬಲ್ಲರು ಎಂದು ಜನರು ನಿರೀಕ್ಷಿಸುತ್ತಿದ್ದಾರೆ.

Published On - 8:07 pm, Fri, 13 May 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ