AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ನಿಲ್ಲಿಸಿ, ಶಾಂತಿ ಕಾಪಾಡಿ, ರಷ್ಯಾಕ್ಕೆ ಸಲಹೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್

ಭಾರತವು ರಷ್ಯಾ ಉಕ್ರೇನ್‌ನಲ್ಲಿನ ನಡೆಯುತ್ತಿರುವ ಯುದ್ಧ ಬಗ್ಗೆ ಹಾಗೂ ಪ್ರಾದೇಶಿಕ ವಿಚಾರಗಳನ್ನು ರಕ್ಷಣೆ ಮಾಡುವತೆ ರಷ್ಯಾಕ್ಕೆ ಸಲಹೆ ನೀಡಿದೆ. ಭಾರತವು ಕೂಡ ಇದನ್ನೇ ಬಯಸುತ್ತದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಯುದ್ಧ ನಿಲ್ಲಿಸಿ, ಶಾಂತಿ ಕಾಪಾಡಿ, ರಷ್ಯಾಕ್ಕೆ ಸಲಹೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್
Stop war, keep peace, J Jaishankar advises kannada Russia
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 08, 2022 | 6:04 PM

Share

ಮಾಸ್ಕೋ: ಭಾರತವು ರಷ್ಯಾ ಉಕ್ರೇನ್‌ನಲ್ಲಿನ ನಡೆಯುತ್ತಿರುವ ಯುದ್ಧ ಬಗ್ಗೆ ಹಾಗೂ ಪ್ರಾದೇಶಿಕ ವಿಚಾರಗಳನ್ನು ರಕ್ಷಣೆ ಮಾಡುವತೆ ರಷ್ಯಾಕ್ಕೆ ಸಲಹೆ ನೀಡಿದೆ. ಭಾರತವು ಕೂಡ ಇದನ್ನೇ ಬಯಸುತ್ತದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉಕ್ರೇನ್-ರಷ್ಯಾ ಯುದ್ಧದ ಕುರಿತು ಸಚಿವ ಜೈಶಂಕರ್ ಎರಡು ರಾಷ್ಟ್ರಗಳು ಶಾಂತಿಯನ್ನು ಕಾಪಾಡಬೇಕು ಮತ್ತು ರಾಷ್ಟ್ರ – ರಾಷ್ಟ್ರಗಳ ನಡುವೆ ಒಳ್ಳೆಯ ಸಂಬಂಧವನ್ನು ಕಾಪಾಡಬೇಕು ಎಂಬ ಬಲವಾಗಿ ಪುನರುಚ್ಚರಿಸಿದ್ದಾರೆ. ಅಂತರರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರದ ತೊಂದರೆಗಳು ಇವು ಜಾಗತಿಕ ಆರ್ಥಿಕತೆಯ ಮೇಲೆ ಬಹಳ ಪರಿಣಾಮವನ್ನು ಉಂಟು ಮಾಡಿದೆ. ಉಕ್ರೇನ್ ಅನೇಕ ನಷ್ಟವನ್ನು ಕೂಡ ಅನುಭವಿಸಿದೆ ಎಂದು ಹೇಳಿದ್ದಾರೆ.

ಜಗತ್ತಿನಲ್ಲಿ ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆಯ ಸಮಸ್ಯೆಗಳು ಇದೆ. ಇವುಗಳು ದೀರ್ಘಕಾಲಿಕ ಸಮಸ್ಯೆಗಳಿವೆ, ಇವೆರಡೂ ಪ್ರಗತಿ ಮತ್ತು ಸಮೃದ್ಧಿಯ ಮೇಲೆ ವಿಚ್ಛಿದ್ರಕಾರಕ ಪರಿಣಾಮವನ್ನು ಬೀರುತ್ತವೆ. ಈ ನಮ್ಮ ಮಾತುಕತೆಗಳು ಒಟ್ಟಾರೆ ಜಾಗತಿಕ ಪರಿಸ್ಥಿತಿ ಮತ್ತು ನಿರ್ದಿಷ್ಟ ಪ್ರಾದೇಶಿಕ ಕಾಳಜಿ ಬಗ್ಗೆ ಆಗಿದೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ.

ಇದನ್ನು ಓದಿ: ಉಕ್ರೇನ್ ಯುದ್ಧದ ನಡುವೆ ರಷ್ಯಾಕ್ಕೆ ಭೇಟಿ ನೀಡಿದ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್ ಜೈಶಂಕರ್

ಭಾರತ ಮತ್ತು ರಷ್ಯಾ ವಿವಿಧ ಹಂತಗಳಲ್ಲಿ ಬಲವಾದ ಮತ್ತು ನಿರಂತರ ಸಂಪರ್ಕವನ್ನು ನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್‌ನಲ್ಲಿ ಸಮರ್ಕಂಡ್‌ನಲ್ಲಿ ಇತ್ತೀಚೆಗೆ ಭೇಟಿಯಾದರು. ಉಕ್ರೇನ್ ಯುದ್ಧದ ನಡುವೆ ಭಾರತವೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ, ಇದು ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಬೆಳೆಸಿಕೊಂಡಿರುವುದರಿಮದ ಪಶ್ಚಿಮದ ರಾಷ್ಟ್ರಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ರಷ್ಯಾದ ತೈಲ ಖರೀದಿಯನ್ನು ಮಿತಿಗೊಳಿಸುವಂತೆ ಪಶ್ಚಿಮ ರಾಷ್ಟ್ರಗಳು ನಿಮ್ಮಲ್ಲಿ ಕೇಳಿಕೊಂಡಾಗ ಭಾರತ ಹೇಗೆ ಪ್ರತಿಕ್ರಿಯೆ ನೀಡಿತ್ತು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, ಇಂಧನ ಮಾರುಕಟ್ಟೆಯ ಮೇಲೆ ನಿಜವಾಗಿಯೂ ಒತ್ತಡವಿದೆ ಎಂದು ಹೇಳಿದರು. ಸಚಿವ ಜೈಶಂಕರ್ ಅವರ ಮಾಸ್ಕೋ ಭೇಟಿಯು ಭಾರತ ಮತ್ತು ರಷ್ಯಾ ವ್ಯಾಪಾರವನ್ನು ದೊಡ್ಡ ರೀತಿಯಲ್ಲಿ ವಿಸ್ತರಿಸುವುದನ್ನು ಸೂಚಿಸುತ್ತದೆ. ಇದು ರಷ್ಯಾವನ್ನು ಆರ್ಥಿಕವಾಗಿ ಸ್ಥಿರಗೊಳಿಸುತ್ತದೆ ಮತ್ತು ಭಾರತಕ್ಕೆ ಅಗ್ಗದ ಸರಕುಗಳನ್ನು ನೀಡುತ್ತದೆ ಎಂದು ಹೇಳಿದ್ದಾರೆ.

Published On - 6:04 pm, Tue, 8 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?