AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ