AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stabbings In Canada ಕೆನಡಾದಲ್ಲಿ ಚೂರಿ ಇರಿತ; 10 ಮಂದಿ ಸಾವು, ಆರೋಪಿಗಳಿಗಾಗಿ ಪೊಲೀಸ್ ಶೋಧ

ತುರ್ತು ಕರೆಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ದೂರದ ಸ್ಥಳೀಯ ಸಮುದಾಯದ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಮತ್ತು ಹತ್ತಿರದ ಪಟ್ಟಣವಾದ ಸಾಸ್ಕಾಚೆವಾನ್‌ನ ವೆಲ್ಡನ್‌ನಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಸಹಾಯಕ ಕಮಿಷನರ್ ರೊಂಡಾ ಬ್ಲಾಕ್‌ಮೋರ್...

Stabbings In Canada ಕೆನಡಾದಲ್ಲಿ ಚೂರಿ ಇರಿತ; 10 ಮಂದಿ ಸಾವು, ಆರೋಪಿಗಳಿಗಾಗಿ ಪೊಲೀಸ್ ಶೋಧ
TV9 Web
| Edited By: |

Updated on:Sep 05, 2022 | 1:53 PM

Share

ಒಟ್ಟಾವಾ: ಕೆನಡಾದ (Canada) ಸಾಸ್ಕಾಚೆವಾನ್ (Saskatchewan) ಪ್ರಾಂತ್ಯದ ಸ್ಥಳೀಯ ಸಮುದಾಯ ಮತ್ತು ಸಮೀಪದ ಪಟ್ಟಣದಲ್ಲಿ ಭಾನುವಾರ ನಡೆದ ಚೂರಿ ಇರಿತದಲ್ಲಿ 10 ಜನರು ಸಾವಿಗೀಡಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಶಂಕಿತರ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ತುರ್ತು ಕರೆಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ದೂರದ ಸ್ಥಳೀಯ ಸಮುದಾಯದ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಮತ್ತು ಹತ್ತಿರದ ಪಟ್ಟಣವಾದ ಸಾಸ್ಕಾಚೆವಾನ್‌ನ ವೆಲ್ಡನ್‌ನಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಸಹಾಯಕ ಕಮಿಷನರ್ ರೊಂಡಾ ಬ್ಲಾಕ್‌ಮೋರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕನಿಷ್ಠ 15 ಜನರು ಗಾಯಗೊಂಡು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ನಾವು ಇಬ್ಬರು ಶಂಕಿತರನ್ನು ಹುಡುಕುತ್ತಿದ್ದೇವೆ.  ಆಪಾದಿತ ದಾಳಿಕೋರರು ವಾಹನದಲ್ಲಿ ಓಡಿಹೋಗಿದ್ದಾರೆ. ಕಪ್ಪು ಕೂದಲು ಮತ್ತು ಕಂದು ಕಣ್ಣುಗಳುಳ್ಳ ಅವರನ್ನು 30 ಮತ್ತು 31 ವರ್ಷ ವಯಸ್ಸಿನ ಮೈಲ್ಸ್ ಮತ್ತು ಡೇಮಿಯನ್ ಸ್ಯಾಂಡರ್ಸನ್ ಎಂದು ಗುರುತಿಸಲಾಗಿದೆ.

2,500 ಜನಸಂಖ್ಯೆಯನ್ನು ಹೊಂದಿರುವ ಜೇಮ್ಸ್ ಸ್ಮಿತ್ ಕ್ರೀ ನೇಷನ್ ಸ್ಥಳೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತು, ಆದರೆ ಸಾಸ್ಕಾಚೆವಾನ್ ಪ್ರಾಂತ್ಯದ ಅನೇಕ ನಿವಾಸಿಗಳು ಸ್ಥಳದಲ್ಲಿ ಆಶ್ರಯ ಪಡೆಯುವಂತೆ ಒತ್ತಾಯಿಸಲಾಗಿದೆ.

ಪ್ರಧಾನಿ ಜಸ್ಟಿನ್ ಟ್ರುಡೊ ಈ ದಾಳಿಯನ್ನು “ಭಯಾನಕ ಮತ್ತು ಹೃದಯವಿದ್ರಾವಕ” ಎಂದು ಹೇಳಿದ್ದು ಮೃತರಿಗೆ  ಸಂತಾಪ ಸೂಚಿಸಿದ್ದು ,  ಅಧಿಕಾರಿಗಳ ಸೂಚನೆಗಳನ್ನು ಗಮನಿಸುವಂತೆ ನಿವಾಸಿಗಳನ್ನು ಒತ್ತಾಯಿಸಿದರು.

Published On - 1:26 pm, Mon, 5 September 22

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?