AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ

ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.

ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನ
ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ.
ಆಯೇಷಾ ಬಾನು
|

Updated on:Jan 10, 2021 | 12:47 PM

Share

ಇಂಡೋನೇಷ್ಯಾದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಬೋಯಿಂಗ್ 737-500 ಟೇಕ್ ಆಫ್ ಆದ 4 ನಿಮಿಷದಲ್ಲೇ ಸಮುದ್ರಕ್ಕೆ ಬಿದ್ದಿದೆ. ಈ ವಿಮಾನದಲ್ಲಿ 62 ಜನರಿದ್ದರು.

ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವ ಕುರಿತು ಇಂಡೋನೇಷಿಯಾ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಸುಮಾರು 10 ಸಾವಿರ ಅಡಿ ಎತ್ತರದಿಂದ ವಿಮಾನ ಸಮುದ್ರಕ್ಕೆ ಬಿದ್ದ ಹಿನ್ನೆಲೆ 62 ಜನ ಬದುಕುಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರಿಗೆ ಶಾಕ್ ಮೀನುಗಾರರಿಗೆ ವಿಮಾನದ ಅವಶೇಷ ದೊರೆತಿದೆ.ಪ್ರಯಾಣಿಕರ ದೇಹದ ಭಾಗ, ಬಟ್ಟೆ ಚೂರುಗಳು ಪತ್ತೆಯಅಗಿವೆ. ಅಷ್ಟಕ್ಕೂ ಮಳೆ ಕಾರಣ ನಿಗದಿತ ಸಮಯಕ್ಕಿಂತ 30 ನಿಮಿಷ ವಿಳಂಬವಾಗಿ ವಿಮಾನ ಹೊರಟಿತ್ತು. ಪಶ್ಚಿಮ ಕಾಲಿಮಂತನ್ ಪ್ರಾಂತ್ಯದ ಪಾಂಟಿಯಾನಾಕ್​ಗೆ ತೆರಳುತ್ತಿದ್ದ ವಿಮಾನ ಮಧ್ಯಾಹ್ನ 2.40ಕ್ಕೆ ರೇಡಾರ್ ನಿಂದ ನಾಪತ್ತೆಯಾಗಿತ್ತು. ವಿಮಾನವು 26 ವರ್ಷ ಹಳೆಯದಾಗಿತ್ತು.

ಜಕಾರ್ತ ಮತ್ತು ಪಾಂಟಿಯಾನಾಕ್ ಏರ್ಪೋರ್ಟ್​ನಲ್ಲಿ ಕಾಯ್ತಿದ್ದ ಕುಟುಂಬದವರು ಮತ್ತು ಸ್ನೇಹಿತರಿಗೆ ಈ ಘಟನೆ ಶಾಕ್ ನೀಡಿದೆ. 2018ರಲ್ಲಿ ಜಕಾರ್ತದಲ್ಲಿ ಲಯನ್ ಏರ್ ಕಂಪನಿಯ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನವಾಗಿ 189 ಪ್ರಯಾಣಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಘೋರ ದುರಂತ ನಡೆದುಹೋಗಿದೆ.

ಜಕಾರ್ತದಿಂದ ಟೇಕ್​ ಆಫ್​ ಆದ ಇಂಡೋನೇಷ್ಯಾದ ವಿಮಾನ ನಾಪತ್ತೆ!

Published On - 8:10 am, Sun, 10 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?