AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ

ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ; ಉರುಳಿದ ಮನೆಗಳು, ರೈಲು ಸಂಚಾರ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 18, 2022 | 7:08 AM

Share

ತೈಪೆ: ಚೀನಾದೊಂದಿಗಿನ ಸಂಘರ್ಷದಿಂದ ನಿರಂತರ ಸುದ್ದಿಯಲ್ಲಿದ್ದ ತೈವಾನ್​ನಲ್ಲಿ (Taiwan) ಶನಿವಾರ (ಸೆ 17) ಸಂಜೆ ಪ್ರಬಲ ಭೂಕಂಪ (Strong Earthquake) ಸಂಭವಿಸಿದೆ. ಮನೆಗಳು ಮತ್ತು ಅಂಗಡಿಗಳ ಕಪಾಟಿನಲ್ಲಿದ್ದ ವಸ್ತುಗಳು ಉರುಳಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳು ರೈಲ್ವೆ ಹಳಿಗಳ ಮೇಲೆ ಬಿದ್ದ ಕಾರಣ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಮೃತರು ಅಥವಾ ಗಾಯಗೊಂಡವರ ನಿಖರ ವಿವರಗಳು ಈವರೆಗೆ ಲಭ್ಯವಾಗಿಲ್ಲ.

ತೈವಾನ್​ ಪೂರ್ವ ಕರಾವಳಿಯ ತೈತುಂಗ್​ ಕೌಂಟಿಯಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 6.4 ಇತ್ತು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಹ್ಯುಲಿಯಾನ್ ಕೌಂಟಿಯಲ್ಲಿದ್ದ ಹಲವು ಮನೆಗಳು ಕುಸಿದಿವೆ. ಈ ಮನೆಗಳಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಸಾವುನೋವು ಸಂಭವಿಸಿರಲಿಲ್ಲ ಎಂದು ತೈವಾನ್ ಅಧಿಕಾರಿಗಳು ಹೇಳಿದ್ದಾರೆ.

ಹ್ಯುಲಿಯಾನ್ ಮತ್ತು ತೈತುಂಗ್ ಮಾರ್ಗಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಗಗಳ ಸುರಕ್ಷತೆಯ ತಪಾಸಣೆ ನಡೆದ, ಸಂಚಾರಕ್ಕೆ ಸುರಕ್ಷಿತ ಎಂದು ಘೋಷಣೆಯಾಗುವವರೆಗೆ ಸ್ಪೀಡ್ ರೈಲ್​ಗಳ ಸಂಚಾರವೂ ರದ್ದುಗೊಳ್ಳಲಿದೆ. ರಾಜಧಾನಿ ತೈಪೆ ಮತ್ತು ದಕ್ಷಿಣ ತೈವಾನ್​ನ ಪ್ರಮುಖ ನಗರ ಕ್ಯೊಶಿಯಂಗ್​ಗಳಲ್ಲಿ ಮೆಟ್ರೊ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

Published On - 7:07 am, Sun, 18 September 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ