AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ

ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ

Earthquake in Taiwan ತೈವಾನ್, ಜಪಾನ್ ನಡುವಿನ ಸಮುದ್ರದಲ್ಲಿ ಪ್ರಬಲ ಭೂಕಂಪ; ಸುನಾಮಿ ಅಪಾಯವಿಲ್ಲ
ಪ್ರಬಲ ಭೂಕಂಪImage Credit source: USGS
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 09, 2022 | 1:43 PM

Share

ತೈಪೆ: ಪೂರ್ವ ತೈವಾನ್  (Taiwan) ಮತ್ತು ನೈಋತ್ಯ ಜಪಾನ್ (southwestern Japan) ನಡುವಿನ ಸಮುದ್ರದಲ್ಲಿ ಸೋಮವಾರ ಪ್ರಬಲ ಭೂಕಂಪ (Earthquake) ಸಂಭವಿಸಿದೆ, ಆದರೆ ಸುನಾಮಿ(tsunami) ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೈಪೆಯಲ್ಲಿ ಲಘು ಕಂಪನದ ಅನುಭವವಾಗಿದ್ದು ಯಾವುದೇ ಹಾನಿ ವರದಿಯಾಗಿಲ್ಲ. ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿಯ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನಿನ ಅಧಿಕಾರಿಗಳು ತಿಳಿಸಿದ್ದಾರೆ. 6.1 ತೀವ್ರತೆಯ ಭೂಕಂಪವು 27 ಕಿಲೋಮೀಟರ್ (17 ಮೈಲಿ) ಆಳದಲ್ಲಿದೆ ಎಂದು ತೈವಾನ್‌ನ ಕೇಂದ್ರ ಹವಾಮಾನ ಬ್ಯೂರೋ ಹೇಳಿದೆ. ಭೂಕಂಪದ ತೀವ್ರತೆ 6.3 ರಷ್ಟಿತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ಹೇಳಿದೆ.  ಪೂರ್ವಭಾವಿ ಅಳತೆಗಳು ಕಂಪನದ ನಂತರ ಭಿನ್ನವಾಗಿರುತ್ತವೆ ಮತ್ತು ಹೆಚ್ಚಿನ ವಿಶ್ಲೇಷಣೆಯ ನಂತರ ಪರಿಷ್ಕರಿಸಲಾಗುತ್ತದೆ.

ಸುನಾಮಿಯ ಅಪಾಯವಿಲ್ಲ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಭೂಕಂಪವು ಸಮುದ್ರದ ಮೇಲ್ಮೈಯಿಂದ 20 ಕಿಲೋಮೀಟರ್ (12 ಮೈಲುಗಳು) ಕೆಳಗೆ ಅಪ್ಪಳಿಸಿತು. ಅಲೆಯ ಉಬ್ಬರ ಇರಬಹುದು ಆದರೆ ಸುನಾಮಿ ಅಪಾಯವಿಲ್ಲ ಎಂದು ಸಂಸ್ಥೆ ಹೇಳಿದೆ.

ತೈವಾನ್ ಎರಡು ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್‌ನ ಸಮೀಪದಲ್ಲಿದೆ ಮತ್ತು ಭೂಕಂಪಗಳಿಗೆ ಆಗಾಗ ಗುರಿಯಾಗುತ್ತದೆ. 2016 ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 1999 ರಲ್ಲಿ 7.3 ತೀವ್ರತೆಯ ಭೂಕಂಪದಲ್ಲಿ 2,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:15 pm, Mon, 9 May 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್