AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಹುಳುಕು; ಶ್ರೀನಗರದಿಂದ ಶಾರ್ಜಾಕ್ಕೆ ಹೋಗುವ ವಿಮಾನಗಳು ಪಾಕ್​ ವಾಯುಪ್ರದೇಶ ಪ್ರವೇಶಿಸುವಂತಿಲ್ಲ !

ಶ್ರೀನಗರದಿಂದ ಶಾರ್ಜಾಕ್ಕೆ ವಿಮಾನಯಾನಕ್ಕೆ ಇತ್ತೀಚೆಗೆಷ್ಟೇ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದರು. ಆಗನಿಂದಲೂ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ.

ಪಾಕಿಸ್ತಾನದ ಹುಳುಕು; ಶ್ರೀನಗರದಿಂದ ಶಾರ್ಜಾಕ್ಕೆ ಹೋಗುವ ವಿಮಾನಗಳು ಪಾಕ್​ ವಾಯುಪ್ರದೇಶ ಪ್ರವೇಶಿಸುವಂತಿಲ್ಲ !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 03, 2021 | 12:15 PM

Share

ದೆಹಲಿ: ಜಮ್ಮು-ಕಾಶ್ಮೀರದ ಶ್ರೀನಗರದಿಂದ ಶಾರ್ಜಾ (ಯುನೈಟೆಡ್ ಅರಬ್​ ಎಮಿರೇಟ್ಸ್​)ಕ್ಕೆ ಹೋಗುವ ವಿಮಾನಗಳು  ಇನ್ನು ಮುಂದೆ ಪಾಕಿಸ್ತಾನದ ಭೂಪ್ರದೇಶದ ಮೇಲೆ ಹಾರಬಾರದು ಎಂದು ಆ ದೇಶ ಹೇಳಿದೆ. ಅಂದರೆ ಶ್ರೀನಗರದಿಂದ ಶಾರ್ಜಾಕ್ಕೆ ಪಾಕ್​ ವಾಯುಮಾರ್ಗದ ಮೂಲಕ ತೆರಳುತ್ತಿದ್ದ ವಿಮಾನಗಳು ಇನ್ನು ಮುಂದೆ ಆ ಮಾರ್ಗದಲ್ಲಿ ಹೋಗುವಂತಿಲ್ಲ. ಇದು ಜಮ್ಮು-ಕಾಶ್ಮೀರ ಜನರಿಗೆ ತೀವ್ರ ಸಮಸ್ಯೆಯನ್ನುಂಟು ಮಾಡಿದೆ. 

ಪಾಕಿಸ್ತಾನದ ಈ ಆದೇಶ ಅಂತಾರಾಷ್ಟ್ರೀಯ ವಾಯುಯಾನ ನಿಮಯಗಳ ಉಲ್ಲಂಘನೆಯಾಗಿದೆ. ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO)  ನೀಡಿರುವ ವಾಯುಯಾನ ಸ್ವಾತಂತ್ರ್ಯವನ್ನು ಪಾಕಿಸ್ತಾನ ಇದೀಗ ಜಮ್ಮು-ಕಾಶ್ಮೀರ ಜನರಿಂದ ಕಿತ್ತುಕೊಂಡಂತಾಗಿದೆ. ಶಾರ್ಜಾಕ್ಕೆ ಹೋಗುವ ವಿಮಾನಗಳು ಪಾಕಿಸ್ತಾನದ ಭೂಪ್ರದೇಶದ ಮೇಲೆ ಹಾರುವಂತಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದ್ದರಿಂದ ಇನ್ನು ಮುಂದೆ ಶ್ರೀನಗರದಿಂದ ಶಾರ್ಜಾಕ್ಕೆ ಹೋಗುವ ಫ್ಲೈಟ್​​ಗಳು ಉದಯಪುರ, ಅಹ್ಮದಾಬಾದ್​ ಮತ್ತು ಒಮನ್​ ಮೂಲಕ ಹಾರಬೇಕು. ಇದರಿಂದ ಒಂದರಿಂದ-ಒಂದೂವರೆ ತಾಸು ಹೆಚ್ಚಿನ ಪ್ರಯಾಣ ಮಾಡಬೇಕು ಮತ್ತು ಟಿಕೆಟ್​ ಬೆಲೆಯೂ ಹೆಚ್ಚಾಗಿದೆ. ಹೀಗಾಗಿ ಸಹಜವಾಗಿಯೇ ಜನರಿಗೆ ಹೊರೆಯಾಗಿ ಪರಿಣಮಿಸಲಿದೆ.

ಶ್ರೀನಗರದಿಂದ ಶಾರ್ಜಾಕ್ಕೆ ವಿಮಾನಯಾನಕ್ಕೆ ಇತ್ತೀಚೆಗೆಷ್ಟೇ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದರು. ಆಗನಿಂದಲೂ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ. ಈ ವಿಮಾನಗಳು ನಮ್ಮ ಭೂಪ್ರದೇಶದ ಮೇಲ್ಭಾಗದಲ್ಲಿ ಹಾರಾಟ ನಡೆಸಬಾರದು ಎಂದು ಇದೀಗ ಪಾಕಿಸ್ತಾನ ಹೇಳಿದೆ. ಈ ವಿಮಾನ ಹಾರಾಟ ಸಂಬಂಧ ಭಾರತ ಮತ್ತು ದುಬೈ ಸರ್ಕಾರಗಳ ಒಪ್ಪಂದದಿಂದ ಪಾಕಿಸ್ತಾನ ಸಿಟ್ಟಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಲ್ಲದೆ, ಶ್ರೀನಗರದಿಂದ ವಿಮಾನ ಹಾರಾಟ ಶುರುವಾಗುವುದಕ್ಕೂ ಮೊದಲು ನಮ್ಮ ವಾಯುಮಾರ್ಗವನ್ನು ಅವು ಪ್ರವೇಶಿಸಲು ಭಾರತ-ದುಬೈ ಸರ್ಕಾರಗಳು ಪಾಕಿಸ್ತಾನ ಸರ್ಕಾರದ ಅನುಮತಿ ಕೇಳಬೇಕಿತ್ತು ಎಂಬುದು ಆ ದೇಶದ ವಾದ.  ಇದೀಗ ಪಾಕಿಸ್ತಾನ ಸರ್ಕಾರ ತನ್ನ ನಿರ್ಧಾರವನ್ನು ಭಾರತದ ನಾಗರಿಕ ವಿಮಾನ ಯಾನ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಎರಡಕ್ಕೂ ತಿಳಿಸಿದೆ.

ಇದನ್ನೂ ಓದಿ: Puneeth Rajkumar: ನವೆಂಬರ್ 16ಕ್ಕೆ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ; ಚಿತ್ರರಂಗದವರಿಗೆ ಮಾತ್ರ ಪ್ರವೇಶ

ಮಗನ ಕಣ್ಣಿಗೆ ಐ ಡ್ರಾಪ್​ ಬದಲು ಅಂಟು ಹಾಕಿದ ಅಪ್ಪ; ಬಾಲಕನ ದೃಷ್ಟಿ ಉಳಿಸಿಕೊಟ್ಟ ವೈದ್ಯರು

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!