AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

Mahinda Rajapaksa: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

Sri Lanka Crisis: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ
ಮಹಿಂದ ರಾಜಪಕ್ಸೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 09, 2022 | 4:24 PM

Share

ಕೊಲಂಬೊ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ಮೂಲವನ್ನು ಉಲ್ಲೇಖಿಸಿ ವರದಿ ಮಾಡಿವೆ. ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಅವರಿಗೆ ಮಹಿಂದ ರಾಜಪಕ್ಸೆ ಈಗಾಗಲೇ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಆಡಳಿತಾರೂಢ ರಾಜಕೀಯ ಪಕ್ಷ ಶ್ರೀಲಂಕಾ ಪೊದುಜಾ ಪೆರಮುನ (Sri Lanka Poduja Peramuna – SLPP) ಕಾರ್ಯಕರ್ತರು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಸೋಮವಾರ ಮುಂಜಾನೆ ಸಭೆ ನಡೆಸಿದ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮೊದಲು ಎಸ್​ಎಲ್​ಪಿಪಿ ಕಾರ್ಯಕರ್ತರು ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ್ದರು.

ಶ್ರೀಲಂಕಾ ಪ್ರಧಾನಿಯ ಅಧಿಕೃತ ನಿವಾಸ ಟೆಂಪಲ್ ಟ್ರೀಸ್ ಸಮೀಪ ಸರ್ಕಾರ ವಿರೋಧಿ ಪ್ರತಿಭಟನಾಕಾರರು ‘ಮೈನಾ ಗೊ ಗಾಮ’ (ಮಹಿಂದಾ ರಾಜೀನಾಮೆ ಕೊಡು) ಮತ್ತು ‘ಗೊಟಾ ಗೊ ಗಾಮ’ (ಗೊಟಬಾಯ ರಾಜೀನಾಮೆ ಕೊಡು) ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ನುಗ್ಗಿದ್ದ ಆಡಳಿತ ಪಕ್ಷದ ಬೆಂಬಲಿಗರು ಪ್ರತಿಭಟನಾಕಾರರು ಹಾಕಿಕೊಂಡಿದ್ದ ಟೆಂಟ್​ಗಳನ್ನು ಹರಿದು ಹಾಕಿದರು. ದಾಳಿಕಾರರನ್ನು ಚೆದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಶೆಲ್​ಗಳನ್ನು ಸಿಡಿಸಬೇಕಾಯಿತು.

ಮುಗ್ಧ ಪ್ರತಿಭಟನಾಕಾರರ ಮೇಲೆ ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ನಡೆದ ನಂತರ ರಾಜಪಕ್ಸೆಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡಬೇಕು ಎಂಬ ಒತ್ತಾಯ ದೇಶಾತ್ಯಂತ ತೀವ್ರಗೊಂಡಿತು. ಅಧ್ಯಕ್ಷರ ನಿವಾಸದ ಎದುರು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬಹುತೇಕರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. ವಿದೇಶಿ ಮೀಸಲು ಕೊರತೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಪ್ರತಿಭಟನೆಗಳಿಗೆ ಮಹಿಂದಾ ರಾಜಪಕ್ಸೆ ಈವರೆಗೆ ಮಣಿದಿರಲಿಲ್ಲ.

ಅಧ್ಯಕ್ಷ ಗೊಟಬಾಯ ಈ ಹಿಂದೆಯೇ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಅಧಿಕಾರದಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದರು. ಆದರೆ ಈ ಸೂಚನೆಯನ್ನು ಮಹಿಂದಾ ರಾಜಪಕ್ಸೆ ಒಪ್ಪಿರಲಿಲ್ಲ. ಶ್ರೀಲಂಕಾದ ಆಡಳಿತಾರೂಢ ಎಸ್​ಎಲ್​ಪಿಪಿ ಮತ್ತು ಅದರ ಮಿತ್ರಪಕ್ಷಗಳು ಈ ಸಂಬಂಧ ಹಲವು ಬಾರಿ ಸಭೆ ಸೇರಿ ಚರ್ಚೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದ್ದವು. ಆದರೂ ಮಹಿಂದಾ ರಾಜಪಕ್ಸೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರಲಿಲ್ಲ. ಆದರೆ ಇಂದು ಎಲ್​ಎಲ್​ಪಿಪಿ ಬೆಂಬಲಿಗರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಹಿಂಸಾತ್ಮಕ ದಾಳಿ ನಡೆಸಿದ ನಂತರ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಲು ನಿರ್ಧರಿಸಿದರು.

ಇದನ್ನೂ ಓದಿ: Sri Lanka crisis ಜನರಿಗಾಗಿ ಯಾವುದೇ ರೀತಿಯ ತ್ಯಾಗ ಮಾಡಲು ಸಿದ್ಧ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ

ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ, ನೇಪಾಳ, ಪಾಕಿಸ್ತಾನದಲ್ಲಿ ವಿದೇಶಿ ಮೀಸಲು ನಿಧಿ ಕುಸಿತ: ಭಾರತದ ಸುತ್ತಲ ದೇಶಗಳಲ್ಲಿ ತಲ್ಲಣ

Published On - 4:23 pm, Mon, 9 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!