ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೊಳಗಾಗಿದ್ದಾರೆ.

ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು
ಶಾಲೆ
Follow us
ನಯನಾ ರಾಜೀವ್
|

Updated on:Feb 05, 2025 | 9:03 AM

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೊಳಗಾಗಿದ್ದಾರೆ.

ಗುಂಡಿನ ದಾಳಿಯ ನಂತರ ಶಾಲೆಯಲ್ಲಿ ಭದ್ರತೆ ಖಚಿತಪಡಿಸಿಕೊಳ್ಳಲು ಪೊಲೀಸರು ಇತರೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸ್ಥಳೀಯರು ಹತ್ತಿರ ಹೋಗದಂತೆ ಮನವಿ ಮಾಡಲಾಗಿದೆ. ಅಲ್ಲದೆ ತನಿಖೆ, ಭದ್ರತೆಗೆ ಸಂಬಂಧಿಸಿದ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕೂಡ ಹೇಳಿದ್ದಾರೆ.

ಶಸ್ತ್ರಸಜ್ಜಿತ ವ್ಯಕ್ತಿ ಒಬ್ಬರೇ ಈ ಕೆಲಸವನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಭಯೋತ್ಪಾದಕರ ಕೈವಾಡವಿದ್ದಂತೆ ತೋರುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.ರಾಜಧಾನಿ ಸ್ಟಾಕ್‌ಹೋಮ್‌ನಿಂದ ಪಶ್ಚಿಮಕ್ಕೆ 200 ಕಿಮೀ (124 ಮೈಲುಗಳು) ದೂರದಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸ್ವೀಡಷ್ ಇತಿಹಾಸದಲ್ಲಿ ನಡೆದ ಅತ್ಯಂತ ಕೆಟ್ಟ ಸಾಮೂಹಿಕ ಗುಂಡಿನ ದಾಳಿ ಎಂದು ಪ್ರಧಾನಿ ಉಲ್ಫ್​ ಕ್ರಿಸ್ಟಿರ್ಸನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ದಾಳಿ ಕೋರ ಕೂಡ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಆದರೆ ಅವನಿಗೆ ಯಾವುದೇ ಕ್ರಮಿನಲ್ ಹಿನ್ನೆಲೆ ಇದ್ದಂತೆ ಕಾಣುತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಹಲವು ಜನರು ಗಾಯಗೊಂಡಿದ್ದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:01 am, Wed, 5 February 25

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ