AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stabbings In Canada ಕೆನಡಾದಲ್ಲಿ ಚೂರಿ ಇರಿತ; 10 ಮಂದಿ ಸಾವು, ಆರೋಪಿಗಳಿಗಾಗಿ ಪೊಲೀಸ್ ಶೋಧ

ತುರ್ತು ಕರೆಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ದೂರದ ಸ್ಥಳೀಯ ಸಮುದಾಯದ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಮತ್ತು ಹತ್ತಿರದ ಪಟ್ಟಣವಾದ ಸಾಸ್ಕಾಚೆವಾನ್‌ನ ವೆಲ್ಡನ್‌ನಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಸಹಾಯಕ ಕಮಿಷನರ್ ರೊಂಡಾ ಬ್ಲಾಕ್‌ಮೋರ್...

Stabbings In Canada ಕೆನಡಾದಲ್ಲಿ ಚೂರಿ ಇರಿತ; 10 ಮಂದಿ ಸಾವು, ಆರೋಪಿಗಳಿಗಾಗಿ ಪೊಲೀಸ್ ಶೋಧ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 05, 2022 | 1:53 PM

Share

ಒಟ್ಟಾವಾ: ಕೆನಡಾದ (Canada) ಸಾಸ್ಕಾಚೆವಾನ್ (Saskatchewan) ಪ್ರಾಂತ್ಯದ ಸ್ಥಳೀಯ ಸಮುದಾಯ ಮತ್ತು ಸಮೀಪದ ಪಟ್ಟಣದಲ್ಲಿ ಭಾನುವಾರ ನಡೆದ ಚೂರಿ ಇರಿತದಲ್ಲಿ 10 ಜನರು ಸಾವಿಗೀಡಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಶಂಕಿತರ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ತುರ್ತು ಕರೆಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ದೂರದ ಸ್ಥಳೀಯ ಸಮುದಾಯದ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಮತ್ತು ಹತ್ತಿರದ ಪಟ್ಟಣವಾದ ಸಾಸ್ಕಾಚೆವಾನ್‌ನ ವೆಲ್ಡನ್‌ನಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಸಹಾಯಕ ಕಮಿಷನರ್ ರೊಂಡಾ ಬ್ಲಾಕ್‌ಮೋರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕನಿಷ್ಠ 15 ಜನರು ಗಾಯಗೊಂಡು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ನಾವು ಇಬ್ಬರು ಶಂಕಿತರನ್ನು ಹುಡುಕುತ್ತಿದ್ದೇವೆ.  ಆಪಾದಿತ ದಾಳಿಕೋರರು ವಾಹನದಲ್ಲಿ ಓಡಿಹೋಗಿದ್ದಾರೆ. ಕಪ್ಪು ಕೂದಲು ಮತ್ತು ಕಂದು ಕಣ್ಣುಗಳುಳ್ಳ ಅವರನ್ನು 30 ಮತ್ತು 31 ವರ್ಷ ವಯಸ್ಸಿನ ಮೈಲ್ಸ್ ಮತ್ತು ಡೇಮಿಯನ್ ಸ್ಯಾಂಡರ್ಸನ್ ಎಂದು ಗುರುತಿಸಲಾಗಿದೆ.

2,500 ಜನಸಂಖ್ಯೆಯನ್ನು ಹೊಂದಿರುವ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಸ್ಥಳೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತು, ಆದರೆ ಸಾಸ್ಕಾಚೆವಾನ್ ಪ್ರಾಂತ್ಯದ ಅನೇಕ ನಿವಾಸಿಗಳು ಸ್ಥಳದಲ್ಲಿ ಆಶ್ರಯ ಪಡೆಯುವಂತೆ ಒತ್ತಾಯಿಸಲಾಗಿದೆ.

ಪ್ರಧಾನಿ ಜಸ್ಟಿನ್ ಟ್ರುಡೊ ಈ ದಾಳಿಯನ್ನು “ಭಯಾನಕ ಮತ್ತು ಹೃದಯವಿದ್ರಾವಕ” ಎಂದು ಹೇಳಿದ್ದು ಮೃತರಿಗೆ  ಸಂತಾಪ ಸೂಚಿಸಿದ್ದು ,  ಅಧಿಕಾರಿಗಳ ಸೂಚನೆಗಳನ್ನು ಗಮನಿಸುವಂತೆ ನಿವಾಸಿಗಳನ್ನು ಒತ್ತಾಯಿಸಿದರು.

Published On - 1:26 pm, Mon, 5 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ