AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದ ಸಂಸತ್ತು ವಿಸರ್ಜಿಸಿದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ

ಶ್ರೀಲಂಕಾ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ಎಡಪಂಥೀಯ ನಾಯಕ ಅನುರ ಕುಮಾರ ದಿಸ್ಸಾನಾಯಕೆ, ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಿ ಚುನಾವಣೆ ಘೋಷಿಸಿದ್ದಾರೆ. ಶ್ರೀಲಂಕಾದಲ್ಲಿ ದಶಕದಿಂದ ಜಾರಿಯಲ್ಲಿರುವ ರಾಜಕೀಯ ಕುಟುಂಬಗಳ ಆಡಳಿತಕ್ಕೆ ಬದಲಾವಣೆ ತರುವ ಚುನಾವಣಾ ಆಶ್ವಾಸನೆ ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ.

ಶ್ರೀಲಂಕಾದ ಸಂಸತ್ತು ವಿಸರ್ಜಿಸಿದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ
ಅನುರಾImage Credit source: PTI
ನಯನಾ ರಾಜೀವ್
|

Updated on: Sep 25, 2024 | 9:39 AM

Share

ಶ್ರೀಲಂಕಾದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರ ಕುಮಾರ ದಿಸ್ಸಾನಾಯಕೆ(Anura Kumara Dissanayake) ಸಂಸತ್ತನ್ನು ವಿಸರ್ಜಿಸಿದ್ದಾರೆ. ವಿಶೇಷ ಗೆಜೆಟ್ ಅಧಿಸೂಚನೆಗೆ ಸಹಿ ಹಾಕಿದರು. ನವೆಂಬರ್ 14 ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೇ, ದಿಸ್ಸಾನಾಯಕೆ ಅವರು ಗೆದ್ದರೆ ತಕ್ಷಣವೇ ಸಂಸತ್ತನ್ನು ವಿಸರ್ಜಿಸುವುದಾಗಿ ಸ್ಪಷ್ಟಪಡಿಸಿದ್ದರು. ಚುನಾವಣಾ ಫಲಿತಾಂಶಗಳು ಶನಿವಾರ ಬಂದಿದ್ದು, ಸೋಮವಾರವೇ ಅಧ್ಯಕ್ಷರಾಗಿ 56 ವರ್ಷದ ದಿಸ್ಸಾನಾಯಕೆ ಪ್ರಮಾಣ ವಚನ ಸ್ವೀಕರಿಸಿದರು.

ಶ್ರೀಲಂಕಾದಲ್ಲಿ ದಶಕದಿಂದ ಜಾರಿಯಲ್ಲಿರುವ ರಾಜಕೀಯ ಕುಟುಂಬಗಳ ಆಡಳಿತಕ್ಕೆ ಬದಲಾವಣೆ ತರುವ ಚುನಾವಣಾ ಆಶ್ವಾಸನೆ ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ದಿಸ್ಸಾನಾಯಕೆ ಅವರು ತಮ್ಮ ಭಾಷಣದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಾಯಕರ ಗೌರವವನ್ನು ಪುನಃಸ್ಥಾಪಿಸುವ ಭರವಸೆ ನೀಡಿದರು.

2020ರ ಆಗಸ್ಟ್ ನಲ್ಲಿ ಶ್ರೀಲಂಕಾ ಸಂಸತ್ತಿಗೆ ಚುನಾವಣೆ ನಡೆದಿತ್ತು. 2025ರ ಆಗಸ್ಟ್ ವರೆಗೆ ಸಂಸತ್ತಿನ ಅವಧಿ ಇದ್ದರೂ, ನಿಗದಿತ ಅವಧಿಗಿಂತ 11 ತಿಂಗಳು ಮುನ್ನವೇ ಸಂಸತ್ ವಿಸರ್ಜನೆಯಾಗಿದೆ. ಶ್ರೀಲಂಕಾವು ಈ ಎರಡು ಏಷ್ಯಾದ ದೈತ್ಯ ದೇಶಗಳ ನಡುವಿನ ಸಂಬಂಧಗಳನ್ನು ದೀರ್ಘಕಾಲದಿಂದ ಸಮತೋಲನದಿಂದ ಕಾಪಾಡಿಕೊಂಡು ಬಂದಿದೆ. ಆದರೆ ಈಗ ದಿಸ್ಸಾನಾಯಕೆ ಅವರ ಆಯ್ಕೆಯಿಂದ ದೇಶವು ಈಗ ಯಾವ ದಿಕ್ಕಿನಲ್ಲಿ ವಾಲಲಿದೆ ಎಂಬ ಬಗ್ಗೆ ಅನಿಶ್ಚಿತತೆ ಉಂಟಾಗಿದೆ.

ಮತ್ತಷ್ಟು ಓದಿ: ದೇಶದಲ್ಲಿ ಅಶಾಂತಿ ಸೃಷ್ಟಿಯಾದಾಗ ದೇಶ ಬಿಟ್ಟು ಪಲಾಯನ ಮಾಡಿರುವ ನಾಯಕರಲ್ಲಿ ಹಸೀನಾ ಮೊದಲಿಗರಲ್ಲ

ಚೀನಾದ ಸಾಲದಿಂದ ಉಂಟಾದ ಆರ್ಥಿಕ ಒತ್ತಡವನ್ನು ಸರಾಗಗೊಳಿಸಲು ಭಾರತದೊಂದಿಗೆ ಮಾತುಕತೆ ನಡೆಸುವಲ್ಲಿ ವಿಕ್ರಮಸಿಂಘೆ ಯಶಸ್ವಿಯಾಗಿದ್ದರೂ, ಅವರು ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಶ್ರೀಲಂಕಾದ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಲ್ಲಿ ದೊಡ್ಡ ಕ್ರಾಂತಿ ಕಂಡುಬಂದಿದೆ.

ಚುನಾವಣಾ ಫಲಿತಾಂಶದ ಪ್ರಕಾರ ಎಡಪಂಥೀಯ ನಾಯಕ ಅನುರ ಕುಮಾರ ಡಿಸಾನಾಯಕ ಶೇ.42.13ರಷ್ಟು ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಮೊದಲ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ನಿರ್ಗಮಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರು 17.27% ಮತಗಳನ್ನು ಪಡೆದರು. ಅದೇ ಸಮಯದಲ್ಲಿ, ಚುನಾವಣೆಯಲ್ಲಿ ಗೆದ್ದ ನಂತರ, ಡಿಸಾನಾಯಕ್ ಅವರು ತಮ್ಮ ಗೆಲುವು ಜನರ ಗೆಲುವು ಎಂದು ಬಣ್ಣಿಸಿದ್ದಾರೆ.

ಅನುರ ಕುಮಾರ ಡಿಸಾನಾಯಕ ಅವರು ತಮ್ಮ ಮಾರ್ಕ್ಸ್‌ವಾದಿ ಒಲವು ಹೊಂದಿರುವ ಜನತಾ ವಿಮುಕ್ತಿ ಪೆರೆಮುನ (ಜೆವಿಪಿ) ಪಕ್ಷವನ್ನು ಒಳಗೊಂಡಿರುವ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!