AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ