AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಕರಾಚಿಯಲ್ಲಿ ಉಚಿತ ಪಡಿತರ ವಿತರಣಾ ಅಭಿಯಾನದ ವೇಳೆ ಕಾಲ್ತುಳಿತ;11 ಸಾವು

ವರದಿಗಳ ಪ್ರಕಾರ, ಈ ಘಟನೆಯು ಕರಾಚಿಯ SITE (ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್) ಪ್ರದೇಶದಲ್ಲಿ ನಡೆದಿದೆ. ಇಂದಿನ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಲ್ಲಿ ಎಂಟು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

Pakistan: ಕರಾಚಿಯಲ್ಲಿ ಉಚಿತ ಪಡಿತರ ವಿತರಣಾ ಅಭಿಯಾನದ ವೇಳೆ ಕಾಲ್ತುಳಿತ;11 ಸಾವು
ಕಾಲ್ತುಳಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ
ರಶ್ಮಿ ಕಲ್ಲಕಟ್ಟ
|

Updated on:Mar 31, 2023 | 8:49 PM

Share

ಶುಕ್ರವಾರ ದಕ್ಷಿಣ ಪಾಕಿಸ್ತಾನದ (Pakistan) ಕರಾಚಿ (Karachi) ನಗರದಲ್ಲಿ ಉಚಿತ ಪಡಿತರ ವಿತರಣಾ ಅಭಿಯಾನದ (free ration distribution) ವೇಳೆ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ಪಡಿತರ ವಿತರಣಾ ಕೇಂದ್ರದಲ್ಲಿ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಪಾಕಿಸ್ತಾನದ ಎಕ್ಸ್‌ಪ್ರೆಸ್ ನ್ಯೂಸ್ ವರದಿ ಮಾಡಿದೆ. ವರದಿಗಳ ಪ್ರಕಾರ, ಈ ಘಟನೆಯು ಕರಾಚಿಯ SITE (ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್) ಪ್ರದೇಶದಲ್ಲಿ ನಡೆದಿದೆ. ಇಂದಿನ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಲ್ಲಿ ಎಂಟು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಡಿತರವನ್ನು ಸಂಗ್ರಹಿಸಲು ಹಲವಾರು ಜನರು ಕಾರ್ಖಾನೆಗೆ ಮುಗಿಬಿದ್ದ ನಂತರ ಸಾವುಗಳು ವರದಿಯಾಗಿದೆ. ರಂಜಾನ್ ಮಾಸ ಪ್ರಯುಕ್ತ ಪಡಿತರ ವಿತರಣೆ ನಡೆದಿತ್ತು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಕರಾಚಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಕಳೆದ ವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸರ್ಕಾರವು ಸ್ಥಾಪಿಸಿದ ಉಚಿತ ಹಿಟ್ಟು ವಿತರಣೆ ವೇಳೆ  ಉಂಟಾದ ಕಾಲ್ತುಳಿತದಲ್ಲಿ ನಾಲ್ಕು ವೃದ್ಧರು ಪ್ರಾಣ ಕಳೆದುಕೊಂಡ ಕೆಲವು ದಿನಗಳ ನಂತರ ಇತ್ತೀಚಿನ ದುರಂತವು ಬಂದಿದೆ.

ಇದನ್ನೂ ಓದಿಅಮೃತಪಾಲ್ ಸಿಂಗ್ ವಿರುದ್ಧದ ಕಾರ್ಯಾಚರಣೆ ಮಾನವ ಹಕ್ಕುಗಳ ಉಲ್ಲಂಘನೆ ಎಂದ ಟೈಮ್ ಲೇಖನ; ಟ್ವೀಟಿಗರ ಆಕ್ರೋಶ

ಶನಿವಾರದ ಘಟನೆಯನ್ನು ಹೊರತುಪಡಿಸಿ, ಪಾಕಿಸ್ತಾನದ ಇತರ ಪ್ರಾಂತ್ಯಗಳಲ್ಲಿನ ಸೈಟ್‌ಗಳಲ್ಲಿ ಇತ್ತೀಚಿನ ವಾರಗಳಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ರಕ್‌ಗಳು ಮತ್ತು ವಿತರಣಾ ಕೇಂದ್ರಗಳಿಂದ ಸಾವಿರಾರು ಚೀಲಗಳ ಹಿಟ್ಟನ್ನು ಲೂಟಿ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Fri, 31 March 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ