AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srilanka Crisis: ಶ್ರೀಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದಿದ್ದ ಮಹಿಂದಾ ರಾಜಪಕ್ಸ ಆರ್ಥಿಕ ಬಿಕ್ಕಟ್ಟು ನಿರ್ವಹಿಸಲಾಗದೆ ರಾಜೀನಾಮೆ ನೀಡಿದ್ದರು.

Srilanka Crisis: ಶ್ರೀಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ
ಶ್ರೀಲಂಕಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ರನಿಲ್ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷ ಗೊಟಬಾಯ ರಾಜಪಕ್ಸ ಅಭಿನಂದಿಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 13, 2022 | 7:22 AM

ಕೊಲಂಬೊ: ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿರುವ ಶ್ರೀಲಂಕಾದ (Srilanka Economic Crisis) ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ (Ranil Wikramasinghe) ಗುರುವಾರ (ಮೇ 12) ಅಧಿಕಾರ ಸ್ವೀಕರಿಸಿದರು. ವಿವಿಧ ದೇಶಗಳ ಮುಂಚೂಣಿ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ರನಿಲ್, ಶ್ರೀಲಂಕಾದ ಪ್ರಸ್ತುತ ಬಿಕ್ಕಟ್ಟನ್ನು ಶಮನಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಅಲ್ಲಿನ ಜನರು ನಿರೀಕ್ಷೆ ಇರಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದಿದ್ದ ಮಹಿಂದಾ ರಾಜಪಕ್ಸ ಆರ್ಥಿಕ ಬಿಕ್ಕಟ್ಟು ನಿರ್ವಹಿಸಲಾಗದೆ ರಾಜೀನಾಮೆ ನೀಡಿದ್ದರು. ಮಹಿಂದಾ ವಿರುದ್ಧ ಶ್ರೀಲಂಕಾದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಶ್ರೀಲಂಕಾ ಬಿಕ್ಕಟ್ಟು ಕುರಿತು ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಆಡಳಿತ ಪಕ್ಷವಾಗಿರುವ ಶ್ರೀಲಂಕಾ ಪೊಡೊಜನ ಪೆರಮುನ (Sri Lanka Podujana Peramuna – SLPP) ಮತ್ತು ಮುಖ್ಯ ಪ್ರತಿಪಕ್ಷ ಸಮಾಗಿ ಜನ ಬಳವೆಗಾಯ (Samagi Jana Balawegaya – SJB) ಪಕ್ಷಗಳು ರನಿಲ್ ಅವರಿಗೆ ಸಂಸತ್ತಿನಲ್ಲಿ ವಿಶ್ವಾಸಮತ ಗೆಲ್ಲಲು ಬೆಂಬಲ ನೀಡಲುವುದಾಗಿ ಘೋಷಿಸಿವೆ. ಶ್ರೀಲಂಕಾದ ಅತ್ಯಂತ ಹಳೆಯ ಪಕ್ಷವಾದ ಯುನೈಟೆಡ್ ನ್ಯಾಷನಲ್ ಪಾರ್ಟಿ (United National Party – UNP) ನಾಯಕರಾದ ರನಿಲ್ ವಿಕ್ರಮಸಿಂಘೆ ಅವರ ಪಕ್ಷವು ಕಳೆದ ಚುನಾವಣೆಯಲ್ಲಿ ಸೋತಿತ್ತು. ಕೊಲಂಬೊದಿಂದ ಚುನಾವಣೆ ಎದುರಿಸಿದ್ದ ಸ್ವತಃ ರನಿಲ್ ಸಹ ಸೋತಿದ್ದರು.

ಶ್ರೀಲಂಕಾದ 26ನೇ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರನಿಲ್ ವಿಕ್ರಮಸಿಂಘೆ, ಸಾಲದ ಸುಳಿಗೆ ಸಿಲುಕಿರುವ ದೇಶದಲ್ಲಿ ಸ್ಥಿರತೆ ಮೂಡಿಸುವ ಭರವಸೆ ನೀಡಿದರು. ನೂತನ ಪ್ರಧಾನಿಯನ್ನು ಅಭಿನಂದಿಸಿರುವ ಭಾರತ ಸರ್ಕಾರವು ಶ್ರೀಲಂಕಾದ ಜನರಿಗೆ ನೆರವಾಗುವ ನಮ್ಮ ಬದ್ಧತೆ ಮುಂದುವರಿಯುತ್ತದೆ. ದ್ವೀಪ ರಾಷ್ಟ್ರದ ಸಮಸ್ಯೆಗಳು ಶೀಘ್ರ ಪರಿಹಾರವಾಗಲಿ ಎಂದು ಆಶಯ ವ್ಯಕ್ತಪಡಿಸಿದೆ.

ವಕೀಲರಾಗಿದ್ದ ರನಿಲ್ ವಿಕ್ರಮಸಿಂಘೆ ಅವರಿಗೆ ಇದೀಗ 73 ವರ್ಷ. ಕಳೆದ 45 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದಾರೆ. ಈ ಮೊದಲು ನಾಲ್ಕು ಬಾರಿ ಪ್ರಧಾನಿಯಾಗಿ ಅಧಿಕಾರ ನಿರ್ವಹಿಸಿದ್ದರು. ಅಕ್ಟೋಬರ್ 2018ರಂದು ರನಿಲ್ ಅವರನ್ನು ಅಂದಿನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಪ್ರಧಾನಿ ಸ್ಥಾನದಿಂದ ವಜಾ ಮಾಡಿದ್ದರು. ಆದರೆ 2 ತಿಂಗಳ ನಂತರ ಮತ್ತು ಪುನರ್​ ನಿಯೋಜನೆ ಮಾಡಲಾಗಿತ್ತು.

ದೂರದೃಷ್ಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಸಕ್ತ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಬಲ್ಲರು. ಅಂತರರಾಷ್ಟ್ರೀಯ ಸಮುದಾಯದ ವಿಶ್ವಾಸ ಗಳಿಸಿ, ದೇಶವನ್ನು ಮತ್ತೆ ಸಹಜತೆಯ ಹಳಿಗೆ ತರಬಲ್ಲರು ಎಂದು ಜನರು ನಿರೀಕ್ಷಿಸುತ್ತಿದ್ದಾರೆ.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Ranil Wickremesinghe takes oath as new PM

Published On - 7:07 am, Fri, 13 May 22

ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್