AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಎಸ್ ಮಾಡುತ್ತಿದ್ದ ತೆಲಂಗಾಣ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ, ಸ್ಥಿತಿ ಗಂಭೀರ -ಕುಟುಂಬಕ್ಕೆ ನೆರವಾಗಿರುವ ಸಚಿವ ಕೆಟಿಆರ್

ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನನ್ನು ಬಂಧಿಸಲಾಗಿದೆ ಎಂದು ವಲಪರೈಸೊ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಭಾನುವಾರ ನಡೆದಿದ್ದು, ಬಳಿಕ ಬೆಳಕಿಗೆ ಬಂದಿದೆ.

ಅಮೆರಿಕದಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಎಸ್ ಮಾಡುತ್ತಿದ್ದ ತೆಲಂಗಾಣ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ, ಸ್ಥಿತಿ ಗಂಭೀರ -ಕುಟುಂಬಕ್ಕೆ ನೆರವಾಗಿರುವ ಸಚಿವ ಕೆಟಿಆರ್
ತೆಲಂಗಾಣ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ, ಸ್ಥಿತಿ ಗಂಭೀರ -ಕುಟುಂಬಕ್ಕೆ ನೆರವಾಗಿರುವ ಸಚಿವ ಕೆಟಿಆರ್
ಸಾಧು ಶ್ರೀನಾಥ್​
|

Updated on: Nov 02, 2023 | 11:37 AM

Share

ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯವರಾದ (Khammam district of Telangana) ಮತ್ತು ಯುಎಸ್‌ಎ (USA) ನಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ 24 ವರ್ಷದ ಪಿ ವರುಣ್ ರಾಜ್ (P Varun Raj) ಎಂಬ ವಿದ್ಯಾರ್ಥಿಯನ್ನು ಇಂಡಿಯಾನಾ ರಾಜ್ಯದ ವಾಲ್‌ಪಾರೈಸೊ ನಗರದ ಸಾರ್ವಜನಿಕ ಜಿಮ್‌ನಲ್ಲಿ ( public gym) ದುಷ್ಕರ್ಮಿಗಳು ಭಾನುವಾರ (ಅಕ್ಟೋಬರ್ 29) ಚಾಕುವಿನಿಂದ ಇರಿದಿದ್ದಾರೆ. ವರುಣ್ ರಾಜ್ ಅವರನ್ನು ಇಂಡಿಯಾನಾದ ಫೋರ್ಟ್ ವೇನ್‌ನ ಲುಥೆರನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ವರುಣ್ ಕುಟುಂಬವು ಯುಎಸ್ಎಗೆ ತೆರಳಲು ನೆರವಾಗಿರುವ ತೆಲಂಗಾಣ ಸಚಿವ ಕೆಟಿ ರಾಮರಾವ್ ಅವರು ವರುಣ್ ಕುಟುಂಬಕ್ಕೆ ಸಂಪೂರ್ಣ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ವರುಣ್ ಅವರ ಚಿಕ್ಕಮ್ಮನ ಮನವಿಗೆ ಪ್ರತಿಕ್ರಿಯಿಸಿದ ಕೆಟಿಆರ್ ಟ್ವೀಟ್‌ನಲ್ಲಿ, ಭಾರತೀಯ ರಾಯಭಾರಿ ಕಚೇರಿ ಮತ್ತು ತೆಲಂಗಾಣ ಎನ್‌ಆರ್‌ಐ ಸ್ನೇಹಿತರ ಸಹಾಯದಿಂದ ವರುಣ್‌ಗೆ ಬೆಂಬಲ ನೀಡಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ನನ್ನ ತಂಡವು ಕುಟುಂಬದೊಂದಿಗೆ ಸಂಪರ್ಕದಲ್ಲಿರುವಂತೆ ಮಾಡುತ್ತೇನೆ‘ ಎಂದಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಂತ್ರಸ್ತೆಯ ತಂದೆ ಪಿ ರಾಮ್ ಮೂರ್ತಿ, ವರುಣ್‌ನ ರೂಮ್‌ಮೇಟ್‌ನಿಂದ ಚೂರಿ ಇರಿತದ ಸುದ್ದಿ ನಮಗೆ ಬಂದಿತು. ವರುಣನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು. ಕೆಟಿಆರ್ ತಂಡದಿಂದ ತನಗೆ ಕರೆ ಬಂದಿದ್ದು, ಎಲ್ಲ ನೆರವು ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದರು. ಈ ಪ್ರಕರಣದಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವಾಲ್ಪಾರೈಸೊ ಪೊಲೀಸ್ ಇಲಾಖೆಯ ಡಿಟೆಕ್ಟಿವ್ ಕ್ರಿಸ್ ಆಲಿಸನ್ ತಿಳಿಸಿದ್ದಾರೆ.

ವರುಣ್ ರಾಜ್ ಆಗಸ್ಟ್ 2022 ರಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಎಸ್ ಮಾಡಲು ಯುಎಸ್‌ಎಗೆ ಹೋಗಿದ್ದರು. 2024 ರಲ್ಲಿ ಅವರ ಕೋರ್ಸ್ ಮುಗಿದ ನಂತರ ಖಮ್ಮಂಗೆ ಹಿಂತಿರುಗುವ ನಿರೀಕ್ಷೆಯಿದೆ. ಈ ವರ್ಷದ ಜನವರಿಯಲ್ಲಿ ಅಮೆರಿಕದ ಸಿಯಾಟಲ್‌ನಲ್ಲಿ ತೆಲುಗು ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಹತ್ಯೆಗೀಡಾದರು. ಪೊಲೀಸ್ ಅಧಿಕಾರಿಯೊಬ್ಬರ ಕರೆ ರೆಕಾರ್ಡಿಂಗ್ ವೈರಲ್ ಆಗಿ, ಅದರಲ್ಲಿ ಅವರು ಆಕೆಯ ಸಾವಿನ ಬಗ್ಗೆ ಕ್ರೂರ ಹಾಸ್ಯ ಮಾಡುವುದು ಕೇಳಿಬಂದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?