AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಇರಿತಕ್ಕೆ 10 ಮಂದಿ ಸಾವು, ಹತ್ತಾರು ಮಂದಿಗೆ ಗಾಯ: ಇಬ್ಬರು ಶಂಕಿತರ ಗುರುತು ಪತ್ತೆ

ಗಾಯಗೊಂಡಿರುವ 15ಕ್ಕೂ ಹೆಚ್ಚು ಜನರನ್ನು ಪೊಲೀಸರೇ ಸುತ್ತಮುತ್ತಲ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಒಂದಿಷ್ಟು ಜನರು ತಾವೇ ಸ್ವತಃ ಆಸ್ಪತ್ರೆಗಳಿಗೆ ಬಂದಿದ್ದಾರೆ.

ಕೆನಡಾದಲ್ಲಿ ಇರಿತಕ್ಕೆ 10 ಮಂದಿ ಸಾವು, ಹತ್ತಾರು ಮಂದಿಗೆ ಗಾಯ: ಇಬ್ಬರು ಶಂಕಿತರ ಗುರುತು ಪತ್ತೆ
ಕೆನಡಾ ಪೊಲೀಸರು ಶಂಕಿತರ ಚಿತ್ರ ಬಿಡುಗಡೆ ಮಾಡಿದ್ದಾರೆ
TV9 Web
| Edited By: |

Updated on:Sep 05, 2022 | 8:27 AM

Share

ಒಟ್ಟಾವ: ಕೆನಡಾದಲ್ಲಿ (Canada) ಭಾನುವಾರ ಚೂಪಾದ ಆಯುಧಗಳಿಂದ ಇರಿದು ಕನಿಷ್ಠ 10 ಮಂದಿಯನ್ನು ಕೊಲ್ಲಲಾಗಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಗಳಾಗಿದ್ದು, ಇಬ್ಬರು ಶಂಕಿತರ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ವೆಲ್ಡನ್ ಪಟ್ಟಣದಲ್ಲಿರುವ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಎಂಬಲ್ಲಿ ಸ್ಥಳೀಯ ಬುಡಕಟ್ಟು ಜನರಲ್ಲಿ ಗಲಾಟೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗಾಯಗೊಂಡಿರುವ 15ಕ್ಕೂ ಹೆಚ್ಚು ಜನರನ್ನು ಪೊಲೀಸರೇ ಸುತ್ತಮುತ್ತಲ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಒಂದಿಷ್ಟು ಜನರು ತಾವೇ ಸ್ವತಃ ಆಸ್ಪತ್ರೆಗಳಿಗೆ ಬಂದಿದ್ದಾರೆ.

ಡಾಮಿಯನ್ ಮತ್ತು ಮೈಲ್ಸ್​ ಸ್ಯಾಂಡರ್ಸನ್ ಎನ್ನುವ ಇಬ್ಬರು ಈ ಘಟನೆಯ ಹಿಂದಿದ್ದಾರೆ ಎಂದು ಶಂಕಿಸಲಾಗಿದೆ. 30ರ ಹರೆಯಲ್ಲಿರುವ ಇಬ್ಬರನ್ನೂ ಪೊಲೀಸರು ಹುಡುಕುತ್ತಿದ್ದಾರೆ. ಇಷ್ಟೊಂದು ಜನರನ್ನು ಏಕಾಏಕಿ ಕೊಲ್ಲಲು ಏನು ಕಅರಣ ಎನ್ನುವುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಕೊಲೆಯ ನಂತರ ಶಂಕಿತರು ಕಪ್ಪು ಕಾರಿನಲ್ಲಿ ಪರಾರಿಯಾಗಿದ್ದಾರೆ. ವಿವಿಧೆಡೆ ಚೆಕ್​ಪೋಸ್ಟ್​ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಹೆದ್ದಾರಿ ಮತ್ತು ರಸ್ತೆಬದಿಗಳಲ್ಲಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಪ್ರಧಾನಿ ಜಸ್ಟಿನ್ ಟ್ರೂಡೇ ಘಟನೆಯನ್ನು ‘ಹೃದಯವಿದ್ರಾವಕ’ ಎಂದು ಖಂಡಿಸಿದ್ದಾರೆ. ಜೇಮ್ಸ್​ ಸ್ಮಿತ್ ಕ್ರೀ ನೇಷನ್ ಪ್ರದೇಶದಲ್ಲಿ ಸ್ಥಳೀಯ ತುರ್ತುಸ್ಥಿತಿ ಘೋಷಿಸಲಾಗಿದ್ದು, ಸಸ್ಕಾಚ್​ವಾಲ್ ಪ್ರಾಂತ್ಯದ ಜನರಿಗೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಸೂಚಿಸಲಾಗಿದೆ. ಮೃತರು ಮತ್ತು ಗಾಯಾಳುಗಳ ಸಂಬಂಧಿಗಳನ್ನು ಸ್ಥಳಕ್ಕೆ ಕರೆದೊಯ್ಯಲು ಸರ್ಕಾರವೇ ಹೆಲಿಕಾಪ್ಟರ್ ಮತ್ತು ವಾಹನಗಳ​ ವ್ಯವಸ್ಥೆ ಮಾಡಿದೆ. ಹಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕ್ಕಪಕ್ಕದ ನಗರಗಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Published On - 8:27 am, Mon, 5 September 22

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ