AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ

ಕೊಲಂಬೊದಿಂದ ಸಿಂಗಾಪುರ್ ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು.

Gotabaya Rajapaksa ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ರಾಜೀನಾಮೆ
ಗೊಟಬಯ ರಾಜಪಕ್ಸ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 8:25 PM

Share

ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಅಲ್ಲಿಂದ ಪಲಾಯನ ಮಾಡಿರುವ ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರ ರಾಜೀನಾಮೆ ಪತ್ರ ಲಭಿಸಿದೆ ಎಂದು ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಕೊಲಂಬೊದಿಂದ ಸಿಂಗಾಪುರ್ (Singapore) ತಲುಪಿರುವ ಗೊಟಬಯ, ಶ್ರೀಲಂಕಾ ತೊರೆಯುವ ಹೊತ್ತಲ್ಲಿ ತಾನು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಪತ್ರ ಕಳುಹಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಗುರುವಾರ ಬೆಳಗ್ಗೆ ಸ್ಪೀಕರ್ ಹೇಳಿದ್ದರು. ಏತನ್ಮಧ್ಯೆ ಗುರುವಾರ ಸಂಜೆ ಗೊಟಬಯ ಅವರ ರಾಜೀನಾಮೆ ಪತ್ರ ಶ್ರೀಲಂಕಾ ಸಂಸತ್ ಗೆ ತಲುಪಿರುವುದಾಗಿ ಶ್ರೀಲಂಕಾದ ಸ್ಪೀಕರ್ ಕಚೇರಿ ಹೇಳಿದೆ. ಸಿಂಗಾಪುರದಿಂದಲೇ ಶ್ರೀಲಂಕಾ ಅಧ್ಯಕ್ಷರು ಸಂಸತ್ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು  ಇಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದ್ದರೂ ಈ  ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸಾಂವಿಧಾನಿಕ ಪ್ರಕ್ರಿಯೆಗಳು  ಮುಗಿದ ನಂತರವೇ ರಾಜಪಕ್ಸ ಅವರ ರಾಜೀನಾಮೆ ಘೋಷಣೆ ಮಾಡಲಾಗುವುದು ಎಂದು ಸ್ಪೀಕರ್ ಕಚೇರಿ ಮೂಲಗಳು ಹೇಳಿವೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರು ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಇನ್ನು ಮುಂದೆ ಹೋಗಬಹುದು ಎಂದು  ನಾನು ಭಾವಿಸುತ್ತೇವೆ. ಅವರು ಶ್ರೀಲಂಕಾದಲ್ಲೇ ಇರುತ್ತಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ, ಅವರಿಗೆ ಅಲ್ಲಿ ಪ್ರಾಣಭಯವೂ ಇತ್ತು.ಮಾಲ್ಡೀವ್ಸ್ ನ ಕ್ರಮಗಳನ್ನು ನಾನು ಶ್ಲಾಘಿಸುತ್ತೇನೆ. ಶ್ರೀಲಂಕಾದ ಜನರಿಗೆ ನನ್ನ ಶುಭಾಶಯಗಳು ಎಂದು ಮಾಲ್ಡೀವ್ಸ್  ಅಧ್ಯಕ್ಷ ಮೊಹಮ್ಮದ್  ನಶೀದ್ ಟ್ವೀಟ್ ಮಾಡಿದ್ದಾರೆ.

Published On - 8:07 pm, Thu, 14 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು