AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೊಳಗಾಗಿದ್ದಾರೆ.

ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು
ಶಾಲೆ
ನಯನಾ ರಾಜೀವ್
|

Updated on:Feb 05, 2025 | 9:03 AM

Share

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೊಳಗಾಗಿದ್ದಾರೆ.

ಗುಂಡಿನ ದಾಳಿಯ ನಂತರ ಶಾಲೆಯಲ್ಲಿ ಭದ್ರತೆ ಖಚಿತಪಡಿಸಿಕೊಳ್ಳಲು ಪೊಲೀಸರು ಇತರೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸ್ಥಳೀಯರು ಹತ್ತಿರ ಹೋಗದಂತೆ ಮನವಿ ಮಾಡಲಾಗಿದೆ. ಅಲ್ಲದೆ ತನಿಖೆ, ಭದ್ರತೆಗೆ ಸಂಬಂಧಿಸಿದ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕೂಡ ಹೇಳಿದ್ದಾರೆ.

ಶಸ್ತ್ರಸಜ್ಜಿತ ವ್ಯಕ್ತಿ ಒಬ್ಬರೇ ಈ ಕೆಲಸವನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಭಯೋತ್ಪಾದಕರ ಕೈವಾಡವಿದ್ದಂತೆ ತೋರುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.ರಾಜಧಾನಿ ಸ್ಟಾಕ್‌ಹೋಮ್‌ನಿಂದ ಪಶ್ಚಿಮಕ್ಕೆ 200 ಕಿಮೀ (124 ಮೈಲುಗಳು) ದೂರದಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸ್ವೀಡಷ್ ಇತಿಹಾಸದಲ್ಲಿ ನಡೆದ ಅತ್ಯಂತ ಕೆಟ್ಟ ಸಾಮೂಹಿಕ ಗುಂಡಿನ ದಾಳಿ ಎಂದು ಪ್ರಧಾನಿ ಉಲ್ಫ್​ ಕ್ರಿಸ್ಟಿರ್ಸನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ದಾಳಿ ಕೋರ ಕೂಡ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಆದರೆ ಅವನಿಗೆ ಯಾವುದೇ ಕ್ರಮಿನಲ್ ಹಿನ್ನೆಲೆ ಇದ್ದಂತೆ ಕಾಣುತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಹಲವು ಜನರು ಗಾಯಗೊಂಡಿದ್ದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:01 am, Wed, 5 February 25

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ