AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ

ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ

Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ
ಪ್ರಬಲ ಭೂಕಂಪImage Credit source: USGS
TV9 Web
| Edited By: |

Updated on:May 09, 2022 | 1:43 PM

Share

ತೈಪೆ: ಪೂರ್ವ ತೈವಾನ್  (Taiwan) ಮತ್ತು ನೈಋತ್ಯ ಜಪಾನ್ (southwestern Japan) ನಡುವಿನ ಸಮುದ್ರದಲ್ಲಿ ಸೋಮವಾರ ಪ್ರಬಲ ಭೂಕಂಪ (Earthquake) ಸಂಭವಿಸಿದೆ, ಆದರೆ ಸುನಾಮಿ(tsunami) ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೈಪೆಯಲ್ಲಿ ಲಘು ಕಂಪನದ ಅನುಭವವಾಗಿದ್ದು ಯಾವುದೇ ಹಾನಿ ವರದಿಯಾಗಿಲ್ಲ. ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ. 6.1 ತೀವ್ರತೆಯ ಭೂಕಂಪವು 27 ಕಿಲೋಮೀಟರ್ (17 ಮೈಲಿ) ಆಳದಲ್ಲಿದೆ ಎಂದು ತೈವಾನ್‌ನ ಕೇಂದ್ರ ಹವಾಮಾನ ಬ್ಯೂರೋ ಹೇಳಿದೆ. ಭೂಕಂಪದ ತೀವ್ರತೆ 6.3 ರಷ್ಟಿತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ಹೇಳಿದೆ.  ಪೂರ್ವಭಾವಿ ಅಳತೆಗಳು ಕಂಪನದ ನಂತರ ಭಿನ್ನವಾಗಿರುತ್ತವೆ ಮತ್ತು ಹೆಚ್ಚಿನ ವಿಶ್ಲೇಷಣೆಯ ನಂತರ ಪರಿಷ್ಕರಿಸಲಾಗುತ್ತದೆ.

ಸುನಾಮಿಯ ಅಪಾಯವಿಲ್ಲ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಭೂಕಂಪವು ಸಮುದ್ರದ ಮೇಲ್ಮೈಯಿಂದ 20 ಕಿಲೋಮೀಟರ್ (12 ಮೈಲುಗಳು) ಕೆಳಗೆ ಅಪ್ಪಳಿಸಿತು. ಅಲೆಯ ಉಬ್ಬರ ಇರಬಹುದು ಆದರೆ ಸುನಾಮಿ ಅಪಾಯವಿಲ್ಲ ಎಂದು ಸಂಸ್ಥೆ ಹೇಳಿದೆ.

ತೈವಾನ್ ಎರಡು ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್‌ನ ಸಮೀಪದಲ್ಲಿದೆ ಮತ್ತು ಭೂಕಂಪಗಳಿಗೆ ಆಗಾಗ ಗುರಿಯಾಗುತ್ತದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:15 pm, Mon, 9 May 22

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ