AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಧ್ವಜಕ್ಕೆ ಅಗೌರವ, ಕೊನೆಗೂ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್​ ಸಚಿವೆ ಮರಿಯಮ್

ಮಾಲ್ಡೀವ್ಸ್‌(Maldives)ನ ಅಮಾನತುಗೊಂಡ ಸಚಿವೆ ಮರಿಯಮ್ ಶಿಯುನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುವ ಚಿತ್ರವನ್ನು ಹಂಚಿಕೊಂಡು ನಂತರ ಕ್ಷಮೆಯಾಚಿಸಿದ್ದಾರೆ. ಮರಿಯಮ್ ಶಿಯುನಾ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಡಳಿತ ಪಕ್ಷಕ್ಕೆ ಸೇರಿದವರು.

ಭಾರತದ ಧ್ವಜಕ್ಕೆ ಅಗೌರವ, ಕೊನೆಗೂ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್​ ಸಚಿವೆ ಮರಿಯಮ್
ಮರಿಯಮ್
ನಯನಾ ರಾಜೀವ್
|

Updated on:Apr 08, 2024 | 12:06 PM

Share

ಮಾಲ್ಡೀವ್ಸ್‌(Maldives)ನ ಅಮಾನತುಗೊಂಡ ಸಚಿವೆ ಮರಿಯಮ್ ಶಿಯುನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುವ ಚಿತ್ರವನ್ನು ಹಂಚಿಕೊಂಡು ನಂತರ ಕ್ಷಮೆಯಾಚಿಸಿದ್ದಾರೆ. ಮರಿಯಮ್ ಶಿಯುನಾ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಡಳಿತ ಪಕ್ಷಕ್ಕೆ ಸೇರಿದವರು.

ಮಾಲ್ಡೀವಿಯನ್ ಸಚಿವರ ಪೋಸ್ಟ್ ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಪಡೆಯಿತು. ಶಿಯುನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷ ಮುಯಿಝುಗೆ ಒತ್ತಾಯಿಸಿದರು. ಗಲಾಟೆಯ ನಂತರ, ಶಿಯುನಾ ಕ್ಷಮೆಯಾಚಿಸುವ ಮೊದಲು ಪೋಸ್ಟ್ ಅನ್ನು ಅಳಿಸಿದ್ದಾರೆ.

ನನ್ನ ಪೋಸ್ಟ್​ನಿಂದಾದ ಗೊಂದಲಕ್ಕಾಗಿ ನಾನು ಕ್ಷಮೆಯಚಿಸುತ್ತೇನೆ ಎಂದು ಎಕ್ಸ್​ನಲ್ಲಿ ಬರೆದಿದ್ದಾರೆ. 2024ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪ ಭೇಟಿ ನಂತರ ಮಾಲ್ಡೀವ್ಸ್​ ಸಚಿವರು ನರೇಂದ್ರ ಮೋದಿಯವರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಬಳಿಕ ಕಲಹದ ನಡುವೆ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಾಲ್ಡೀವ್ಸ್ ಸರ್ಕಾರದ ‘ಭಾರತ ವಿರೋಧಿ’ ನಿಲುವಿಗೆ ಅಲ್ಲಿನ ವಿರೋಧ ಪಕ್ಷಗಳು ಕೆಂಡಾಮಂಡಲ

ಈ ಘಟನೆ ಬಳಿಕವೂ ಮಾಲ್ಡೀವ್ಸ್​ಗೆ ಭಾರತವು ಪ್ರಮುಖ ಆರ್ಥಿಕ ಪಾಲುದಾರನಾಗಿಯೇ ಉಳಿದಿದೆ. ಆಮದುಗಳ ಪ್ರಮುಖ ಮೂಲವಾಗಿದೆ ಮತ್ತು ದ್ವೀಪ ರಾಷ್ಟ್ರಕ್ಕೆ ಅಕ್ಕಿ ಮತ್ತು ಔಷಧದಂತಹ ಅಗತ್ಯ ಸರಕುಗಳ ಪ್ರಮುಖ ಪೂರೈಕೆದಾರನೂ ಆಗಿದೆ. ಇತ್ತೀಚಿನ ಘಟನೆಗಳು ಮಾಲ್ಡೀವ್ಸ್‌ನಲ್ಲಿ ಭಾರತ ವಿರೋಧಿ ಭಾವನೆ ಹೆಚ್ಚುತ್ತಿದೆ ಎಂದು ಸೂಚಿಸುತ್ತವೆ.

ಮಾಲ್ಡೀವ್ಸ್ ಇತ್ತೀಚೆಗೆ ಅಲ್ಲಿ ನಿಯೋಜಿಸಲಾದ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಹಿಂದಿರುಗಿಸಲು ವಿನಂತಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:58 am, Mon, 8 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು