AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಐಎಸ್​ಐ ಬೆಂಬಲದಲ್ಲಿ ಕೆನಡಾ ಪ್ರಧಾನಿ ಪರ ಸಮಾವೇಶದಲ್ಲಿ ಅಲ್ಪಸಂಖ್ಯೆ; ಜಸ್ಟಿನ್ ಟ್ರುಡೋ ಜನಪ್ರಿಯತೆ ಮಂಕಾಯಿತಾ?

Stand With Trudeau: ಪಾಕಿಸ್ತಾನದ ಐಎಸ್​ಐ ಬೆಂಬಲದ ಮಧ್ಯೆಯೂ ಕೆನಡಾದ ಸರೆ ನಗರದಲ್ಲಿ ಸೆ. 23ರಂದು ಪ್ರಧಾನಿ ಜಸ್ಟಿನ್ ಟ್ರುಡೋ ಪರವಾಗಿ ಆಯೋಜಿಸಲಾಗಿದ್ದ ಸಮಾವೇಶಕ್ಕೆ ನಿರೀಕ್ಷಿಸಿದ್ದಷ್ಟು ಜನರು ಸೇರಿರಲಿಲ್ಲ ಎಂದು ಹೇಳಲಾಗಿದೆ. ಇದು ಭಾರತ ವಿರುದ್ಧ ಟ್ರುಡೋ ನಿಲುವಿಗೆ ಕೆನಡಿಯನ್ನರ ಬೆಂಬಲ ಇಲ್ಲ ಎನ್ನುವ ಸಂದೇಶವಾ?

ಪಾಕ್ ಐಎಸ್​ಐ ಬೆಂಬಲದಲ್ಲಿ ಕೆನಡಾ ಪ್ರಧಾನಿ ಪರ ಸಮಾವೇಶದಲ್ಲಿ ಅಲ್ಪಸಂಖ್ಯೆ; ಜಸ್ಟಿನ್ ಟ್ರುಡೋ ಜನಪ್ರಿಯತೆ ಮಂಕಾಯಿತಾ?
ಜಸ್ಟಿನ್ ಟ್ರುಡೋ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2023 | 5:51 PM

ನವದೆಹಲಿ, ಸೆಪ್ಟೆಂಬರ್ 24: ಕೆನಡಾ ಮತ್ತು ಭಾರತ ಮಧ್ಯೆ ಬಿಕ್ಕಟ್ಟು ಉದ್ಬವವಾಗಿದ್ದರ ಲಾಭ ಪಡೆಯಲು ಭಾರತ ವಿರೋಧಿ ಶಕ್ತಿಗಳು ಯತ್ನಿಸುತ್ತಿರುವ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಭಾರತದ ವಿರುದ್ಧ ತೀವ್ರವಾಗಿ ಧ್ವನಿ ಎತ್ತುತ್ತಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಬೆಂಬಲವಾಗಿ ಸೆರ್ರೇ ನಗರದಲ್ಲಿ ನಿನ್ನೆ (ಸೆ. 23) ಸಮಾವೇಶ ಆಯೋಜಿಸಲಾಗಿತ್ತು. ಮಾಧ್ಯಮ ವರದಿಗಳ ಪ್ರಕಾರ ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಸಂಖ್ಯೆ ಬಹಳ ಕಡಿಮೆ ಎನ್ನಲಾಗಿದೆ. ‘ಸ್ಟ್ಯಾಂಡ್ ವಿತ್ ಟ್ರುಡೋ’ ಮೆರವಣಿಗೆಗೆ (Stand With Trudeau Rally) ಪಾಕಿಸ್ತಾನದ ಐಎಸ್​ಐ ಬೆಂಬಲ ಇದ್ದೂ ಸಾಕಷ್ಟು ಜನರು ಸೇರಿಲ್ಲ ಎಂದು ಹೇಳಲಾಗುತ್ತಿದೆ.

ಸರೇ ನಗರದ ಸೆಂಟ್ರಲ್ ಸ್ಕೈ ಟ್ರೈನ್ ಸ್ಟೇಷನ್​ನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಭಾರೀ ಜನರು ಸೇರುವ ನಿರೀಕ್ಷೆಯಲ್ಲಿ ಈ ಸ್ಥಳವನ್ನು ಆಯ್ದುಕೊಳ್ಳಲಾಗಿತ್ತು. ರಾಹತ್ ರಾಯ್ ಎಂಬ ಕೆನಡಿಯನ್ ವ್ಯಕ್ತಿ ಇದರ ಆಯೋಜಕನಾಗಿದ್ದ. ಈತ ಪಾಕಿಸ್ತಾನೀ ತಂಡಗಳನ್ನು ತನ್ನ ಸ್ಥಳಕ್ಕೆ ಕರೆತಂದು ಆಡಿಸುತ್ತಿರುತ್ತಾನೆ. ಈತನಿಗೆ ಐಎಸ್​ಐ ಜೊತೆ ನಿಕಟ ಸಂಪರ್ಕ ಇದೆ. ಈತ ಸ್ಟ್ಯಾಂಡ್ ವಿತ್ ಟ್ರುಡೋ ಸಮಾವೇಶ ಆಯೋಜಿಸಿದ್ದು, ಕೆನಡಾ ಪ್ರಧಾನಿಗೆ ಯಾರೆಲ್ಲರೊಂದಿಗೆ ನಿಕಟ ಸಂಪರ್ಕ ಇದೆ ಎಂಬುದು ಗೊತ್ತಾಗುತ್ತದೆ ಎಂದು ಕೆನಡಾ ಮೂಲಗಳು ಹೇಳುತ್ತಿವೆ.

ಇದನ್ನೂ ಓದಿ: ಕರೀಮಾ ಬಲೂಚ್ ಹತ್ಯೆಯಾದಾಗ ಕೆನಡಾ ಯಾಕೆ ಮೌನವಹಿಸಿತ್ತು? ಮಾನವ ಹಕ್ಕು ಸಂಸ್ಥೆ ಪ್ರಶ್ನೆ; ಯಾರಿದು ಕರೀಮಾ?

ಖಲಿಸ್ತಾನೀ ಪ್ರತ್ಯೇಕತಾವಾದಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಕೆನಡಾದಲ್ಲಿ ಜೂನ್ ತಿಂಗಳಲ್ಲಿ ಹತ್ಯೆಗೈಯಲಾಗಿತ್ತು. ಈ ವಿಚಾರವನ್ನು ಕೆದಕಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಆ ಹತ್ಯೆಯಲ್ಲಿ ಭಾರತ ಸರ್ಕಾರದ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಗುಪ್ತಚರರ ಮಾಹಿತಿಯನ್ನಾಧರಿಸಿ ಅವರು ಆರೋಪ ಮಾಡಿದ್ದಾರೆಯೇ ವಿನಃ ಇನ್ನೂ ಸಾಕ್ಷ್ಯಾಧಾರಗಳನ್ನು ತೋರಿಸಿಲ್ಲ.

ಟ್ರುಡೋ ಆರೋಪವನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ. ನಿಜ್ಜರ್ ಹತ್ಯೆಯಲ್ಲಿ ತನ್ನ ಕೈವಾಡ ಇಲ್ಲ ಎಂದು ಭಾರತ ಹೇಳಿದ್ದು, ಕೆನಡಿಯನ್ನರಿಗೆ ವೀಸಾ ಸೇವೆ ರದ್ದುಗೊಳಿಸಿದೆ.

ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಹತ್ಯೆಗೆ ಕರೆ; ಗುರುದ್ವಾರದ ಪೋಸ್ಟರ್ ತೆಗೆಯಲು ಆದೇಶ

ಪ್ರಧಾನಿಯಾಗಿ ಟ್ರುಡೋ ಜನಪ್ರಿಯತೆ ಮಂಕು?

ಇತ್ತೀಚೆಗೆ ಕೆನಡಾದಲ್ಲಿ ನಡೆದ ಸಮೀಕ್ಷೆಯಲ್ಲಿ ಕುತೂಹಲದ ವಿಚಾರ ಹೊರಬಂದಿದೆ. ಕೆನಡಾ ಪ್ರಧಾನಿಯಾಗಲು ಯಾರು ಸೂಕ್ತ ವ್ಯಕ್ತಿ ಎನ್ನುವ ಸಮೀಕ್ಷೆಯಲ್ಲಿ ಹಾಲಿ ಪ್ರಧಾನಿ ಜಸ್ಟಿನ್ ಟ್ರುಡೋ ಎರಡನೇ ಸ್ಥಾನ ಪಡೆದಿದ್ದಾರೆ. ಈ ಸಮೀಕ್ಷೆಯಲ್ಲಿ ಈಗಿನ ವಿಪಕ್ಷ ನಾಯಕ ಪಿಯೆರೆ ಪೋಯಿಲೇವರ್ ಅವರಿಗೆ ಅತಿಹೆಚ್ಚು ಮಂದಿ ಬೆಂಬಲ ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್