AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಐಎಸ್​ಐ ಬೆಂಬಲದಲ್ಲಿ ಕೆನಡಾ ಪ್ರಧಾನಿ ಪರ ಸಮಾವೇಶದಲ್ಲಿ ಅಲ್ಪಸಂಖ್ಯೆ; ಜಸ್ಟಿನ್ ಟ್ರುಡೋ ಜನಪ್ರಿಯತೆ ಮಂಕಾಯಿತಾ?

Stand With Trudeau: ಪಾಕಿಸ್ತಾನದ ಐಎಸ್​ಐ ಬೆಂಬಲದ ಮಧ್ಯೆಯೂ ಕೆನಡಾದ ಸರೆ ನಗರದಲ್ಲಿ ಸೆ. 23ರಂದು ಪ್ರಧಾನಿ ಜಸ್ಟಿನ್ ಟ್ರುಡೋ ಪರವಾಗಿ ಆಯೋಜಿಸಲಾಗಿದ್ದ ಸಮಾವೇಶಕ್ಕೆ ನಿರೀಕ್ಷಿಸಿದ್ದಷ್ಟು ಜನರು ಸೇರಿರಲಿಲ್ಲ ಎಂದು ಹೇಳಲಾಗಿದೆ. ಇದು ಭಾರತ ವಿರುದ್ಧ ಟ್ರುಡೋ ನಿಲುವಿಗೆ ಕೆನಡಿಯನ್ನರ ಬೆಂಬಲ ಇಲ್ಲ ಎನ್ನುವ ಸಂದೇಶವಾ?

ಪಾಕ್ ಐಎಸ್​ಐ ಬೆಂಬಲದಲ್ಲಿ ಕೆನಡಾ ಪ್ರಧಾನಿ ಪರ ಸಮಾವೇಶದಲ್ಲಿ ಅಲ್ಪಸಂಖ್ಯೆ; ಜಸ್ಟಿನ್ ಟ್ರುಡೋ ಜನಪ್ರಿಯತೆ ಮಂಕಾಯಿತಾ?
ಜಸ್ಟಿನ್ ಟ್ರುಡೋ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2023 | 5:51 PM

Share

ನವದೆಹಲಿ, ಸೆಪ್ಟೆಂಬರ್ 24: ಕೆನಡಾ ಮತ್ತು ಭಾರತ ಮಧ್ಯೆ ಬಿಕ್ಕಟ್ಟು ಉದ್ಬವವಾಗಿದ್ದರ ಲಾಭ ಪಡೆಯಲು ಭಾರತ ವಿರೋಧಿ ಶಕ್ತಿಗಳು ಯತ್ನಿಸುತ್ತಿರುವ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಭಾರತದ ವಿರುದ್ಧ ತೀವ್ರವಾಗಿ ಧ್ವನಿ ಎತ್ತುತ್ತಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಬೆಂಬಲವಾಗಿ ಸೆರ್ರೇ ನಗರದಲ್ಲಿ ನಿನ್ನೆ (ಸೆ. 23) ಸಮಾವೇಶ ಆಯೋಜಿಸಲಾಗಿತ್ತು. ಮಾಧ್ಯಮ ವರದಿಗಳ ಪ್ರಕಾರ ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಸಂಖ್ಯೆ ಬಹಳ ಕಡಿಮೆ ಎನ್ನಲಾಗಿದೆ. ‘ಸ್ಟ್ಯಾಂಡ್ ವಿತ್ ಟ್ರುಡೋ’ ಮೆರವಣಿಗೆಗೆ (Stand With Trudeau Rally) ಪಾಕಿಸ್ತಾನದ ಐಎಸ್​ಐ ಬೆಂಬಲ ಇದ್ದೂ ಸಾಕಷ್ಟು ಜನರು ಸೇರಿಲ್ಲ ಎಂದು ಹೇಳಲಾಗುತ್ತಿದೆ.

ಸರೇ ನಗರದ ಸೆಂಟ್ರಲ್ ಸ್ಕೈ ಟ್ರೈನ್ ಸ್ಟೇಷನ್​ನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಭಾರೀ ಜನರು ಸೇರುವ ನಿರೀಕ್ಷೆಯಲ್ಲಿ ಈ ಸ್ಥಳವನ್ನು ಆಯ್ದುಕೊಳ್ಳಲಾಗಿತ್ತು. ರಾಹತ್ ರಾಯ್ ಎಂಬ ಕೆನಡಿಯನ್ ವ್ಯಕ್ತಿ ಇದರ ಆಯೋಜಕನಾಗಿದ್ದ. ಈತ ಪಾಕಿಸ್ತಾನೀ ತಂಡಗಳನ್ನು ತನ್ನ ಸ್ಥಳಕ್ಕೆ ಕರೆತಂದು ಆಡಿಸುತ್ತಿರುತ್ತಾನೆ. ಈತನಿಗೆ ಐಎಸ್​ಐ ಜೊತೆ ನಿಕಟ ಸಂಪರ್ಕ ಇದೆ. ಈತ ಸ್ಟ್ಯಾಂಡ್ ವಿತ್ ಟ್ರುಡೋ ಸಮಾವೇಶ ಆಯೋಜಿಸಿದ್ದು, ಕೆನಡಾ ಪ್ರಧಾನಿಗೆ ಯಾರೆಲ್ಲರೊಂದಿಗೆ ನಿಕಟ ಸಂಪರ್ಕ ಇದೆ ಎಂಬುದು ಗೊತ್ತಾಗುತ್ತದೆ ಎಂದು ಕೆನಡಾ ಮೂಲಗಳು ಹೇಳುತ್ತಿವೆ.

ಇದನ್ನೂ ಓದಿ: ಕರೀಮಾ ಬಲೂಚ್ ಹತ್ಯೆಯಾದಾಗ ಕೆನಡಾ ಯಾಕೆ ಮೌನವಹಿಸಿತ್ತು? ಮಾನವ ಹಕ್ಕು ಸಂಸ್ಥೆ ಪ್ರಶ್ನೆ; ಯಾರಿದು ಕರೀಮಾ?

ಖಲಿಸ್ತಾನೀ ಪ್ರತ್ಯೇಕತಾವಾದಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಕೆನಡಾದಲ್ಲಿ ಜೂನ್ ತಿಂಗಳಲ್ಲಿ ಹತ್ಯೆಗೈಯಲಾಗಿತ್ತು. ಈ ವಿಚಾರವನ್ನು ಕೆದಕಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಆ ಹತ್ಯೆಯಲ್ಲಿ ಭಾರತ ಸರ್ಕಾರದ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಗುಪ್ತಚರರ ಮಾಹಿತಿಯನ್ನಾಧರಿಸಿ ಅವರು ಆರೋಪ ಮಾಡಿದ್ದಾರೆಯೇ ವಿನಃ ಇನ್ನೂ ಸಾಕ್ಷ್ಯಾಧಾರಗಳನ್ನು ತೋರಿಸಿಲ್ಲ.

ಟ್ರುಡೋ ಆರೋಪವನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ. ನಿಜ್ಜರ್ ಹತ್ಯೆಯಲ್ಲಿ ತನ್ನ ಕೈವಾಡ ಇಲ್ಲ ಎಂದು ಭಾರತ ಹೇಳಿದ್ದು, ಕೆನಡಿಯನ್ನರಿಗೆ ವೀಸಾ ಸೇವೆ ರದ್ದುಗೊಳಿಸಿದೆ.

ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಹತ್ಯೆಗೆ ಕರೆ; ಗುರುದ್ವಾರದ ಪೋಸ್ಟರ್ ತೆಗೆಯಲು ಆದೇಶ

ಪ್ರಧಾನಿಯಾಗಿ ಟ್ರುಡೋ ಜನಪ್ರಿಯತೆ ಮಂಕು?

ಇತ್ತೀಚೆಗೆ ಕೆನಡಾದಲ್ಲಿ ನಡೆದ ಸಮೀಕ್ಷೆಯಲ್ಲಿ ಕುತೂಹಲದ ವಿಚಾರ ಹೊರಬಂದಿದೆ. ಕೆನಡಾ ಪ್ರಧಾನಿಯಾಗಲು ಯಾರು ಸೂಕ್ತ ವ್ಯಕ್ತಿ ಎನ್ನುವ ಸಮೀಕ್ಷೆಯಲ್ಲಿ ಹಾಲಿ ಪ್ರಧಾನಿ ಜಸ್ಟಿನ್ ಟ್ರುಡೋ ಎರಡನೇ ಸ್ಥಾನ ಪಡೆದಿದ್ದಾರೆ. ಈ ಸಮೀಕ್ಷೆಯಲ್ಲಿ ಈಗಿನ ವಿಪಕ್ಷ ನಾಯಕ ಪಿಯೆರೆ ಪೋಯಿಲೇವರ್ ಅವರಿಗೆ ಅತಿಹೆಚ್ಚು ಮಂದಿ ಬೆಂಬಲ ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ