AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ

ಕೊಲಂಬೊದಿಂದ ಸಿಂಗಾಪುರ್ ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ
ಗೊಟಬಯ ರಾಜಪಕ್ಸ
TV9 Web
| Edited By: |

Updated on:Jul 14, 2022 | 8:25 PM

Share

ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಅಲ್ಲಿಂದ ಪಲಾಯನ ಮಾಡಿರುವ ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರ ರಾಜೀನಾಮೆ ಪತ್ರ ಲಭಿಸಿದೆ ಎಂದು ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಕೊಲಂಬೊದಿಂದ ಸಿಂಗಾಪುರ್ (Singapore) ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಗುರುವಾರ ಬೆಳಗ್ಗೆ ಸ್ಪೀಕರ್ ಹೇಳಿದ್ದರು. ಏತನ್ಮಧ್ಯೆ ಗುರುವಾರ ಸಂಜೆ ಗೊಟಬಯ ಅವರ ರಾಜೀನಾಮೆ ಪತ್ರ ಶ್ರೀಲಂಕಾ ಸಂಸತ್ ಗೆ ತಲುಪಿರುವುದಾಗಿ ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಸಿಂಗಾಪುರದಿಂದಲೇ ಶ್ರೀಲಂಕಾ ಅಧ್ಯಕ್ಷರು ಸಂಸತ್ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು  ಇಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದ್ದರೂ ಈ  ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸಾಂವಿಧಾನಿಕ ಪ್ರಕ್ರಿಯೆಗಳು  ಮುಗಿದ ನಂತರವೇ ರಾಜಪಕ್ಸ ಅವರ ರಾಜೀನಾಮೆ ಘೋಷಣೆ ಮಾಡಲಾಗುವುದು ಎಂದು ಸ್ಪೀಕರ್ ಕಚೇರಿ ಮೂಲಗಳು ಹೇಳಿವೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರು ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಇನ್ನು ಮುಂದೆ ಹೋಗಬಹುದು ಎಂದು  ನಾನು ಭಾವಿಸುತ್ತೇವೆ. ಅವರು ಶ್ರೀಲಂಕಾದಲ್ಲೇ ಇರುತ್ತಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ, ಅವರಿಗೆ ಅಲ್ಲಿ ಪ್ರಾಣಭಯವೂ ಇತ್ತು.ಮಾಲ್ಡೀವ್ಸ್ ನ ಕ್ರಮಗಳನ್ನು ನಾನು ಶ್ಲಾಘಿಸುತ್ತೇನೆ. ಶ್ರೀಲಂಕಾದ ಜನರಿಗೆ ನನ್ನ ಶುಭಾಶಯಗಳು ಎಂದು ಮಾಲ್ಡೀವ್ಸ್  ಅಧ್ಯಕ್ಷ ಮೊಹಮ್ಮದ್  ನಶೀದ್ ಟ್ವೀಟ್ ಮಾಡಿದ್ದಾರೆ.

Published On - 8:07 pm, Thu, 14 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ