AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್