AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ; ಮೊದಲ ಮಹಿಳಾ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ನೇಪಾಳದಲ್ಲಿ ಮಧ್ಯಂತರ ಸರ್ಕಾರದ ಉಸ್ತುವಾರಿ ವಹಿಸಿಕೊಳ್ಳಲು ಜೆನ್-ಝಡ್ ಪ್ರತಿಭಟನಾಕಾರರು ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಆಯ್ಕೆ ಮಾಡಿದ್ದರು. ಸುಶೀಲಾ ಕರ್ಕಿ ನೇಪಾಳದ ಮೊದಲ ಮತ್ತು ಏಕೈಕ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿದ್ದವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಈಗ ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ.

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ; ಮೊದಲ ಮಹಿಳಾ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ
Sushila Karki Takes Oath
ಸುಷ್ಮಾ ಚಕ್ರೆ
|

Updated on: Sep 12, 2025 | 10:03 PM

Share

ಕಠ್ಮಂಡು, ಸೆಪ್ಟೆಂಬರ್ 12: ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ (Sushila Karki) ಇಂದು (ಶುಕ್ರವಾರ) ರಾತ್ರಿ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾಗಿದ್ದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣವಚನ ಸ್ವೀಕರಿಸಿದರು.

ದೇಶದ ಜೆನ್- ಝಡ್ ನೇತೃತ್ವದ ತೀವ್ರ ಪ್ರತಿಭಟನೆಗಳ ನಂತರ ನೇಪಾಳದ ಪ್ರಧಾನಿ ಹಾಗೂ ಅಧ್ಯಕ್ಷರು ರಾಜೀನಾಮೆ ನೀಡಬೇಕಾಯಿತು. ಇದರಿಂದ ಸರ್ಕಾರ ಪತನವಾಯಿತು, ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಈ ಹಿನ್ನೆಲೆಯಲ್ಲಿ ಮಧ್ಯಂತರ ಸರ್ಕಾರ ರಚಿಸಲಾಗಿದ್ದು, ಈ ಸರ್ಕಾರದ ಮುಖ್ಯಸ್ಥರಾಗಿ ಸುಶೀಲಾ ಕರ್ಕಿ ನೇತೃತ್ವ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ; ಇನ್ನು 6 ತಿಂಗಳಲ್ಲಿ ಚುನಾವಣೆ

ಪ್ರತಿಭಟನಾಕಾರರು ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ಡೆಲ್ ಮತ್ತು ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ, 73 ವರ್ಷದ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ನಂತರ ಸಂಸತ್ತನ್ನು ವಿಸರ್ಜಿಸಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಪ್ರಧಾನಿಯಾಗಿ ನೇಮಿಸಬೇಕೆಂಬ ಪ್ರತಿಭಟನಾಕಾರರ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಪ್ರಮಾಣ ವಚನ ಸಮಾರಂಭಕ್ಕೆ ಸಂಸತ್ತಿನ ಸ್ಪೀಕರ್ ಮತ್ತು ರಾಷ್ಟ್ರೀಯ ಸಭೆಯ ಅಧ್ಯಕ್ಷರನ್ನು ಸಹ ಕರೆಯಲಾಗಿತ್ತು.

ಇದನ್ನೂ ಓದಿ: ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ನೇಪಾಳದ ಅಧ್ಯಕ್ಷರ ನಿವಾಸವಾದ ಶೀತಲ್ ನಿವಾಸ್‌ನಲ್ಲಿ ಸುಶೀಲಾ ಕರ್ಕಿ ಅವರಿಗೆ ಅಧ್ಯಕ್ಷ ಪೌಡೆಲ್ ಪ್ರಮಾಣವಚನ ಬೋಧಿಸಿದರು. ಸುಶೀಲಾ ಕರ್ಕಿ ಜೊತೆಗೆ, ಕಠ್ಮಂಡು ಮೇಯರ್ ಬಾಲೇಂದ್ರ ಶಾ, ವಿದ್ಯುತ್ ಮಂಡಳಿಯ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಧರಣ್‌ನ ಮೇಯರ್ ಹರ್ಕಾ ರಾಜ್ ಸಂಪಂಗ್ ರೈ, ಅಕಾ ಹರ್ಕಾ ಸಂಪಂಗ್ ಸೇರಿದಂತೆ ಇತರ ಮೂರು ಹೆಸರುಗಳನ್ನು ಸಹ ಪ್ರಧಾನಿ ಹುದ್ದೆಗೆ ಪರಿಗಣಿಸಲಾಗಿತ್ತು. ಆದರೆ, ಅಂತಿಮವಾಗಿ ಸುಶೀಲಾ ಕರ್ಕಿ ಪರ ಮತಗಳು ಹೆಚ್ಚು ಬಂದಿದ್ದರಿಂದ ಅವರನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ