ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ.

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ ದಾಳಿ, ನಾಲ್ವರು ಸಾವು, 28 ಮಂದಿಗೆ ಗಾಯ
Image Credit source: Hindustan Times
Follow us
|

Updated on:Dec 12, 2023 | 11:54 AM

ಪಾಕಿಸ್ತಾನದ ಪೊಲೀಸ್​ ಠಾಣೆಯಲ್ಲಿ ಆತ್ಮಾಹುತಿ  ದಾಳಿ ನಡೆದಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದು, 28 ಮಂದಿಗೆ ಗಂಭೀರ ಗಾಯಗಳಾಗಿವೆ. ಭದ್ರತಾ ಪಡೆಗಳು ಮತ್ತು ಇತರ ಉಗ್ರರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ದೇಶದಲ್ಲಿ ಹೊಸದಾಗಿ ರೂಪುಗೊಂಡ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಉಗ್ರರು ಸ್ಫೋಟಕ ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‌ಗೆ ನುಗ್ಗಿಸಿ ಬಂದೂಕುಗಳಿಂದ ಗುಂಡು ಹಾರಿಸಲು ಪ್ರಾರಂಭಿಸಿದರು ಎಂಬುದು ತಿಳಿದುಬಂದಿದೆ.

ಜನವರಿಯಲ್ಲಿ ಪೇಶಾವರದ ಮಸೀದಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಕನಿಷ್ಠ 101 ಜನರನ್ನು ಕೊಂದ ಘಟನೆ ನಡೆದಿತ್ತು,  ಈ ಪ್ರಾಂತ್ಯವು ಮಾರಣಾಂತಿಕ ದಾಳಿಗೆ ಸಾಕ್ಷಿಯಾಗಿತ್ತು.

ಮತ್ತಷ್ಟು ಓದಿ: Pakistan Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

2022 ರಿಂದ ಭದ್ರತಾ ಪಡೆಗಳ ಮೇಲೆ ದಾಳಿಯನ್ನು ಹೆಚ್ಚಿಸಿರುವ ತಾಲಿಬಾನಿಗಳ ಮೇಲೆ ಅನುಮಾನ ಮೂಡಿತ್ತು. ಟಿಟಿಪಿ, ಪ್ರತ್ಯೇಕ ಗುಂಪಾಗಿದ್ದರೂ, ಅಫ್ಘಾನ್ ತಾಲಿಬಾನ್‌ನೊಂದಿಗೆ ನಿಕಟ ಮೈತ್ರಿ ಹೊಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Tue, 12 December 23

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ