AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ