AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್