AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ

ಕೊಲಂಬೊದಿಂದ ಸಿಂಗಾಪುರ್ ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ
ಗೊಟಬಯ ರಾಜಪಕ್ಸ
TV9 Web
| Edited By: |

Updated on:Jul 14, 2022 | 8:25 PM

Share

ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಅಲ್ಲಿಂದ ಪಲಾಯನ ಮಾಡಿರುವ ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರ ರಾಜೀನಾಮೆ ಪತ್ರ ಲಭಿಸಿದೆ ಎಂದು ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಕೊಲಂಬೊದಿಂದ ಸಿಂಗಾಪುರ್ (Singapore) ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಗುರುವಾರ ಬೆಳಗ್ಗೆ ಸ್ಪೀಕರ್ ಹೇಳಿದ್ದರು. ಏತನ್ಮಧ್ಯೆ ಗುರುವಾರ ಸಂಜೆ ಗೊಟಬಯ ಅವರ ರಾಜೀನಾಮೆ ಪತ್ರ ಶ್ರೀಲಂಕಾ ಸಂಸತ್ ಗೆ ತಲುಪಿರುವುದಾಗಿ ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಸಿಂಗಾಪುರದಿಂದಲೇ ಶ್ರೀಲಂಕಾ ಅಧ್ಯಕ್ಷರು ಸಂಸತ್ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು  ಇಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದ್ದರೂ ಈ  ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸಾಂವಿಧಾನಿಕ ಪ್ರಕ್ರಿಯೆಗಳು  ಮುಗಿದ ನಂತರವೇ ರಾಜಪಕ್ಸ ಅವರ ರಾಜೀನಾಮೆ ಘೋಷಣೆ ಮಾಡಲಾಗುವುದು ಎಂದು ಸ್ಪೀಕರ್ ಕಚೇರಿ ಮೂಲಗಳು ಹೇಳಿವೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರು ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಇನ್ನು ಮುಂದೆ ಹೋಗಬಹುದು ಎಂದು  ನಾನು ಭಾವಿಸುತ್ತೇವೆ. ಅವರು ಶ್ರೀಲಂಕಾದಲ್ಲೇ ಇರುತ್ತಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ, ಅವರಿಗೆ ಅಲ್ಲಿ ಪ್ರಾಣಭಯವೂ ಇತ್ತು.ಮಾಲ್ಡೀವ್ಸ್ ನ ಕ್ರಮಗಳನ್ನು ನಾನು ಶ್ಲಾಘಿಸುತ್ತೇನೆ. ಶ್ರೀಲಂಕಾದ ಜನರಿಗೆ ನನ್ನ ಶುಭಾಶಯಗಳು ಎಂದು ಮಾಲ್ಡೀವ್ಸ್  ಅಧ್ಯಕ್ಷ ಮೊಹಮ್ಮದ್  ನಶೀದ್ ಟ್ವೀಟ್ ಮಾಡಿದ್ದಾರೆ.

Published On - 8:07 pm, Thu, 14 July 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ